ಕೋವಿಡ್‌ ಆತಂಕ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮುಂದೂಡಿ, ಸರ್ಕಾರಕ್ಕೆ ಜನರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮಿತಿ ಮೀರಿ ಹರಡುತ್ತಿದೆ. ಈ ನಡುವೆ 12 ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಿದ್ದು ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡುವಂತೆ ಒತ್ತಡ ಹೆಚ್ಚಾಗಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಗ್ರಾಮೀಣ ಭಾಗದ ಸುಮಾರು 3.5 ಕೋಟಿ ಮತದಾರರು ಭಾಗಿಯಾಗುವ ಸಾಧ್ಯತೆ ಇದೆ. ಇದು ಕೋವಿಡ್‌ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯಕಾರಿಯಾಗಿ ತಲೆಧೋರಬಹುದು. ಈ ನಿಟ್ಟಿನಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂಬ ಆಗ್ರಹ ತೀವ್ರಗೊಂಡಿದೆ. ಈ ಕುರಿತಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆದಿದ್ದು ಚುನಾವಣೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪ್ರಸ್ತುತ ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ಶರವೇಗದಲ್ಲಿ ಹರಡುತ್ತಿದ್ದು ತಮಗೆ ತಿಳಿದೇ ಇರುತ್ತದೆ. ಇದೇ ಸಂದರ್ಭದಲ್ಲಿ ರಾಜ್ಯದ 12 ನಗರ ಸ್ಥಳೀಯ ಸಂಸ್ಥೆಗಳ (2 ಉಪಚುನಾವಣೆ ಸೇರಿ) ಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗವು ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆಯು ತೀವ್ರ ಸ್ವರೂಪದಲ್ಲಿ ಕಾಡುತ್ತಿದೆ. ಜನರ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ ಮತ್ತು ಮತ್ತು ಈ ಕಾಯಿಲೆಗೆ ಒಳಪಟ್ಟವರ ಸಾವಿನ ಸಂಖ್ಯೆ ದಿನೇದಿನೇ ಏರುತ್ತಿದೆ. ಇದೇ ಸಂದರ್ಭದಲ್ಲಿ ಚುನಾವಣೆಗಳು ನಡೆಯುತ್ತಿರುವುದರಿಂದ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರುಗಳು ಅನಿವಾರ್ಯವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿ ಮತ್ತು ಈ ಸಂದರ್ಭದಲ್ಲಿ ಮತದಾರರೊಂದಿಗೆ ಸಮಾಲೋಚನೆ ನಡೆಸುವುದು ಅನಿವಾರ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಅನಿವಾರ್ಯವಾಗಿ ತಮಗೆ ತಿಳಿಯದೆ ಕೋವಿಡ್‌ ಹರಡಲು ಕಾರಣವಾಗುತ್ತದೆ. ಹಾಗೆಯೇ, ಕೋವಿಡ್ ಬಂದಿರುವ ಸಾಧ್ಯತೆ ಇದ್ದು ಕೂಡ ಆ ಬಗ್ಗೆ ತಿಳಿದಿದ್ದರೂ ಪರೀಕ್ಷೆ ಮಾಡಿಸಿಕೊಳ್ಳದೆ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಹೆಚ್ಚು ಗಮನ ನೀಡಿ ಕೆಲವು ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದರೆ ಅದು ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ. ಹಾಗೆಯೇ ಪ್ರಚಾರ ಕಾರ್ಯಕ್ಕೆ ರಾಜಕೀಯ ಪಕ್ಷಗಳ ಮುಖಂಡರು ಒಂದು ಊರಿನಿಂದ ಮತ್ತೂಂದು ಊರಿಗೆ ಓಡಾಡಿ ಪ್ರಚಾರ ಕಾರ್ಯದಲ್ಲಿ ತೊಡಗುತ್ತಾರೆ, ಮತ್ತು ಇವರನ್ನು ನಿಯಂತ್ರಿಸುವುದು ಅಸಾಧ್ಯ. ಈಗಾಗಲೇ ದೇಶದ ಅನೇಕ ಕಡೆ ಲಾಕ್‌ಡೌನ್ ಮಾಡಲಾಗಿದ್ದು, ರಾಜ್ಯದಲ್ಲಿ ಚುನಾವಣೆಗಳ ಕಾರಣಕ್ಕಾಗಿಯೇ ರಾಜ್ಯ ಸರ್ಕಾರವು ಹಲವಾರು ಕಡೆ ಕಠಿಣ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯದ ಬಗ್ಗೆ ಖಾಳಜಿ ವಹಿಸಿ, ಚುನಾವಣಾ ಆಯೋಗಕ್ಕೆ ಇರುವ ವಿಶೇಷಾಧಿಕಾರ ಬಳಸಿ, ಈ ಮೇಲಿನ ಕಾರಣಗಳಿಗಾಗಿ ಪ್ರಸ್ತುತ ಬಳ್ಳಾರಿ, ಗುಡಿಬಂಡೆ, ವಿಜಯಪುರ, ರಾಮನಗರ, ಚನ್ನಪಟ್ಟಣ, ಮಡಿಕೇರಿ, ಬೇಲೂರು, ಭದ್ರಾವತಿ, ತೀರ್ಥಹಳ್ಳಿ, ಬೀದರ್, ಹಿರೇಕೆರೂರು ಮತ್ತು ಹಳ್ಳಿಖೇಡ ನಗರ ಸ್ಥಳೀಯ ಸಂಸ್ಥೆಗಳ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆಯ ನಂತರದ ಎಲ್ಲಾ ಚುನಾವಣಾ ಪ್ರಕ್ರಿಯೆಗಳನ್ನು ಮುಂದೂಡಿ ರವಿ ಕೃಷ್ಣಾರೆಡ್ಡಿ ಮನವಿ ಮಾಡಿದ್ದಾರೆ. ಚುನಾವಣೆ ಮುಂದೂಡಲು ಚಿಂತನೆ - ಈಶ್ವರಪ್ಪ ಇನ್ನು ಕೋವಿಡ್‌ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದಿದ್ದಾರೆ. ಈ ಬಗ್ಗೆ ಚರ್ಚಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಒತ್ತಡ ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಚುನಾವಣೆ ಮುಂದೂಡುವಂತೆ ಒತ್ತಡ ಹೆಚ್ಚಾಗಿದೆ. ಕೋವಿಡ್‌ ವಿಪರೀತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಕೋವಿಡ್‌ ನಗರ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಆದರೆ ಚುನಾವಣೆ ನಡೆದರೆ ಗ್ರಾಮೀಣ ಭಾಗಗಳಲ್ಲೂ ಕೋವಿಡ್‌ ಹರಡಲು ಸರ್ಕಾರವೇ ಅವಕಾಶ ನೀಡದಂತಾಗುತ್ತದೆ. ಈ ನಿಟ್ಟಿನಲ್ಲಿ ಚುನಾವಣೆ ಮುಂದೂಡುವುದು ಒಲಿತು ಎಂದು ಸಲಹೆಗಳು ವ್ಯಕ್ತವಾಗುತ್ತಿವೆ. ಸರ್ಕಾರವೂ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ.


from India & World News in Kannada | VK Polls https://ift.tt/3ap2XW0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...