ಕೊರೊನಾ ಹೆಚ್ಚಳ: ಕೊಲ್ಕತ್ತಾದಲ್ಲಿ ಚುನಾವಣಾ ಪ್ರಚಾರ ರದ್ದುಗೊಳಿಸಿದ ಸಿಎಂ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ಬೆನ್ನಲ್ಲೇ ಕೊಲ್ಕತ್ತಾದಲ್ಲಿ ನಡೆಸೋದಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಬಗ್ಗೆ ಟಿಎಂಸಿ ಸಂಸದ ಡೆರೇಕ್ ಓಬ್ರಿಯಾನ್ ಟ್ವಿಟ್ಟರ್‌ ಮೂಲಕ ಖಾತ್ರಿ ಪಡಿಸಿದ್ದಾರೆ. ಮಮತಾ ದೀದಿ ಕೊಲ್ಕತ್ತಾದಲ್ಲಿ ಯಾವುದೇ ಚುನಾವಣಾ ಪ್ರಚಾರ ನಡೆಸೋದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಪ್ರಚಾರಕ್ಕೆ ತೆರೆ ಬೀಳುವ ಕೊನೆ ದಿನ ಸಾಂಕೇತಿಕ ವರ್ಚುವಲ್‌ ಸಭೆ ನಡೆಸುವುದಾಗಿ ಅವರು ತಿಳಿಸಿದ್ದಾರೆ. ಇನ್ನು ಕೊಲ್ಲತ್ತಾ ಹೊರತು ಪಡಿಸಿ ಬೇರೆ ಜಿಲ್ಲೆಗಳಲ್ಲಿ ಟಿಎಂಸಿಯ ಎಲ್ಲ ಚುನಾವಣಾ ಸಮಾವೇಶಗಳನ್ನು ಅರ್ಧ ಗಂಟೆಗೆ ಮೊಡಕುಗೊಳಿಸಲಾಗಿದೆ. ಕೇವಲ 30 ನಿಮಿಷ ಮಾತ್ರ ಎಲ್ಲ ಸಭೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ. ಒಂದೇ ದಿನ ದಾಖಲೆಯ ಕೊರೊನಾ ಸೋಂಕು ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗಿದ್ದರಿಂದ ಟಿಎಂಸಿ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಜನರ ಆರೋಗ್ಯದ ಕಾಳಜಿಯಿಂದ ಈ ಕ್ರಮಕ್ಕೆ ಮುಂದಾಗಿದೆ. ಇನ್ನು ಮೂರು ಹಂತಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ. ಇನ್ನು ತಾನು ಯಾವುದೇ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಭಾನುವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಘೋಷಿಸಿದ್ದರು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್‌ ಸೋಂಕು ಹಾವಳಿಯ ಬಿಸಿ ಈಗ ಪಶ್ಚಿಮ ಬಂಗಾಳದ ಚುನಾವಣೆಗೆ ಬಲವಾಗಿ ತಟ್ಟಿದೆ. ಉಳಿದ ಹಂತಗಳ ಚುನಾವಣಾ ಪ್ರಚಾರದಿಂದ ತಾನು ಹಿಂದೆ ಸರಿಯುವುದಾಗಿ ಎಡರಂಗ ಘೋಷಿಸಿದ್ದು, ಕಾಂಗ್ರೆಸ್‌ ಕೂಡ ಇದೇ ಹಾದಿ ತುಳಿದಿದೆ. ಪ್ರತಿಷ್ಠಿತ ಭವಾನಿಪುರ ಕ್ಷೇತ್ರದ ಟಿಎಂಸಿ ಅಭ್ಯರ್ಥಿಯಾಗಿರುವ ತೃಣಮೂಲ ಕಾಂಗ್ರೆಸ್‌ ಸಚಿವ ಸೋಭದೆಬ್‌ ಚಟ್ಟೋಪಾಧ್ಯಾಯ, ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ರಾರ‍ಯಲಿಗಳನ್ನು ನಡೆಸದಿರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.


from India & World News in Kannada | VK Polls https://ift.tt/3x7f5Vd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...