ಸತತ ವೈಫಲ್ಯ ಅನುಭವಿಸಿರುವ ಗಾಯಕ್ವಾಡ್‌ ಬಗ್ಗೆ ಕೋಚ್‌ ಫ್ಲೆಮಿಂಗ್‌ ಹೇಳಿದ್ದೇನು?

ಮುಂಬೈ: ಪ್ರಸಕ್ತ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಆರಂಭಿಕ ಮೂರು ಪಂದ್ಯಗಳಲ್ಲಿ ವಿಫಲರಾಗಿರುವ ಅವರನ್ನು ತಂಡದ ಮುಖ್ಯ ಕೋಚ್‌ ಸ್ಟಿಫೆನ್‌ ಫ್ಲೆಮಿಂಗ್ ಸಮರ್ಥಿಸಿಕೊಂಡಿದ್ದಾರೆ. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಘಟಿತ ಪ್ರದರ್ಶನದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ 45 ರನ್‌ಗಳಿಂದ ರಾಜಸ್ಥಾನ್‌ ರಾಯಲ್ಸ್ ವಿರುದ್ಧ ಗೆಲುವು ಪಡೆಯಿತು. ಆ ಮೂಲಕ 4 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೇರಿತು. ಕಳೆದ ಮೂರು ಪಂದ್ಯಗಳಲ್ಲಿ ಆರಂಭಿಕ ಬ್ಯಾಟ್ಸ್‌ಮನ್‌ ಋತುರಾಜ್‌ ಗಾಯಕ್ವಾಡ್‌ ವೈಫಲ್ಯದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಫ್ಲೆಮಿಂಗ್, ಟೂರ್ನಿಯಲ್ಲಿ ಯಶಸ್ವಿಯಾಗಲು ಯುವ ಆಟಗಾರನಿಗೆ ಹೆಚ್ಚಿನ ಸಮಯವನ್ನು ನೀಡುತ್ತೇವೆ ಎಂದು ಹೇಳಿದರು. "ರಾಬಿನ್‌ ಉತ್ತಪ್ಪ ಕಾಯುತ್ತಿದ್ದಾರೆ. ಆದರೆ, ಕಳೆದ ವರ್ಷ ಋತುರಾಜ್‌ ಗಾಯಕ್ವಾಡ್‌ ಬ್ಯಾಟಿಂಗ್‌ ಮಾಡಿದ ಹಾದಿಯಿಂದ ಈ ಬಾರಿ ಇನಿಂಗ್ಸ್ ಆರಂಭಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ಅವರಲ್ಲಿ ರನ್‌ ಗಳಿಸುವ ತುಡಿತ ಇದೆ. ಹಾಗಾಗಿ, ಇನ್ನಷ್ಟು ಪಂದ್ಯಗಳಲ್ಲಿ ಆತನಿಗೆ ಅವಕಾಶವನ್ನು ನಾವು ನೀಡುತ್ತೇವೆ. ಎಲ್ಲದಕ್ಕಿಂತ ಮುಖ್ಯವಾಗಿ ಯುವ ಪ್ರತಿಭೆಗಳನ್ನು ನಾವು ಬೆಂಬಲಿಸುತ್ತೇವೆ," ಎಂದು ತಿಳಿಸಿದರು. ಮಹೇಂದ್ರ ಸಿಂಗ್‌ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, "ಎಲ್ಲಾ ಸಮಯದಲ್ಲೂ ಎಂಎಸ್‌ ಧೋನಿ ಮಧ್ಯಮ ಕ್ರಮಾಂಕದಲ್ಲಿ ಸ್ವಲ್ಪ ಸಮಯ ಕಳೆಯುತ್ತಾರೆ. ಆದರೆ, ನಮ್ಮಲ್ಲಿ ಸಾಕಷ್ಟು ಬ್ಯಾಟ್ಸ್‌ಮನ್‌ಗಳಿದ್ದಾರೆ. ಇದರ ಹೊರತಾಗಿಯೂ ಸನ್ನಿವೇಶಕ್ಕೆ ತಕ್ಕಂತೆ ಎಂಎಸ್‌ ಧೋನಿ ಮೇಲಿನ ಕ್ರಮಾಂಕದಲ್ಲಿ ಆಡಿಸುತ್ತೇವೆ. ಸದ್ಯ ಅತ್ಯುತ್ತಮ ಮೇಲಿನ ಕ್ರಮಾಂಕವನ್ನು ರೂಪಿಸಲು ಪ್ರಯತ್ನಿಸುತ್ತಿದ್ದೇವೆ. ನಾವು ಆಡುವ ಹಾದಿಯಲ್ಲಿ ಎಲ್ಲರಿಗೂ ಪ್ರೋತ್ಸಾಹ ನೀಡುತ್ತೇವೆ," ಎಂದು ಹೇಳಿದರು. