ವೀಕೆಂಡ್ ಕರ್ಫ್ಯೂ: ಬೆಂಗಳೂರಿನಲ್ಲಿ ಹೇಗಿದೆ ಪರಿಸ್ಥಿತಿ? ಇಲ್ಲಿದೆ ಮಾಹಿತಿ

ಬೆಂಗಳೂರು: ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಶನಿವಾರ ಹಾಗೂ ಭಾನುವಾರ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು ಇಡೀ ನಗರ ಬಹುತೇಕ ಸ್ಥಬ್ಧಗೊಂಡಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಮುಚ್ಚಲಾಗಿದ್ದು ಅನಗತ್ಯ ಓಡಾಟಕ್ಕೆ ಪೊಲೀಸರು ಬ್ರೇಕ್ ಹಾಕುತ್ತಿದ್ದಾರೆ. ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಸದಾ ಜನಜಂಗುಳಿಯಿಂದ ತುಂಬಿರುವ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಬಿಕೋ ಅನ್ನಿಸುತ್ತಿತ್ತು. ಐದಾರು ಬಸ್‌ಗಳನ್ನು ಅಗತ್ಯ ಸೇವೆಗೆ ಎಂದು ನಿಯೋಜನೆ ಮಾಡಲಾಗಿದೆ. ವೈದ್ಯಕೀಯ ಸಿಬ್ಬಂದಿಗೆ ಹಾಗೂ ಸರ್ಕಾರಿ ಸಿಬ್ಬಂದಿಗೆ ಪ್ರಯಾಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಬಸ್ ಸಿಬ್ಬಂದಿ ತಿಳಿಸುತ್ತಾರೆ ಇನ್ನು ಕೆಎಸ್‌ಆರ್‌ಟಿಸಿ ಬಸ್‌ಗಳ ಓಡಾಟಕ್ಕೆ ನಿರ್ಬಂಧ ಇಲ್ಲದೆ ಇದ್ದರೂ ಸಂಖ್ಯೆ ಸಾಕಷ್ಟು ಕಡಿಮೆ ಇದೆ. ಇತರ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿಲ್ಲ. ಮೈಸೂರು, ಮಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಗೆ ಮೆಜೆಸ್ಟಿಕ್ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಹಾಗೂ ಸ್ಯಾಟಲೈಟ್ ಬಸ್‌ ನಿಲ್ದಾಣದಿಂ ಬಸ್‌ ಸಂಚಾರ ನಡೆಯುತ್ತಿದೆ. ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತ ಮೆಡಿಕಲ್‌ ಹಾಗೂ ತುರ್ತು ಸೇವೆ ಹೊರತಾಗಿ ಇತರ ಎಲ್ಲಾ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿವೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಅದರಂತೆ ಬೆಳಗ್ಗೆ ಜನರ ಓಡಾಟ ಸ್ವಲ್ಪ ಇತ್ತು. ಬೇಗ ಬೇಗನೇ ಅಗತ್ಯ ಸಾಮಾಗ್ರಿಗಳನ್ನು ಜನರು ಖರೀದಿಸಿದರು. 10 ಗಂಟೆಯ ಬಳಿಕ ಎಲ್ಲಾ ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಜನರ ಹಾಗೂ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿದರು. ಇದರಿಂದ ಬೆಂಗಳೂರು ನಗರ ಸಂಪೂರ್ಣ ಬಿಕೋ ಅನ್ನಿಸುತ್ತಿದೆ. ಈ ಹಿಂದಿನ ಲಾಕ್‌ಡೌನ್ ಮಾದರಿಯಲ್ಲೇ ನಗರದ ವಾತಾವರಣ ಕಂಡು ಬರುತ್ತಿದೆ. ಪೊಲೀಸರ ಜೊತೆಗೆ ವಾಗ್ದಾದ ಬೆಳಗ್ಗೆ 10 ಗಂಟೆಯ ನಂತರದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ಬೆಂಗಳೂರು ನಗರ ನಿಶಬ್ಧಗೊಂಡಿದೆ. ಕೇವಲ ತುರ್ತು ಸಂದರ್ಭದಲ್ಲಿ ಜನರಿಗೆ ರಸ್ತೆಗಿಳಿಯಲು ಅವಕಾಶವಿದೆ. ಆಸ್ಪತ್ರೆಗೆ, ವಿಮಾನ ನಿಲ್ದಾಣಕ್ಕೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಅವರು ತಮ್ಮ ದಾಖಲೆಗಳನ್ನು ತೋರಿಸಬೇಕಿದೆ. ಇಲ್ಲದೆ ಇದ್ದರೆ ಓಡಾಟ ನಡೆಸಲು ಅವಕಾಶ ನೀಡುತ್ತಿಲ್ಲ. ಬದಲಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡಿ ಹಾಕಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ. ಪರಿಣಾಮ ಅಲ್ಲಲ್ಲಿ ಪ್ರಯಾಣಿಕರು ಪೊಲೀಸರ ಜೊತೆಗೆ ವಾಗ್ವಾದ ನಡೆಸುತ್ತಿರುವ ದೃಶ್ಯಗಳು ಕಂಡು ಬಂತು. ಕೆಲವು ಪೊಲೀಸರು ಅನಗತ್ಯವಾಗಿ ತೊಂದರೆ ಕೊಡುತ್ತಿದ್ದಾರೆ ಎಂಬ ಆರೋವನ್ನು ಜನರು ಮಾಡುತ್ತಿದ್ದರು. ಕರ್ಫ್ಯೂ ಉಲ್ಲಂಘನೆ ಮಾಡಿದರೆ ವಾಹನ ಸೀಝ್ ಇನ್ನು ಕೋವಿಡ್ ಕರ್ಫ್ಯೂ ಉಲ್ಲಂಘನೆ ಮಾಡಿದರೆ ವಾಹನಗಳನ್ನು ಸೀಝ್ ಮಾಡುವ ಎಚ್ಚರಿಕೆಯನ್ನು ಕೊಡಲಾಗಿತ್ತು. ಅದರಂತೆ ವಿನಾ ಕಾರಣ ರಸ್ತೆಗಿಳಿದ ಹಾಗೂ ಸೂಕ್ತ ದಾಖಲೆ ತೋರಿಸದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಪೊಲೀಸ್ ಆಗ್ನೇಯ ವಿಭಾಗದಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘನೆ ಮಾಡಿದ್ದಕ್ಕೆ ಒಟ್ಟು 105 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಪೈಕಿ 93 ದ್ವಿಚಕ್ರ ವಾಹನಗಳು ಮೂರು ತ್ರಿಚಕ್ರ ವಾಹನಗಳು ಹಾಗೂ 9 ನಾಲ್ಕು ಚಕ್ರದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟಿನಲ್ಲಿ ವೀಕೆಂಡ್‌ ಕರ್ಪ್ಯೂ ಬೆಂಗಳೂರು ನಗರದಲ್ಲಿ ಪಾಲನೆಯಾಗಿದೆ. ಜನರು ಸರ್ಕಾರದ ನಿಯಮಾವಳಿಗಳನ್ನು ಪಾಲನೆ ಮಾಡಿದ್ದಾರೆ. ಕೆಲವು ಕಡೆಗಳಲ್ಲಿ ಅನಗತ್ಯವಾಗಿ ಜನರು ರಸ್ತೆಯಲ್ಲಿ ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದರ ಹೊರತಾಗಿ ಮನೆಯಲ್ಲೇ ಇದ್ದುಕೊಂಡು ಕೋವಿಡ್‌ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ.


from India & World News in Kannada | VK Polls https://ift.tt/3u0FfH6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...