ಬೆಂಗಳೂರು: ನಾಡಿನ ಖ್ಯಾತ ಸಂಶೋಧಕರು, ನಿಘಂಟು ತಜ್ಞರಾದ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಶತಾಯುಷಿಗಳಾಗಿದ್ದ ಪ್ರೊ. ಜಿ .ವೆಂಕಟಸುಬ್ಬಯ್ಯ ಅವರ ನಿಧನದಿಂದ ಸಾರಸ್ವಾತ ಲೋಕ ಬಡವಾಗಿದೆ ಎಂದು ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರಾಗಿದ್ದವರು. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟವರು. ಆ ಮೂಲಕ ಭಾಷೆ, ನಾಡು ನುಡಿಗೆ ಅಪ್ರತಿಮ ಸೇವೆ ಸಲ್ಲಿಸಿದ್ದಾರೆ ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ. ಭಾಷೆ ಮೇಲಿನ ಇವರ ಪಾಂಡಿತ್ಯಕ್ಕೆ ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂಬ ಬಿರುದುಗಳು ಬಂದಿವೆ. ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಇವರ ಸೇವೆ ಅಪಾರ. ಅನೇಕ ಪುಸ್ತಕಗಳನ್ನು, ನಿಘಂಟುಗಳು ತಮ್ಮ ಅಂಕಣದಿಂದ ಮನೆಮಾತಾಗಿದ್ದಾರೆ ಎಂದು ಕೊಂಡಾಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ ಸೇರಿದಂತೆ ಅನೇಕ ಗರಿಗಳು ಇವರ ಮುಡಿ ಸೇರಿವೆ. ಇವರ ಅಗಲಿಕೆಯಿಂದ ಕನ್ನಡ ನಾಡಿಗೆ ಅಪರಿಮಿತ ನಷ್ಟವಾಗಿದೆ ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು, ಅಸಂಖ್ಯ ಅಭಿಮಾನಿಗಳಿಗೆ ಇವರ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಅವರು ಶೋಕಸಂದೇಶದಲ್ಲಿ ತಿಳಿಸಿದ್ದಾರೆ. ಮುರುಗೇಶ್ ನಿರಾಣಿ ಸಂತಾಪ ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. ೫೦ ಪುಸ್ತಕಗಳನ್ನು, ೧೪ ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದರು.ಅವರ ಅಕಾಲಿಕ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಎಂದು ಸಚಿವ ಮುರುಗೇಶ್ ನಿರಾಣಿ ಬಣ್ಣಿಸಿದ್ದಾರೆ.
from India & World News in Kannada | VK Polls https://ift.tt/3szm0mC