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮೊಯೀನ್‌ ಅಲಿ ಆಗಮನದಿಂದ ಉಂಟಾಗಿರುವ ವ್ಯತ್ಯಾಸದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಸ್‌ಕೆ ಕೋಚ್‌ ಸ್ಪಿಫೆನ್‌ ಫ್ಲೆಮಿಂಗ್‌, ಇಂಗ್ಲೆಂಡ್‌ ಆಲ್‌ರೌಂಡರ್‌ ತಂಡಕ್ಕೆ ಸಾಕಷ್ಟು ಮೌಲ್ಯವನ್ನು ತಂದುಕೊಟ್ಟಿದ್ದಾರೆ ಎಂದು ಹೇಳಿದರು. "ಅವರು (ಮೊಯೀನ್‌ ಅಲಿ) ಆಟಕ್ಕೆ ಸರ್ವಾಂಗೀಣ ಅಂಶವನ್ನು ಸೇರಿಸಿದ್ದಾರೆ, ಇದು ಕಳೆದ ವರ್ಷ ನಮಗೆ ಕೊರತೆಯಾಗಿತ್ತು. ನಾವು ಏನು ನಿರೀಕ್ಷೆ ಮಾಡುತ್ತಿದ್ದೇವೆ ಎಂಬುದನ್ನು ಅವರು ಇಂದು(ಸೋಮವಾರ) ತಂಡಕ್ಕೆ ಕೊಡುಗೆ ನೀಡಿದ್ದಾರೆ. ಅವರು ಆರಂಭಿಸಿದ ರೀತಿಗೆ ನಾವು ಮಗ್ನರಾಗಿದ್ದೇವೆ. ಮೊಯೀನ್ ಅಲಿ ನಿಜಕ್ಕೂ ಪ್ರಭಾವಶಾಲಿಯಾಗಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಅವರು ಬ್ಯಾಟಿಂಗ್‌ ಮಾಡುವ ಹಾದಿ ಹೆಚ್ಚಿನ ರನ್‌ ಗಳಿಸುವ ನಮಗೆ ಪ್ರಮುಖ ಅಸ್ತ್ರವಾಗಿದೆ," ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್‌ ಮಾಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಪರ ಫಾಫ್‌ ಡು ಪ್ಲೆಸಿಸ್ ಹಾಗೂ ಅಂಬಾಟಿ ರಾಯುಡು ಸ್ಪೋಟಕ ಬ್ಯಾಟಿಂಗ್‌ ಮಾಡಿದ್ದರು. ಕೊನೆಯಲ್ಲಿ ಡ್ವೇನ್‌ ಬ್ರಾವೊ ಕೇವಲ 8 ಎಸೆತಗಳಲ್ಲಿ 20 ರನ್‌ ಸಿಡಿಸಿದ್ದರು. ಆ ಮೂಲಕ ಸಿಎಸ್‌ಕೆ 188 ರನ್‌ ದಾಖಲಿಸಲು ಸಾಧ್ಯವಾಗಿತ್ತು. ರಾಜಸ್ಥಾನ್‌ ರಾಯಲ್ಸ್ ಪರ ಅತ್ಯುತ್ತಮ ಬೌಲಿಂಗ್‌ ಮಾಡಿದ್ದ ಚೇತನ್‌ ಸಕಾರಿಯಾ 4 ಓವರ್‌ಗಳಿಗೆ 36 ರನ್‌ ನೀಡಿ ಪ್ರಮುಖ 3 ವಿಕೆಟ್‌ಗಳನ್ನು ಪಡೆದುಕೊಂಡಿದ್ದರು. ಬುಧವಾರ ಇದೇ ಅಂಗಳದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಐಯಾನ್‌ ಮಾರ್ಗನ್ ನಾಯಕತ್ವದ ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ ಸೆಣಸಲಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2QhrpSf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...