ಈತ ಫಾರ್ಮ್‌ಗೆ ಬಂದರೆ ಯಾರಿಂದಲೂ ನಿಯಂತ್ರಿಸಲು ಸಾಧ್ಯವಿಲ್ಲ ಎಂದ ಕೊಹ್ಲಿ!

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ ಮತ್ತೊಂದು ಮ್ಯಾಚ್‌ ವಿನ್ನಿಂಗ್‌ ಪ್ರದರ್ಶನ ತೋರಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ 38 ರನ್‌ಗಳ ಗೆಲುವಿಗೆ ನೆರವಾದ ಗ್ಲೆನ್‌ ಮ್ಯಾಕ್ಸ್‌ ಅವರನ್ನು ಆರ್‌ಸಿಬಿ ನಾಯಕ ಶ್ಲಾಘಿಸಿದ್ದಾರೆ. ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಪರ ಗ್ಲೆನ್‌ ಮ್ಯಾಕ್ಸ್‌ವೆಲ್‌ ಸ್ಪೋಟಕ ಪ್ರದರ್ಶನ ತೋರಿದರು. ಎದುರಿಸಿದ ಕೇವಲ 49 ಎಸೆತಗಳಲ್ಲಿ ಮೂರು ಸಿಕ್ಸರ್‌ಗಳು ಹಾಗೂ 11 ಬೌಂಡರಿಗಳೊಂದಿಗೆ 78 ರನ್‌ ಸಿಡಿಸಿದರು. ಪಂದ್ಯದ ಗೆಲುವಿನ ಬಳಿಕ ಮಾತನಾಡಿದ ಕೊಹ್ಲಿ, ಮ್ಯಾಕ್ಸ್‌ವೆಲ್‌ ಹಾಗೂ ಡಿವಿಲಿಯರ್ಸ್ ಅವರನ್ನು ಗುಣಗಾನ ಮಾಡಿದರು. "ಮ್ಯಾಕ್ಸ್‌ವೆಲ್ ಅಸಾಧಾರಣ ಬ್ಯಾಟಿಂಗ್‌ ಪ್ರದರ್ಶನ ತೋರಿದರು ಹಾಗೂ ಅವರನ್ನು ಎಬಿ ಡಿ ವಿಲಿಯರ್ಸ್ ಹಿಂಬಾಲಿಸಿದರು. ಈ ರೀತಿಯ ಫಾರ್ಮ್‌ಗೆ ಅವರು ಬಂದರೆ, ಅವರನ್ನು ತಡೆಯಲು ಯಾರಿಂದಲೂ ಸಾಧ್ಯವೇ ಇಲ್ಲ. ಪಿಚ್‌ ನಿಧಾನಗತಿಯಿಂದ ಕೂಡಿತ್ತು. ಆದರೂ ನಾವು 40 ಹಚ್ಚುವರಿ ರನ್‌ಗಳನ್ನು ಕಲೆ ಹಾಕಿದ್ದೆವು. ಬಾತುಕೋಳಿಯನ್ನು ನೀರಿಗೆ ಬಿಟ್ಟಂತೆ ಆರ್‌ಸಿಬಿಯನ್ನು ಮ್ಯಾಕ್ಸ್‌ವೆಲ್‌ ಕೊಂಡೊಯ್ದರು," ಎಂದು ಹೇಳಿದರು. 2020ರ ಆವೃತ್ತಿಯಲ್ಲಿ ಪಂಜಾಬ್‌ ಕಿಂಗ್ಸ್ ಪರ ಹೀನಾಯ ಪ್ರದರ್ಶನ ತೋರಿದ್ದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರನ್ನು 2021ರ ಆವೃತ್ತಿಯ ಐಪಿಎಲ್‌ ಆಟಗಾರರ ಹರಾಜಿಗೆ ಪಂಜಾಬ್‌ ಫ್ರಾಂಚೈಸಿ ಬಿಡುಗಡೆ ಮಾಡಿತ್ತು. ಅದರಂತೆ ಆರ್‌ಸಿಬಿ ಆಸ್ಟ್ರೇಲಿಯಾ ಸ್ಟಾರ್‌ ಆಲ್‌ರೌಂಡರ್‌ ಅನ್ನು 14.25 ಕೋಟಿ ರೂ. ಗಳಿಗೆ ಖರೀದಿಸಿತು. ಕೋಲ್ಕತಾ ನೈಟ್‌ ರೈಡರ್ಸ್ ತಂಡವನ್ನು 166 ರನ್‌ಗಳಿಗೆ ನಿಯಂತ್ರಿಸುವಲ್ಲಿ ಮಹತ್ವದ ಪಾತ್ರವಹಿಸಿದ ಕೈಲ್‌ ಜೇಮಿಸನ್‌, ಮೊಹಮ್ಮದ್‌ ಸಿರಾಜ್‌ ಹಾಗೂ ಹರ್ಷಲ್‌ ಪಟೇಲ್‌ ಅವರನ್ನು ನಾಯಕ ವಿರಾಟ್‌ ಕೊಹ್ಲಿ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. "ಆಂಡ್ರೆ ರಸೆಲ್‌ಗೆ ಮೊಹಮ್ಮದ್‌ ಸಿರಾಜ್‌ ಬೌಲಿಂಗ್‌ ಅತ್ಯುತ್ತಮವಾಗಿತ್ತು. ರಸೆಲ್‌ ವಿರುದ್ಧ ಸಿರಾಜ್‌ ಈ ಹಿಂದೆ ಇದೇ ರೀತಿ ಬೌಲಿಂಗ್‌ ಮಾಡಿರುವ ಇತಿಹಾಸವಿದೆ. ಆಸ್ಟ್ರೇಲಿಯಾ ಪ್ರವಾಸದ ಬಳಿಕ ಅವರು ವಿಭಿನ್ನ ಬೌಲರ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜತೆಗೆ ಹರ್ಷಲ್‌ ಪಟೇಲ್‌ ಡೆತ್‌ ಓವರ್‌ಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದ್ದಾರೆ ಹಾಗೂ ಕೈಲ್‌ ಕೇಮಿಸನ್‌ ಅತ್ಯುತ್ತಮವಾಗಿ ಬೌಲಿಂಗ್‌ ಮಾಡಿದ್ದಾರೆ. ಈ ಕಾರಣದಿಂದಲೇ ನಾವು ಮೂರು ಪಂದ್ಯಗಳಲ್ಲಿ ಮೂರು ಗೆಲುವು ಪಡೆದಿದ್ದೇವೆ," ಎಂದು ಕೊಹ್ಲಿ ಹೇಳಿದರು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಆರ್‌ಸಿಬಿ ತಂಡ ಎರಡನೇ ಓವರ್‌ನಲ್ಲಿ ವಿರಾಟ್‌ ಕೊಹ್ಲಿ ಹಾಗೂ ರಜತ್‌ ಪಾಟಿದಾರ್ ಅವರ ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅದ್ಭುತ ಬ್ಯಾಟಿಂಗ್‌ ಮಾಡಿದರು ಹಾಗೂ ದೇವದತ್‌ ಪಡಿಕ್ಕಲ್‌ ಅವರೊಂದಿಗೆ ಮೂರನೇ ವಿಕೆಟ್‌ಗೆ 86 ರನ್‌ ಜತೆಯಾಟವಾಡಿದರು. ಮ್ಯಾಕ್ಸ್‌ವೆಲ್‌ ಔಟ್‌ ಆದ ಬಳಿಕ ಮಿಂಚಿದ ಕೇವಲ 34 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ 9 ಬೌಂಡರಿಗಳೊಂದಿಗೆ 76 ಸಿಡಸಿದರು. ಆ ಮೂಲಕ ಆರ್‌ಸಿಬಿ 20 ಓವರ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು 204 ರನ್‌ ದಾಖಲಿಸಿತು. ಬಳಿಕ ಗುರಿ ಹಿಂಬಾಲಿಸಿದ ಕೋಲ್ಕತಾ ನೈಟ್‌ ರೈಡರ್ಸ್ ತಂಡ ಉತ್ತಮ ಆರಂಭವನ್ನು ಕಂಡಿತ್ತು. ಆದರೆ, ಆರ್‌ಸಿಬಿ ಬೌಲರ್‌ಗಳ ಎದುರು ಕೆಕೆಆರ್‌ ಬ್ಯಾಟ್ಸ್‌ಮನ್‌ಗಳ ಆಟ ನಡೆಯಲಿಲ್ಲ. ಮಾರ್ಗನ್‌ ಬಳಗ 20 ಓವರ್‌ಗಳಿಗೆ 8 ವಿಕೆಟ್ ಕಳೆದುಕೊಂಡು 166 ರನ್‌ಗಳಿಗೆ ಸೀಮಿತವಾಗಿ 38 ರನ್‌ಗಳ ಸೋಲು ಒಪ್ಪಿಕೊಂಡಿತು. ಕೈಲ್‌ ಜೇಮಿಸನ್‌ ಮೂರು ವಿಕೆಟ್‌ ಪಡೆದರೆ, ಯುಜ್ವೇಂದ್ರ ಚಹಲ್‌ ಹಾಗೂ ಹರ್ಷಲ್‌ ಪಟೇಲ್‌ ತಲಾ ಎರಡು ವಿಕೆಟ್‌ ಪಡೆದರು ಹಾಗೂ ವಾಷಿಂಗ್ಟನ್‌ ಸುಂದರ್‌ ಒಂದು ವಿಕೆಟ್‌ ಪಡೆದಿದ್ದಾರೆ. ಮೂರು ಪಂದ್ಯಗಳಲ್ಲಿ 176 ರನ್‌ ಸಿಡಿಸಿರುವ ಆರೆಂಜ್ ಕ್ಯಾಪ್ ಅನ್ನು ತನ್ನ ಬಳಿ ಇರಿಸಿಕೊಂಡಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/32qqnWv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...