ಚೆನ್ನೈ: ಸತತ ಎರಡು ಪಂದ್ಯಗಳಲ್ಲಿ ಗೆದ್ದು 2021ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ವಿರಾಟ್ ಕೊಹ್ಲಿ ನಾಯಕತ್ವದ ತಂಡ ಭಾನುವಾರ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ವಿರುದ್ಧ ಕಾದಾಟ ನಡೆಸಲಿವೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲನೇ ಪಂದ್ಯ ಗೆದ್ದಿದ್ದ ಕೊಹ್ಲಿ ಬಳಗ ನಂತರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೇವಲ 6 ರನ್ಗಳಿಂದ ರೋಚಕ ಜಯ ದಾಖಲಿಸಿತ್ತು. ಇದೀಗ 4 ಅಂಕಗಳೊಂದಿಗೆ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಮತ್ತೊಂದೆಡೆ ಐಯಾನ್ ಮಾರ್ಗನ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ ತನ್ನ ಮೊದಲನೇ ಹಣಾಹಣಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 10 ರನ್ಗಳಿಂದ ಗೆದ್ದು, ನಂತರ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಅಷ್ಟೇ ರನ್ಗಳ ಅಂತರದಲ್ಲಿ ಪರಾಭವಗೊಂಡಿತ್ತು. ಇದೀಗ ಕೋಲ್ಕತಾ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ವಿರುದ್ಧ ಕೆಕೆಆರ್ ಬಹುತೇಕ ಗೆಲುವಿನ ಹಾದಿಯಲ್ಲಿತ್ತು. ಅದರಂತೆ ಕೊನೆಯ 5 ಓವರ್ಗಳಿಗೆ 31 ರನ್ ಮಾತ್ರ ಅಗತ್ಯವಿತ್ತು. ಆದರೆ, ರಾಹುಲ್ ಚಹರ್ ಸೇರಿದಂತೆ ಎದುರಾಳಿ ಬೌಲರ್ಗಳ ಪರಿಣಾಮಕಾರಿ ಬೌಲಿಂಗ್ಗೆ ಸಿಲುಕಿದ ಕೆಕೆಆರ್ ಸುಲಭ ಗುರಿ ಮುಟ್ಟಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಸೋಲಿನ ಆಘಾತ ಅನುಭವಿಸಿತ್ತು. ವಿರಾಟ್ ಕೊಹ್ಲಿ ನಾಯಕತ್ವದ ಆರ್ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಅದ್ಭುತ ಪೈಪೋಟಿ ನಡೆಸಿ ಪಂದ್ಯ ಗೆದ್ದುಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಬೆಂಗಳೂರು ನಿಗದಿತ 20 ಓವರ್ಗಳಿಗೆ 8 ವಿಕೆಟ್ ನಷ್ಟಕ್ಕೆ 149 ರನ್ಗಳಿಗೆ ಶಕ್ತವಾಗಿತ್ತು. ಆದರೆ, ಆರ್ಸಿಬಿ ಬೌಲರ್ಗಳ ಪರಿಣಾಮಕಾರಿ ಬೌಲಿಂಗ್ ದಾಳಿಗೆ ಸಿಲುಕಿದ 'ಆರೆಂಜ್ ಆರ್ಮಿ' 143 ರನ್ಗಳಿಗೆ ಸೀಮಿತವಾಗಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಆರ್ಸಿಬಿ ಎದುರು ನೋಡುತ್ತಿದೆ. ಪಿಚ್ ವರದಿ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೇಸಿಂಗ್ ಮಾಡುವುದು ತುಂಬಾ ಕಷ್ಟ. ಈ ವಿಕೆಟ್ನಲ್ಲಿ ಚೆಂಡು ಬ್ಯಾಟ್ಗೆ ಸರಿಯಾಗಿ ಬರುವುದಿಲ್ಲ. ಹಾಗಾಗಿ, ಬ್ಯಾಟ್ಸ್ಮನ್ಗಳು ರನ್ ಗಳಿಸಲು ಸಾಕಷ್ಟು ಶ್ರಮ ಪಡಬೇಕು. ಕಳೆದ ಪಂದ್ಯದಲ್ಲಿ ಆರ್ಸಿಬಿಯ ಶಹಬಾಝ್ ಅಹ್ಮದ್ ಹಾಗೂ ಎಸ್ಆರ್ಎಚ್ ತಂಡದ ರಶೀದ್ ಖಾನ್ ಬ್ಯಾಟ್ಸ್ಮನ್ಗಳ ಹೇಗೆ ಒತ್ತಡ ಹೇರಿದ್ದರು ಎಂಬುದನ್ನು ನೀವು ನೋಡಬಹುದು. ಈ ಪಿಚ್ನಲ್ಲಿ ಸ್ಪಿನ್ನರ್ಗಳು ಮೇಲುಗೈ ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ : ವಿರಾಟ್ ಕೊಹ್ಲಿ(ನಾಯಕ), ದೇವದತ್ ಪಡಿಕ್ಕಲ್, ಶಹಬಾಝ್ ಅಹ್ಮದ್, ಗ್ಲೆನ್ ಮ್ಯಾಕ್ಸ್ವೆಲ್, ಎಬಿ ಡಿವಿಲಿಯರ್ಸ್(ವಿ.ಕೀ), ವಾಷಿಂಗ್ಟನ್ ಸುಂದರ್, ಡೇನಿಯಲ್ ಕ್ರಿಸ್ಟಿಯನ್, ಕೈಲ್ ಜೇಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಕೋಲ್ಕತಾ ನೈಟ್ ರೈಡರ್ಸ್: ನಿತೀಶ್ ರಾಣಾ, ಶುಭಮನ್ ಗಿಲ್, ರಾಹುಲ್ ತ್ರಿಪಾಠಿ, ಐಯಾನ್ ಮಾರ್ಗನ್ (ನಾಯಕ), ಶಕಿಬ್ ಅಲ್ ಹಸನ್, ದಿನೇಶ್ ಕಾರ್ತಿಕ್(ವಿ.ಕೀ), ಆಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್, ಹರಭಜನ್ ಸಿಂಗ್, ಪ್ರಸಿಧ್ ಕೃಷ್ಣ, ವರುಣ್ ಚಕ್ರವರ್ತಿ ಪಂದ್ಯದ ವಿವರ ಮುಖಾಮುಖಿ: ದಿನಾಂಕ, ಸಮಯ: ಏ.18, ಮಧ್ಯಾಹ್ನ 3.30ಕ್ಕೆ ಸ್ಥಳ: ಎಂಎ ಚಿದಂಬರಂ ಕ್ರೀಡಾಂಗಣ, ಚೆನ್ನೈ ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮುಖಾಮುಖಿ ದಾಖಲೆ ಒಟ್ಟು ಆಡಿರುವ ಪಂದ್ಯಗಳು: 27 ಆರ್ಸಿಬಿ ಗೆಲುವು: 12 ಕೆಕೆಆರ್: 15
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2QftspM