ಐಎಸ್‌ಐ ಜೊತೆ ಮಾತನಾಡುವ ಸರ್ಕಾರ ವಿಪಕ್ಷಗಳ ಜೊತೆ ಮಾತನಾಡುತ್ತಿಲ್ಲ: ಪ್ರಿಯಾಂಕಾ ಕಿಡಿ!

ಹೊಸದಿಲ್ಲಿ: ಕೊರೊನಾ ಎರಡನೇ ಅಲೆ ತಡೆಗಟ್ಟುವ ಕುರಿತು ವಿಪಕ್ಷಗಳು ನೀಡಿರುವ ಸಲಹೆಗಳನ್ನು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್‌ಐ ಜೊತೆ ಮಾತನಾಡುತ್ತದೆ. ಆದರೆ ಕೊರೊನಾ ತೊಲಗಿಸಲು ವಿಪಕ್ಷಗಳ ಜೊತೆ ಸಂವಾದ ನಡೆಸುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹರಿಹಾಯ್ದರು. ದುಬೈನಲ್ಲಿ ಐಎಸ್‌ಐ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ದೆಹಲಿಯಲ್ಲಿ ವಿಪಕ್ಷಗಳೊಂದಿಗೆ ಚರ್ಚೆ ನಡೆಸಿ ಸಲಹೆಗಳನ್ನು ಪಡೆಯಲು ಅದಕ್ಕೆ ಪ್ರತಿಷ್ಠೆ ಅಡ್ಡಿ ಬರುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದರು. ದೇಶದಲ್ಲಿ ಅಸ್ತಿತ್ವದಲ್ಲಿರುವ ಯಾವುದೇ ಪ್ರತಿಪಕ್ಷ ಅಥವಾ ಪ್ರತಿಪಕ್ಷ ನಾಯಕ ಕೊರೊನಾ ಅಲೆ ತಡೆಗಟ್ಟುವ ಕುರಿತು ಕೇಂದ್ರ ಸರ್ಕಾರಕ್ಕೆ ರಚನಾತ್ಮಕ ಮತ್ತು ಸಕಾರಾತ್ಮಕ ಸಲಹೆಗಳನ್ನು ನೀಡು ನಿರಾಕರಿಸಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು. ವಿಪಕ್ಷಗಳ ಬಳಿ ಹಲವು ರಚನಾತ್ಮಕ ಮತ್ತು ಸಕಾರಾತ್ಮಕ ಸಲಹೆಗಳಿದ್ದು, ಮೋದಿ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ಈ ಸಲಹೆಗಳನ್ನು ಸ್ವೀಕರಿಸಬೇಕಿದೆ ಎಂದು ಪ್ರಿಯಾಂಕಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ಎರಡನೇ ಅಲೆ ಕುರಿತು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರು, ವಿಪಕ್ಷಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ಈ ಯುದ್ಧ ಗೆಲ್ಲಲು ಸಾಧ್ಯವಿಲ್ಲ ಎಂದು ಕಿವಿಮಾತು ಹೇಳಿದ್ದಾರೆ. ಈಗಾಗಲೇ ಕೊರೊನಾ ಎರಡನೇ ಅಲೆ ಎದುರಿಸಲು ಕೊರೊನಾ ಲಸಿಕೆ ರಫ್ತು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಇದೇ ಆಗ್ರಹ ಮಾಡಿದ್ದಾರೆ. ಅಲ್ಲದೇ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕೂಡ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಕೊರೊನಾ ಅಲೆ ತಡೆಗಟ್ಟಲು ಐದು ಅಂಶಗಳ ಸಲಹಾ ಪಟ್ಟಿಯನ್ನು ನೀಡಿರುವುದನ್ನು ಇಲ್ಲಿ ಗಮನಿಸಬಹುದು.


from India & World News in Kannada | VK Polls https://ift.tt/3tCSFcm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...