ಬೆಂಗಳೂರು: ದೇಶದಾದ್ಯಂತ ಕೋವಿಡ್ ಸ್ಥಿತಿ ಉಲ್ಬಣಗೊಳ್ಳುತ್ತಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಹತ್ತು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ರಾಜ್ಯದ ಸ್ಥಿತಿಗತಿಗಳ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿಗೆ ವಿವರ ನೀಡಲಿದ್ದಾರೆ. ಶುಕ್ರವಾರ 10 ಗಂಟೆಗೆ ವಿಡಿಯೋ ಸಂವಾದ ಆರಂಭಗೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದದಲ್ಲಿ ಕೋವಿಡ್ ಪರಿಸ್ಥಿತಿ ಹೇಗಿದೆ ಹಾಗೂ ಸರ್ಕಾರ ಏನೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂಬ ಮಾಹಿತಿಯನ್ನು ಅವರು ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಜೊತೆಗೆ ಸಿಎಂ ಬಿಎಸ್ವೈ ತಮ್ಮ ಕಾವೇರಿ ನಿವಾಸದಲ್ಲಿ ಚರ್ಚೆ ನಡೆಸಿದ್ದಾರೆ. ಕೋವಿಡ್ ಸೋಂಕಿತರ ಸಂಕ್ಯೆ, ಬೆಡ್ಗಳ ಸಮಸ್ಯೆ, ಕೋವಿಡ್ ಲಸಿಕೆ ಅಭಿಯಾನ ಹಾಗೂ ಆಕ್ಸಿಜನ್ ಕೊರತೆ ಸೇರಿದಂತೆ ಇನ್ನಿತರ ಹಲವು ಮಾಹಿತಿಗಳನ್ನು ಅವರು ಪಡೆದುಕೊಂಡಿದ್ದಾರೆ. ಇವೆಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿಗೆ ಅವರು ನೀಡಲಿದ್ದಾರೆ. ಸದ್ಯ ರಾಜ್ಯದಲ್ಲಿ ಅಘೋಷಿತ ಲಾಕ್ಡೌನ್ ಪರಿಸ್ಥಿತಿ ಇದೆ. ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದ ಅಂಗಡಿ ಮುಂಗಟ್ಟುಗನ್ನು ಬಂದ್ ಮಾಡಲಾಗಿದೆ. ಕೋವಿಡ್ ನಿಯಂತ್ರಣ ಮೀರಿ ಹರಡುತ್ತಿರುವುದರಿಂದ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಸದ್ಯ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ ರೆಮ್ಡಿಸಿವಿರ್ ಚುಚ್ಚುಮದ್ದಿಗಾಗಿ ಹಾಹಾಕಾರ ತಲೆಧೋರಿಸಿದೆ. ಈ ನಿಟ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ಈ ವಿಡಿಯೋ ಸಂವಾದ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
from India & World News in Kannada | VK Polls https://ift.tt/3vqINDd