ಉತ್ತರಾಖಂಡದ ನೀತಿ ಕಣಿವೆಯಲ್ಲಿ ಮತ್ತೆ ಹಿಮ ಸ್ಪೋಟ: ಹೈ ಅಲರ್ಟ್‌ ಘೋಷಣೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮತ್ತೆ ಹಿಮಸ್ಫೋಟ ಉಂಟಾಗಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಭಾರತ–ಚೀನಾ ಗಡಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಭಾರಿ ಹಿಮ ಸ್ಫೋಟ ಸಂಭವಿಸಿದೆ. ಈ ಬಗ್ಗೆ ಉತ್ತರಾಖಂಡದ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಹಾಗೂ ಬೇಕಾದ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಅಲ್ಲದೆ, ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದು, ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಯೊಬ್ಬರು, ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಭಾರತ-ಚೀನಾ ಗಡಿಯಲ್ಲಿ ದೊಡ್ಡ ಹಿಮನದಿ ಸ್ಫೋಟಗೊಂಡಿದೆ. ಈ ಹಿಮನದಿ ಐಟಿಬಿಪಿಯ 8 ಬಿಎನ್ ಪೋಸ್ಟ್ ಬಳಿ ಮಲಾರಿ ಮತ್ತು ಸುಮ್ನಾ ನಡುವಿನ ಬಳಿ ಸ್ಫೋಟಗೊಂಡಿದೆ. ಇದು ತುಂಬಾ ದೊಡ್ಡದಾಗಿದ್ದು, ಇದರಿಂದಾಗಿ ದೊಡ್ಡ ಅಪಘಾತವೂ ಸಂಭವಿಸಬಹುದು ಎಂದು ತಿಳಿಸಿದ್ದಾರೆ. ಇದುವರೆಗೂ ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗಳ ನಷ್ಟದ ಬಗ್ಗೆ ವರದಿಯಾಗಿಲ್ಲ. , ಐಟಿಬಿಪಿ ಯೋಧರು ಜಾಗರೂಕರಾಗಿದ್ದಾರೆ ಮತ್ತು ತಗ್ಗು ಪ್ರದೇಶಗಳ ಮೇಲೆ ನಿಗಾ ಇಡಲಾಗುತ್ತಿದೆ. ಮೂಲಗಳ ಪ್ರಕಾರ ಸಂಭವಿಸಿದ ಸುಮನ ಪ್ರದೇಶದಿಂದ 40 ಕಿ.ಮೀ ದೂರದಲ್ಲಿ ಹಳ್ಳಿಗಳಿದೆ ಎನ್ನಲಾಗಿದೆ. ಫೆಬ್ರವರಿ 7ರಂದು ಚಮೋಲಿ ಜಿಲ್ಲೆಯ ಜೋಶಿಮಠ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಸಂಭವಿಸಿದ್ದ ಹಿಮ ಸ್ಫೋಟದಲ್ಲಿ 204 ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ 80 ಮಂದಿಯ ಮೃತದೇಹ ಪತ್ತೆಯಾಗಿತ್ತು. 124 ಮಂದಿ ಇನ್ನು ನಾಪತ್ತೆಯಾಗಿದ್ದಾರೆ. ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿ ಸಂಭವಿಸಿ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು.


from India & World News in Kannada | VK Polls https://ift.tt/32WxFlj

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...