‘ನನಗೆ ಅಧಿಕಾರದ ಆಸೆಯಿಲ್ಲ, ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ನೀಡಬೇಕು’; ಆನಂದ್‌ ಸಿಂಗ್

ಬಳ್ಳಾರಿ: ಜಿಲ್ಲೆಯ ಉಸ್ತುವಾರಿಯನ್ನು ಸಚಿವ ಬಿ.ಶ್ರೀರಾಮುಲು ಅವರಿಗೆ ನೀಡುವಂತೆ ಸಿಎಂ ಅವರಿಗೆ ಮನವಿ ಮಾಡಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಹೇಳಿದರು. ನಗರದಲ್ಲಿ ಪಾಲಿಕೆ ಚುನಾವಣೆಯ ಪ್ರಚಾರಕ್ಕೆ ಬುಧವಾರ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನನಗೆ ಅಧಿಕಾರದ ಆಸೆಯಿಲ್ಲ. ಬಿ.ಶ್ರೀರಾಮುಲು ಕೇವಲ ಜಿಲ್ಲಾ ನಾಯಕರಲ್ಲ, ಅವರು ರಾಜ್ಯ ಮಟ್ಟದ ನಾಯಕರಾಗಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ಕೊಡುವ ಬಗ್ಗೆ ವರಿಷ್ಠರು ಬೇಗ ತೀರ್ಮಾನ ಮಾಡಬೇಕು. ಜಿಲ್ಲಾ ಉಸ್ತುವಾರಿಯನ್ನು ಆದಷ್ಟು ಬೇಗ ಶ್ರೀರಾಮುಲು ಅವರಿಗೆ ಉಸ್ತುವಾರಿ ಕೊಡುವಂತೆ ಮನವಿ ಮಾಡಲಾಗುವುದು ಎಂದರು. ಅಲ್ಲದೇ ಕಾಂಗ್ರೆಸ್‌ ಪಕ್ಷ ಗ್ರಾಮ, ನಗರ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಎಲ್ಲೂಅಧಿಕಾರಕ್ಕೆ ಬರುವುದಿಲ್ಲ ಎಂದ , ಆ ಪಕ್ಷದಲ್ಲಿ ಸೂಕ್ತ ನಾಯಕತ್ವವಿಲ್ಲದೇ ಒಡೆದ ಮನೆಯಾಗಿದೆ. ಸೀಟ್‌ ಖಾಲಿಯಾದರೆ ಸಾಕು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ನಡೆದ ಉಪ ಚುನಾವಣೆ ಪಲಿತಾಂಶದಿಂದ ಕಾಂಗ್ರೆಸ್‌ನವರ ಟೀಕೆಗೆ ತಕ್ಕ ಉತ್ತರ ಸಿಗಲಿದೆ ಎಂದರು. ಸಚಿವ ಬಿ.ಶ್ರೀರಾಮುಲು ಮಾತನಾಡಿ, ಕೊರೊನಾದಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯಪಾಲರು ಸಭೆ ಕರೆಯಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ, ಈ ನಡೆಯನ್ನು ಡಿ.ಕೆ.ಶಿವಕುಮಾರ್‌ ಅವರು ಸ್ವಾಗತಿಸಿದರೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿರೋಧಿಸಿದ್ದಾರೆ. ಅವರಲ್ಲಿಯೇ ಹೊಂದಾಣಿಕೆಯಿಲ್ಲ. ಡಿಕೆಶಿ ಅವರು ಕೊರೊನಾ ನಿರ್ವಹಣೆಗೆ ಹಣ ಮೀಸಲಿಡುವಂತೆ ಸಲಹೆ ಕೊಟ್ಟಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಬಾಯಿ ಚಪಲಕ್ಕಾಗಿ ಏನೇನೊ ಹೇಳಿಕೆ ನೀಡುತ್ತಿದ್ದಾರೆ. ಇದು ಜನರಿಗೆ ಗೊತ್ತಾಗದಿರುವ ವಿಷಯವಲ್ಲ. ರಾಜ್ಯದ ಜನತೆಗೆ ತೊಂದರೆಯಾಗದಂತೆ ಸರಕಾರ ನೋಡಿಕೊಳ್ಳಲಿದೆ ಎಂದು ತಿಳಿಸಿದರು. ಪಾಲಿಕೆ ಪ್ರಚಾರದಲ್ಲಿ ನೂರಾರು ಜನ ಸೇರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಾನಗರ ಪಾಲಿಕೆ ಚುನಾವಣೆ ಪ್ರಚಾರಕ್ಕೆ ನಾವೆಲ್ಲ ಬಂದಿದ್ದೇವೆ ಎಂದು ಸಾಕಷ್ಟು ಜನ ಸೇರುತ್ತಿದ್ದಾರೆ. ಹೀಗಾಗಿ ಕಾರ್ಯಕರ್ತರಿಗೆ ವಾಪಸ್‌ ಹೋಗುವಂತೆ ಹೇಳಿದ್ದೇವೆ. ಎಲ್ಲರೂ ಮಾಸ್ಕ್‌ ಧರಿಸುವಂತೆ ತಿಳಿಸಿದ್ದೇವೆ ಎಂದು ಹೇಳಿದರು.


from India & World News in Kannada | VK Polls https://ift.tt/3aN10mz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...