RCB vs CSK: ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಸೋತ ಬೆನ್ನಲ್ಲೆ ಕೊಹ್ಲಿಗೆ ಆಘಾತ!

ಮುಂಬೈ: ಭಾನುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಚೆನ್ನ ಸೂಪರ್‌ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಿಧಾನಗತಿಯ ಬೌಲಿಂಗ್‌ ಮಾಡಿದ ಕಾರಣದಿಂದ ನಾಯಕ ವಿರಾಟ್‌ ಕೊಹ್ಲಿಗೆ 12 ಲಕ್ಷ ರೂ ದಂಡವನ್ನು ವಿಧಿಸಲಾಗಿದೆ. ಪ್ರಸಕ್ತ ಆವೃತ್ತಿಯಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಎಸಗಿದ ಮೊದಲನೇ ಅಪರಾಧ ಇದಾಗಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ನಾಯಕ 12 ಲಕ್ಷ ರೂ ದಂಡವನ್ನು ಐಪಿಎಲ್‌ ವಿಧಿಸಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ 69 ರನ್‌ಗಳಿಂದ ಸೋತ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮೂರನೇ ಸ್ಥಾನಕ್ಕೆ ಇಳಿಯಿತು. ಸತತ ನಾಲ್ಕು ಪಂದ್ಯಗಳನ್ನು ಗೆದ್ದು ವಿಶ್ವಾಸದಲ್ಲಿ ಬೀಗುತ್ತಿದ್ದ ಆರ್‌ಸಿಬಿಗೆ ಪ್ರಸಕ್ತ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಸೋಲು ಇದಾಯಿತು. "ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏ.25ರಂದು ನಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ನಿಧಾನಗತಿಯ ಬೌಲಿಂಗ್‌ ಮಾಡಿದ ಕಾರಣದಿಂದಾಗಿ ನಾಯಕ ವಿರಾಟ್‌ ಕೊಹ್ಲಿಗೆ 12 ಲಕ್ಷ ರೂ ದಂಡವನ್ನು ವಿಧಿಸಲಾಗಿದೆ," ಎಂದು ಐಪಿಎಲ್‌ ಪತ್ರಿಕಾ ಹೇಳಿಕೆ ತಿಳಿಸಿದೆ. "ಪ್ರಸಕ್ತ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್‌ ಕೋಡ್‌ ಆಫ್‌ ಕಂಡಕ್ಟ್‌ ನಿಯಮಗಳ ಕನಿಷ್ಠ ಓವರ್‌ಗಳ ಸಂಬಂಧಿತ ಮೊದಲ ಅಪರಾಧ ಇದಾಗಿದೆ. ಈ ಹಿನ್ನೆಲೆಯಲ್ಲಿ ವಿರಾಟ್‌ ಕೊಹ್ಲಿಗೆ 12 ಲಕ್ಷ ರೂ ದಂಡವನ್ನು ವಿಧಿಸಲಾಗಿದೆ," ಎಂದು ಹೇಳಿಕೆ ತಿಳಿಸಿದೆ. ಕೇವಲ 28 ಎಸೆತಗಳಲ್ಲಿ ಐದು ಸಿಕ್ಸರ್ ಹಾಗೂ ನಾಲ್ಕು ಬೌಂಡರಿಗಳೊಂದಿಗೆ ಅಜೇಯ 62 ರನ್‌ ಚೆಚ್ಚಿದ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸ್ಟಾರ್‌ ಆಲ್‌ರೌಂಡರ್‌ನ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ವೈಯಕ್ತಿಕ ಮೊತ್ತ ಕೂಡ ಇದಾಯಿತು. ಜಡೇಜಾ ಸ್ಪೋಟಕ ಬ್ಯಾಟಿಂಗ್‌ನಿಂದ ಸಿಎಸ್‌ಕೆ ತನ್ನ ಪಾಲಿನ 20 ಓವರ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು 191 ರನ್‌ ಕಲೆ ಹಾಕಿತು. ನಂತರ, ಗುರಿ ಹಿಂಬಾಲಿಸಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬೌಲಿಂಗ್‌ನಲ್ಲಿಯೂ ರವೀಂದ್ರ ಜಡೇಜಾ ವಿಲನ್‌ ಆದರು. ಹಾಕಿದ ನಾಲ್ಕು ಓವರ್‌ಗಳಲ್ಲಿ ಕೇವಲ 13 ರನ್‌ ನೀಡಿ ಪ್ರಮುಖ 3 ವಿಕೆಟ್‌ಗಳನ್ನು ತನ್ನ ಖಾತೆಗೆ ಹಾಕಿಕೊಂಡರು. ಇವರಿಗೆ ಸಾಥ್‌ ನೀಡಿದ ಇಮ್ರಾನ್‌ ತಾಹೀರ್‌ 16 ರನ್‌ ನೀಡಿ ಎರಡು ವಿಕೆಟ್‌ ಕಬಳಿಸಿದರು. ಆ ಮೂಲಕ ಆರ್‌ಸಿಬಿ ತಂಡವನ್ನು 122 ರನ್‌ಗಳಿಗೆ ನಿಯಂತ್ರಿಸಲು ಸಿಎಸ್‌ಕೆಗೆ ನೆರವಾದರು. ಈ ಪಂದ್ಯದ ಗೆಲುವಿನೊಂದಿಗೆ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನಕ್ಕೇರಿದ್ದು, ಬುಧವಾರ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಸೆಣಸಲಿದೆ, ಇನ್ನು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಮಂಗಳವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತನ್ನ ಆರನೇ ಪಂದ್ಯವಾಡಲಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3vhYI6p

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...