: ಬಳ್ಳಾರಿಯ ಮುಸ್ಲಿಂ ಕುಟುಂಬವೊಂದು ಕೊಲ್ಲೂರು ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಚಂಡಿಕಾಹೋಮ ನೆರವೇರಿಸುವ ಮೂಲಕ ಗಮನಸೆಳೆದಿದೆ. ಕಳೆದ ಹಲವು ವರ್ಷಗಳಿಂದ ವರ್ಷಕ್ಕೊಮ್ಮೆ ಕ್ಷೇತ್ರ ದರ್ಶನ ಮಾಡಿಕೊಂಡು ಬರುತ್ತಿರುವ ಎಚ್.ಇಬ್ರಾಹಿಂ ಎಂಬವರ ಕುಟುಂಬ ಚಂಡಿಕಾಹೋಮ ನೆರವೇರಿಸುವ ವಾಡಿಕೆ ಇರಿಸಿಕೊಂಡಿದ್ದು, ಕಳೆದ 5 ವರ್ಷಗಳಿಂದ ಅವರ ಪುತ್ರ ಮನ್ಸೂರ್ ಅಹಮ್ಮದ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಗುತ್ತಿಗೆದಾರರಾಗಿದ್ದ ಎಚ್.ಇಬ್ರಾಹಿಂ ಮೂಲತಃ ಶಿವಮೊಗ್ಗದವರಾಗಿದ್ದು ದೇವಿಯ ಭಕ್ತರು. ಅವರ ಕಿರಿಯ ಪುತ್ರ ಮನ್ಸೂರ್ ಪತ್ನಿ ಮತ್ತು ಮಕ್ಕಳೊಂದಿಗೆ ಗುರುವಾರ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಾಡಿಕೆಯಂತೆ ಚಂಡಿಕಾಹೋಮ ನೆರವೇರಿಸಿ ಶ್ರೀದೇವರ ಆಶೀರ್ವಾದ ಪಡೆದಿದ್ದಾರೆ. ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಮನ್ಸೂರ್ ಅವರು, ಹಿರಿಯರ ಸೇವೆ, ತಾಯಿ ಮೂಕಾಂಬಿಕೆಯ ಅನುಗ್ರಹದಿಂದ ಬದುಕಿನಲ್ಲಿ ಶ್ರೇಯಸ್ಸಾಗಿದೆ. ತಂದೆಯವರು ನಡೆಸಿಕೊಂಡು ಬಂದಿದ್ದ ಪರಂಪರೆ ನಾನು ಮುಂದುವರಿಸಿಕೊಂಡು ಹೋಗುತ್ತಿದ್ದೇನೆ. ಸೇವೆಗೆ ತಾಯಿ ಅನುಗ್ರಹವೇ ಕಾರಣ ಎಂದು ಹೇಳಿದ್ದಾರೆ.
from India & World News in Kannada | VK Polls https://ift.tt/3eaSuyu