ದಾರಿಹೋಕರ ಮೊಬೈಲ್‌ ಕದ್ದು ಆನ್‌ಲೈನ್‌ ಕ್ಲಾಸ್‌ಗಾಗಿ ವಿದ್ಯಾರ್ಥಿಗಳಿಗೆ ಮಾರುತ್ತಿದ್ದವನ ಬಂಧನ

ಬೆಂಗಳೂರು: ದಾರಿಹೋಕರ ಮೊಬೈಲ್‌ ಕದ್ದು ಆನ್‌ಲೈನ್‌ ತರಗತಿ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಮಾದಕ ವ್ಯಸನಿಯೊಬ್ಬನನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಜೆ.ಸಿ.ನಗರದ ಬೆನ್ಸನ್‌ ಟೌನ್‌ನ ಚಿನ್ನಪ್ಪ ಗಾರ್ಡನ್‌ ನಿವಾಸಿ ಧನುಷ್‌ ಅಲಿಯಾಸ್‌ ಡಿಡಿ (18) ಬಂಧಿತ ಆರೋಪಿಯಾಗಿದ್ದು, ಈತನಿಂದ 4.5 ಲಕ್ಷ ರೂ. ಮೌಲ್ಯದ 32 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕ ವಯಸ್ಸಿನಲ್ಲೇ ಮದ್ಯ, ಡ್ರಗ್ಸ್‌, ಧೂಮಪಾನ ವ್ಯಸನಿಯಾದ ಧನುಷ್‌, ವ್ಯಾಸಂಗ ಅರ್ಧಕ್ಕೇ ನಿಲ್ಲಿಸಿದ್ದ. ದುಶ್ಚಟಗಳಿಗೆ ಹಣ ಹೊಂದಿಸಲು ಅಡ್ಡದಾರಿ ಹಿಡಿದ ಆರೋಪಿ, ಮೊಬೈಲ್‌ ಕಳ್ಳತನಕ್ಕೆ ಇಳಿದಿದ್ದ. ಕೆ.ಆರ್‌.ಪುರ, ಚಾಮರಾಜಪೇಟೆ, ಅಶೋಕನಗರ, ಸಂಜಯನಗರ, ಹೆಬ್ಬಾಳ, ಕೆ.ಜಿ.ಹಳ್ಳಿ, ಸದಾಶಿವನಗರ ಸೇರಿದಂತೆ ವಿವಿಧೆಡೆ ಸ್ನೇಹಿತನ ಜತೆ ಸುತ್ತಾಡುತ್ತಿದ್ದ ಆರೋಪಿಯು, ನಿರ್ಜನ ಪ್ರದೇಶದಲ್ಲಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಅಲ್ಲದೇ ಈ ರೀತಿ ಕಳವು ಮಾಡಿದ ಮೊಬೈಲ್‌ಗಳನ್ನು ತನ್ನ ಸ್ನೇಹಿತರ ಮೂಲಕ ಆನ್‌ಲೈನ್‌ ಪರೀಕ್ಷೆ ಎದುರಿಸುತ್ತಿದ್ದ ಮಕ್ಕಳಿಗೆ ಮಾರಾಟ ಮಾಡುತ್ತಿದ್ದ. ಕೊಳೆಗೇರಿಗಳಲ್ಲಿನ ಬಡ ಕುಟುಂಬಗಳಿಗೆ ಆರೋಪಿಗಳು ಕದ್ದ ಮೊಬೈಲ್‌ಗಳನ್ನು ಮಾರಾಟ ಮಾಡುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಏ.16 ರಂದು ಸಂಜೆ ಸೆಂಟ್ರಲ್‌ ಎಕ್ಸೈಸ್‌ ಲೇಔಟ್‌‍ನ ಪಾರ್ಕ್ ಹತ್ತಿರ ಗಸ್ತಿನಲ್ಲಿದ್ದ ಪೊಲೀಸರಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿ ಧನುಷ್‌ ಸಿಕ್ಕಿಬಿದ್ದಿದ್ದಾನೆ. ಆತನನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್‌ ಕಳ್ಳತನಕ್ಕಾಗಿ ಬಂದಿದ್ದಾಗಿ ಮಾಹಿತಿ ನೀಡಿದ್ದ. ಆರೋಪಿ ನೀಡಿದ ಮಾಹಿತಿ ಮೇರೆಗೆ ಮತ್ತೊಬ್ಬನ ಬಂಧನಕ್ಕೆ ಬಲೆ ಬೀಸಲಾಗಿದೆ.


from India & World News in Kannada | VK Polls https://ift.tt/3v7bDbc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...