ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಮುಂದುವರಿಕೆ? ಸಂಪುಟ ಸಭೆಯಲ್ಲಿ ನಡೆಯಲಿದೆ ಮಹತ್ವದ ಚರ್ಚೆ

ಬೆಂಗಳೂರು: ವೀಕೆಂಡ್ ಮಾದರಿ ಕರ್ಫ್ಯೂವನ್ನು ಮೇ 4 ರ ವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು ಈ ಕುರಿತಾಗಿ ಸೋಮವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಕರ್ಫ್ಯೂ ಮುಂದುವರಿಕೆ ಹಾಗೂ ಕೋವಿಡ್‌ ಲಸಿಕೆ ಖರೀದಿ ಕುರಿತಾಗಿ ಚರ್ಚೆ ನಡೆಯಲಿದೆ. ಸಭೆಯ ಬಳಿಕ ಮಹತ್ವದ ನಿರ್ಧಾರಗಳನ್ನು ಸರ್ಕಾರ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೋವಿಡ್‌ ರಾಜ್ಯದಲ್ಲಿ ನಿಯಂತ್ರಣ ಮೀರಿ ಹರಡುತ್ತಿದೆ. ಈಗಾಗಲೇ ಬೆಡ್‌ಗಳು ಭರ್ತಿಯಾಗಿದ್ದು ಸೋಂಕಿತರಿಗೆ ಅಗತ್ಯ ಚಿಕಿತ್ಸೆಗೂ ಬೆಡ್‌ ಸೌಲಭ್ಯವಿಲ್ಲ. ಮತ್ತೊಂದು ಕಡೆಯಲ್ಲಿ ಆಕ್ಸಿಜನ್ ಕೊರತೆಯೂ ಎದುರಾಗಿದೆ. ಸದ್ಯ ಈ ಸ್ಥಿತಿಯನ್ನು ನಿಭಾಯಿಸುವುದು ರಾಜ್ಯ ಸರ್ಕಾರಕ್ಕೂ ಸವಾಲಿನ ಸಂಗತಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು. ಶನಿವಾರ ಹಾಗೂ ಭಾನುವಾರ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿತ್ತು. ವೀಕೆಂಡ್ ಕರ್ಫ್ಯೂಗೆ ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಮೇ 4 ರ ವರೆಗೆ ಕರ್ಫ್ಯೂವನ್ನು ಮುಂದುವರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಲಾಕ್‌ಡೌನ್ ಮಾದರಿಯ ನಿರ್ಬಂಧಗಳ ಬಗ್ಗೆ ಸಂಪುಟ ಸಚಿವರಲ್ಲಿ ಭಿನ್ನ ಅಭಿಪ್ರಾಯಗಳು ಇವೆ. ಇದು ಆರ್ಥಿಕತೆಯ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರುವುದರಿಂದ ಪರ್ಯಾಯ ಕ್ರಮಗಳ ಬಗ್ಗೆಯೂ ಸರ್ಕಾರ ಯೋಚನೆ ಮಾಡಬೇಕಿದೆ ಎಂಬ ಅಭಿಪ್ರಾಯವೂ ಇದೆ. ಈ ಎಲ್ಲಾ ವಿಚಾರಗಳು ಸೋಮವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಚಿವರ ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳ ಪಡೆಯಲಿದ್ದಾರೆ. ಇದಾದ ಬಳಿಕ ಒಂದು ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


from India & World News in Kannada | VK Polls https://ift.tt/3tQELU0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...