ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪಕ್ಕೆ ಸಿ.ಪಿ ಯೋಗೀಶ್ವರ್ ಗರಂ: ಸಿಎಂ ಪುತ್ರನ ವಿರುದ್ಧ ಪರೋಕ್ಷ ಆಕ್ರೋಶ..!

: ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಸಿಎಂ ಪುತ್ರ ಬಿ.ವೈ. ವಿರುದ್ಧ ಸಿ. ಪಿ. ಪರೋಕ್ಷವಾಗಿ ಹರಿಹಾಯ್ದಿದ್ದಾರೆ.‌ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ನನ್ನ ನೋವುಗಳನ್ನು ತೋಡಿಕೊಳ್ಳಲು ನಾನು ದೆಹಲಿಗೆ ಹೋಗುತ್ತಿರುತ್ತೇನೆ. ಪಕ್ಷ ನನ್ನನ್ನು ಎಂಎಲ್.ಸಿ ಮಾಡಿದೆ, ಸಚಿವ ಸ್ಥಾನ‌ ನೀಡಿದೆ. ನಾನು ನನ್ನ ಕೆಲ ಭಾವನೆಗಳನ್ನ, ನನ್ನ ನೋವುಗಳನ್ನ ಹೈಕಮಾಂಡ್ ಮುಂದೆ ತೋಡಿಕೊಳ್ಳಬೇಕು. ಹೀಗಾಗಿ ದೆಹಲಿಗೆ ಹೋಗ್ತಿರ್ತೇನೆ. ಅದನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಲಿಕ್ಕೆ ಸಾಧ್ಯವಿಲ್ಲ ಎಂದರು. ನನ್ನ ನೋವುಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ. ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿರೋದು ನನ್ನ ಗಮನಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದರು. ನಾನು ಬೇರೆಯವರ ಮೇಲೆ ಯಾವುದೇ ಆರೋಪ ಮಾಡಿಲ್ಲ. ವರಿಷ್ಠರ ಮುಂದೆ ನನ್ನ ನೋವು ತೋಡಿಕೊಳ್ತೇನೆ. ನನ್ನ ಅಧಿಕಾರದಲ್ಲಿ ನನ್ನ ಮಗ ಮೂಗು ತೂರಿಸಿದ್ರೆ ಸರಿಯಲ್ಲ ಅದು. ಆದ್ರೆ ರಾಜ್ಯದಲ್ಲಿ ಇದೇ‌ ನಡಿಯುತ್ತಿದೆ ಎಂದು ಪರೋಕ್ಷವಾಗಿ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಆಕ್ಷೇಪವೆತ್ತಿದ್ದಾರೆ. ಕೆಲವು ವಿಚಾರ ಹಂಚಿಕೊಳ್ಳಲು ಆಗಲ್ಲ. ನಾನೊಬ್ಬ ಸಚಿವ. ಇವತ್ತು ನನ್ನ ಸಚಿವಗಿರಿಯನ್ನು ನನ್ ಮಗ ಚಲಾಯಿಸಿದ್ರೆ ನಾನು ಒಪ್ಪಲ್ಲ. ನನ್ನ ಅಧಿಕಾರದಲ್ಲಿ ಬೇರೆಯವರು ಮೂಗು ತೂರಿಸೋದು ಇಷ್ಟವಿಲ್ಲ. ಇದನ್ನು ನಾನು ಸೂಕ್ಷ್ಮವಾಗಿ ಹೇಳಿದೀನಿ, ಅರ್ಥ ಮಾಡ್ಕೊಳ್ಳಿ ಎಂದರು. ಪಕ್ಷದ ಕೆಲವು ಸ್ನೇಹಿತರು ನನ್ನ ಬಗ್ಗೆ ಮಾತಾಡ್ತಿರೋದು ಗೊತ್ತು. ಅದನ್ನು ಯಾರು ಮಾತಾಡಿಸ್ತಿರೋದು ಅಂತಲೂ ಗೊತ್ತು. ಯಾರ ಕುಮ್ಮಕ್ಕಿದೆ ಅಂತಲೂ ಗೊತ್ತು. ಇದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ ಇದು. ಮೂರು ರಾಜಕೀಯ ಪಕ್ಷಗಳು ಹೊಂದಾಣಿಕೆ ಮಾಡ್ಕೊಂಡಿವೆ. ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜತೆ ಹೊಂದಾಣಿಕೆ ಮಾಡ್ಕೊಂಡಿದೆ ನಮ್ಮ ಸರ್ಕಾರ ಎಂದು ಗರಂ ಆದರು. ಮುಖ್ಯಮಂತ್ರಿ ಬದಲಾವಣೆ ನನ್ನ ಉದ್ದೇಶ ಅಲ್ಲ. ಆ ಶಕ್ತಿ ನನಗಿಲ್ಲ. ನಾನು ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸ್ತಿದ್ದೇನೆ. ನನ್ನದೇ ಆದ ವಿಚಾರವನ್ನು ನಮ್ಮ‌ನಾಯಕರ ಮುಂದೆ ಹೇಳಿಕೊಂಡಿದ್ದೇನೆ. ಆ ಸಂದರ್ಭ ಬಂದಾಗ ಚರ್ಚೆ ಮಾಡುತ್ತೇನೆ. ನಮ್ಮ ಬೆಂಬಲ ಇದೆಯೋ ಇಲ್ಲವೋ ಅನ್ನೋದನ್ನು ನಾಲ್ಕು ಗೋಡೆ ಮಧ್ಯೆ ತಿಳಿಸುತ್ತೇನೆ ಎಂದು ಸಿ. ಪಿ. ಯೋಗೇಶ್ವರ್ ಹೇಳಿದರು.


from India & World News in Kannada | VK Polls https://ift.tt/34k8QjV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...