ಹೊಸದಿಲ್ಲಿ: ಸಿಪಿಐ (ಎಂ) ನಾಯಕ ಸೀತಾರಾಮ್ ಯೆಚೂರಿ ಅವರ ಹಿರಿಯ ಪುತ್ರ ಆಶಿಶ್ ಯೆಚೂರಿ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಿಂದ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಅಶಿಶ್ ಇಂದು ಬೆಳಗ್ಗೆ 5.30ರ ಸುಮಾರಿಗೆ ಸಾವನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 34 ವರ್ಷದ ಅಶಿಶ್ ಕೊರೊನಾ ಪಾಸಿಟಿವ್ ದೃಢಪಟ್ಟು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ಕಾಲದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಕೊರೊನಾ ಸಂಬಂಧ ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು. ಆದರೆ ಇದೀಗ ಹಠಾತ್ ಅವರು ಸಾವನಪ್ಪಿದ್ದಾರೆ ಎಂದು ಕುಟುಂಬಸ್ಥರು ನೋವು ತೋಡಿಕೊಂಡಿದ್ದಾರೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರುವ ಸೀತಾರಾಮ್ ಯೆಚೂರಿ, "ನನ್ನ ಹಿರಿಯ ಮಗ ಆಶಿಶ್ ಯೆಚೂರಿಯನ್ನು ನಾನು ಇಂದು ಬೆಳಿಗ್ಗೆ ಕೊರೊನಾದಿಂದಾಗಿ ಕಳೆದುಕೊಂಡೆ ಎಂದು ತಿಳಿಸಲು ಬಹಳ ದುಃಖಿತನಾಗಿದ್ದೇನೆ. ನಮಗೆ ಭರವಸೆ ನೀಡಿದ ಹಾಗೂ ಮಗನಿಗೆ ಚಿಕಿತ್ಸೆ ನೀಡಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ವೈದ್ಯರು, ದಾದಿಯರು, ಮುಂಚೂಣಿಯ ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಮತ್ತು ನಮ್ಮೊಂದಿಗೆ ನಿಂತ ಅಸಂಖ್ಯಾತರಿಗೆ ಧನ್ಯವಾದ" ಎಂದು ಭಾವುಕಾರಾಗಿ ಟ್ವೀಟ್ ಮಾಡಿದ್ದಾರೆ. ಅಶಿಶ್ ಯೆಚೂರಿ ಪ್ರತಿಷ್ಟಿತ ದಿನ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ದಿಲ್ಲಿಯಲ್ಲಿ ವಾಸವಾಗಿದ್ದರು. ಇನ್ನು ಸೀತಾರಂ ಯೆಚೂರಿಗೆ ಸದ್ಯ ಹೋಂ ಕ್ವಾರಂಟೈನ್ನಲ್ಲಿದ್ದಾರೆ.
from India & World News in Kannada | VK Polls https://ift.tt/3axTTya