ಚಾಮರಾಜನಗರ ದುರಂತ; ಸಚಿವ ಸುರೇಶ್ ಕುಮಾರ್, ಸಂಸದ ಶ್ರೀನಿವಾಸ್‌ಪ್ರಸಾದ್‌ ವಿರುದ್ಧ ಜನಾಕ್ರೋಶ

ಚಾಮರಾಜನಗರ: ಆಕ್ಸಿಜನ್‌ ಪೂರೈಕೆ ಸ್ಥಗಿತದಿಂದ 23 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಸರಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌, ಸಂಸದ ವಿ.ಶ್ರೀನಿವಾಸಪ್ರಸಾದ್‌ ವಿರುದ್ಧವೂ ಜನತೆ ಬೇಸರಗೊಂಡಿದ್ದಾರೆ. ಸ್ವಪಕ್ಷೀಯ ಕೆಲ ಕಾರ‍್ಯಕರ್ತರು ಹಾಗೂ ಮುಖಂಡರು ಸಹ ಇವರಿಬ್ಬರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸುರೇಶ್‌ಕುಮಾರ್‌ ಅವರು ಸಾಕಷ್ಟು ಬಾರಿ ಜಿಲ್ಲೆಗೆ ಆಗಮಿಸಿದ್ದಾರೆ. ಆದರೆ, ಹಾಗೆ ಬಂದವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಲ್ಲಿ ಎಷ್ಟು ಕಾಳಜಿ ವಹಿಸಿದ್ದಾರೆ. ಎಷ್ಟು ಸ್ಪಂದನೆ ತೋರಿದ್ದಾರೆ ಎಂಬ ಪ್ರಶ್ನೆ ಜನತೆಯದ್ದು. ಕೋವಿಡ್‌ ನಿಯಂತ್ರಣದ ವಿಚಾರದಲ್ಲಿ ಸಚಿವರು ಗಂಭೀರ ಕ್ರಮಗಳನ್ನು ಕೈಗೊಳ್ಳಲಿಲ್ಲ. ಅಧಿಕಾರಿಗಳು ಹೇಳಿದ್ದಕ್ಕೆ ತಲೆಯಾಡಿಸಿ ಹೋದದ್ದು ಬಿಟ್ಟರೆ ಅವರ ಸ್ವಂತಿಕೆಯಿಂದ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿಲ್ಲ. ಆಮ್ಲಜನಕ ಘಟಕ ಉದ್ಘಾಟಿಸಿ ಹೋದರೆ ಹೊರತೂ ಅದರ ಸಮರ್ಪಕ ಪೂರೈಕೆಗೆ ಗಮನಹರಿಸಲಿಲ್ಲ. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಸ್ವತಃ ಬಿಜೆಪಿ ಕಾರ್ಯಕರ್ತರು ಸಹ ಈ ವಿಚಾರದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಖಂಡರೊಬ್ಬರು ಜಿಲ್ಲಾಸ್ಪತ್ರೆಯಲ್ಲಿನ ಆಮ್ಲಜನಕ ಅಸಮರ್ಪಕ ಪೂರೈಕೆ ಬಗ್ಗೆ ವಾಟ್ಸಾಪ್‌ನಲ್ಲಿ ಸಚಿವರ ಗಮನ ಸೆಳೆದಿದ್ದಾರೆ. ಆದರೆ, ಅದಕ್ಕೆ ಸಚಿವರು ಸ್ಪಂದಿಸಿಲ್ಲ. ಆಗಲೇ ಸಚಿವರು ಎಚ್ಚೆತ್ತುಕೊಂಡಿದ್ದರೆ, ಇಂದಿನ ಅನಾಹುತ ತಪ್ಪಿಸಬಹುದಿತ್ತು ಎಂಬುದು ಅವರ ಅಭಿಪ್ರಾಯ.


from India & World News in Kannada | VK Polls https://ift.tt/3b1fT4x

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...