ಕೋವಿಡ್‌ನಿಂದಾಗಿ ಸಂಕಷ್ಟದಲ್ಲಿ ಪ್ರವಾಸೋದ್ಯಮ, ಅಭಿವೃದ್ದಿಗೆ ವೇಗ ಕೊಡಲು ಮಾಸ್ಟರ್‌ ಪ್ಲ್ಯಾನ್!

ಬೆಂಗಳೂರು: ಕೋವಿಡ್‌ ಸಂಕಷ್ಟದಿಂದಾಗಿ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದು ಈ ಕ್ಷೇತ್ರ ಸಂಕಷ್ಟದಲ್ಲಿದೆ. ಈ ನಿಟ್ಟಿನಲ್ಲಿ ಮತ್ತೆ ಚಟುವಟಿಕೆಗಳಿಗೆ ವೇಗ ಕೊಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್‌ ಕೆಲವೊಂದು ಮಹತ್ವದ ಯೋಜನೆಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದ್ದಾರೆ. ಕೊರೊನಾ ದಿಂದ ತತ್ತರಿಸಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಪುನಶ್ಚೇತನ ನೀಡಲು ಹಾಗೂ ಪ್ರವಾಸಿಗರಿಗೆ ಹೊಸ ಬಗೆಯ ಅನುಕೂಲಗಳನ್ನು ಕಲ್ಪಿಸಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೆಲವೊಂದು ಕಾರ್ಯಕ್ರಮಗಳನ್ನು ರೂಪಿಸಲು ಇಲಾಖೆ ಮುಂದಾಗಿದೆ. ಹೆಲಿಪೋರ್ಟ್ ಹಾಗೂ ಹೆಲಿಪ್ಯಾಡ್ ಗಳ ನಿರ್ಮಾಣ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಹಾಗೂ ಬಳ್ಳಾರಿಯ ಹಂಪಿಯಲ್ಲಿ ಹೆಲಿ ಪೋರ್ಟ್ ಗಳನ್ನು ನಿರ್ಮಾಣ ಸಂಬಂಧ ಚರ್ಚಿಸಲಾಯಿತು. ಪ್ರಥಮ ಹಂತದಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಎಲ್ಲೆಡೆ 50 ಹೆಲಿಪ್ಯಾಡ್ ಗಳನ್ನು ಎರಡನೇ ಹಂತದಲ್ಲಿ ಮತ್ತೇ 50 ಹೆಲಿ ಪ್ಯಾಡ್ ಗಳನ್ನು ಸೇರಿದಂತೆ ಒಟ್ಟು 100 ಹೆಲಿ ಪ್ಯಾಡ್ ಗಳನ್ನು ನಿರ್ಮಾಣ ಮಾಡಲು ಸಹ ಕ್ರಿಯಾ ಯೋಜನೆಗಳನ್ನು ರೂಪಿಸಲಾಯಿತು. ಪ್ರವಾಸಿಗರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಹೆಲಿಕಾಪ್ಟರ್ ಪ್ರಯಾಣ ಸೌಲಭ್ಯ ಒದಗಿಸಲು ಹೆಚ್.ಎ.ಎಲ್. ಸೇರಿದಂತೆ ಖಾಸಗಿ ಹೆಲಿಕಾಪ್ಟರ್ ಸಂಸ್ಥೆಗಳ ಜೊತೆ ಚರ್ಚಿಸಲು ನಿರ್ಧಾರ ಕೈಗೊಳ್ಳಲಾಯಿತು. ಹೆಚ್ಚಿನ ಸಂಖ್ಯೆ ಪ್ರವಾಸಿಗರನ್ನು ಕರ್ನಾಟಕಕ್ಕೆ ಆಕರ್ಷಿಸಲು ನೆರೆಯ ಗೋವಾ ಹಾಗೂ ಕೇರಳ ರಾಜ್ಯಗಳ ಜೊತೆ ಪ್ರವಾಸೋದ್ಯಮ ಸಂಪರ್ಕದ ಬಗ್ಗೆ ಒಡಂಬಡಿಕೆ ಮಾಡಿಕೊಳ್ಳಲು ಸಹ ನಿರ್ಧರಿಸಲಾಯಿತು. ಇಡೀ ದಕ್ಷಿಣ ಭಾರತದ ಪ್ರವಾಸಿ ಸ್ಥಳಗಳನ್ನು ನೋಡಲು ಅನುಕೂಲವಾಗುವಂತೆ ಒಂದು ಪ್ರವಾಸೋದ್ಯಮ ಸರ್ಕ್ಯೂಟ್ ರಚನೆ ಮಾಡುವ ಬಗ್ಗೆ ನೆರೆಯ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ಜೊತೆ ಚರ್ಚಿಸಲು ನಿರ್ಧರಿಸಲಾಯಿತು. ಉಡಾನ್ ಯೋಜನೆಯಲ್ಲಿ - ಸೀ ಪ್ಲೇನ್ ಕೇಂದ್ರ ಸರ್ಕಾರದ ಮಹತ್ವದ ಉಡಾನ್ ಯೋಜನೆಯಲ್ಲಿ ಸೀ ಪ್ಲೇನ್ ಪ್ರವಾಸೋದ್ಯಮ ಆರಂಭಿಸಲು ರಾಜ್ಯದ ಕರಾವಳಿ ತೀರದಲ್ಲಿರುವ ಅವಕಾಶಗಳ ಬಗ್ಗೆ ಈ ಸಭೆಲ್ಲಿ ಚರ್ಚಿಸಲಾಯಿತು. ಗುಜರಾತ್ ರಾಜ್ಯದಲ್ಲಿ ಪ್ರವಾಸಿಗರಿಗೆ ಸೀ ಪ್ಲೇನ್ ಸೇವೆ ಒದಗಿಸಲಾಗಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಸೀ ಪ್ಲೇನ್ ಸೌಲಭ್ಯ ಕಲ್ಪಿಸಲು ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು. ದಕ್ಷಿಣ ಕನ್ನಡ, ಉತ್ತರ ಕನ್ನಡ, ತುಂಗಭದ್ರ ಜಲಾಶಯ, ಆಲಮಟ್ಟಿ ಜಲಾಶಯ ಹಾಗೂ ಶಿವಮೊಗ್ಗದ ಜೋಗ್ ಫಾಲ್ಸ್ ಕೇಂದ್ರವಾಗಿಟ್ಟುಕೊಂಡು ಸೀ ಪ್ಲೇನ್ ಪ್ರವಾಸೋದ್ಯಮ ಯೋಜನೆ ರೂಪಿಸಲು ನಿರ್ಧರಿಸಲಾಯಿತು. ಪ್ರಮುಖ ಜಲಾಶಯಗಳು ಹಾಗೂ ನದಿಗಳಲ್ಲಿ ಜಲಕ್ರೀಡೆ ರಾಜ್ಯದ ಎಲ್ಲಾ ಜಲಾಶಯಗಳು, ಪ್ರಮುಖ ನದಿಗಳು ಹಾಗೂ ಕರಾವಳಿ ತೀರದಲ್ಲಿ ಜಲ ಕ್ರೀಡೆಗಳನ್ನು ಆರಂಭಿಸಲು ಕ್ರಿಯಾ ಯೋಜನೆ ರೂಪಿಸಲಾಯಿತು. ದೋಣಿ ವಿಹಾರ, ಸರ್ಫಿಂಗ್ ಸೇರಿದಂತೆ ರೋಮಾಂಚಕಾರಿ ಜಲಕ್ರೀಡೆಗಳನ್ನ ಆರಂಭಿಸಲು ನಿರ್ಧರಿಸಲಾಯಿತು. ರಾಜ್ಯದ 6 ಐತಿಹಾಸಿಕ ಬೆಟ್ಟಗಳಿಗೆ ರೋಪ್ ವೇ ನಿರ್ಮಾಣ ನಂದಿ ಬೆಟ್ಟ, ಮಧುಗಿರಿಯ ಏಕಶಿಲಾ ಬೆಟ್ಟ, ಹುಬ್ಬಳ್ಳಿಯ ನೃಪತುಂಗ ಬೆಟ್ಟ, ಅಂಜನಾದ್ರಿ ಸೇರಿದಂತೆ ರಾಜ್ಯದ 6 ಐತಿಹಾಸಿಕ ಬೆಟ್ಟಗಳಿಗೆ ರೋಪ್ ವೇ ನಿರ್ಮಾಣ ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ಅತೀ ಶೀಘ್ರದಲ್ಲಿ ಪ್ರವಾಸೋದ್ಯಮ ಸಚಿವರಾದ ಸಿ.ಪಿ. ಯೋಗೇಶ್ವರ ಅಧಿಕಾರಿಗಳ ಜೊತೆ ಉತ್ತರಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಗಳಿಗೆ ಭೇಟಿ ನೀಡಿ ಅಲ್ಲಿ ನಿರ್ಮಾಣ ಮಾಡಿರುವ ರೋಪ್ ವೇ ಯೋಜನೆಯನ್ನು ಖುದ್ದಾಗಿ ವೀಕ್ಷಿಸಲು ನಿರ್ಧರಿಸಲಾಯಿತು. ಒಟ್ಟಾರೆ ರಾಜ್ಯದಲ್ಲಿರುವ ಎಲ್ಲಾ ಬಗೆಯ ಪ್ರವಾಸಿ ತಾಣಗಳನ್ನು ಗುರುತಿಸಿ ಪ್ರವಾಸಿಗರು ಭೇಟಿ ನೀಡಲು ಅನುಕೂಲವಾಗುಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸುವ ಇಲಾಖೆ ನಿರ್ಧರಿಸಿದೆ.


from India & World News in Kannada | VK Polls https://ift.tt/3dqdH76

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...