ಬೆಂಗಳೂರು: ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣ ಉಪಚುನಾವಣೆಯ ಮತಎಣಿಕೆ ನಡೆಯುತ್ತಿದ್ದು ಆರಂಭಿಕ ಹಂತದಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ ಮಸ್ಕಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 1420 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗೋಕಾಕನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 2489 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿಗೆ 1069 ಮತಗಳನ್ನು ಪಡೆದು ಹಿನ್ನೆಡೆಯಾಗಿದೆ. ಅಶ್ಲೀಲ ಸಿಡಿ ಎನ್ನಲಾಗುತ್ತಿರುವ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ ಜಾರಕಿಹೊಳಿಯ ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಭರ್ಜರಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರಿಗೆ ಹಿನ್ನಡೆಯಾಗಿದೆ. ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರ್ವಿಹಾಳ್ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಇದೀಗ ಕಮಲ ಪಕ್ಷದಿಂದ ಸ್ಪರ್ಧಿಸಿರುವ ಪ್ರತಾಪ್ಗೌಡ ಪಾಟೀಲ್ ನಡುವೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಗಿಂತ ತುಸು ಮುಂದಿದ್ದಾರೆ ಮಸ್ಕಿ ಉಪಚುನಾವಣೆಯಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ 2858 ಮತಗಳಿಂದ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ದಿವಂಗತ ಬಿ. ನಾರಾಯಣ ರಾವ್ ಪತ್ನಿ ಮಾಲಾ ಬಿ ನಾರಾಯಣ ರಾವ್ ಆರಂಭಿಕ ಹಂತದಲ್ಲಿ ಹಿನ್ನಡೆ ಉಂಟಾಗಿದೆ.ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಒಂದನೇ ಸುತ್ತು ಮುಕ್ತಾಯಗೊಂಡಿದ್ದು ಕಾಂಗ್ರೆಸ್ - 1562 ಬಿಜೆಪಿ -3736, ಜೆಡಿಎಸ್ -254 ಮತಗಳನ್ನು ಪಡೆದುಕೊಂಡಿದ್ದಾರೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಪ್ರಚಾರ ನಡೆಸಿತ್ತು. ಮೂರು ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು ಸದ್ಯ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿಯ ಫೈಟ್ ನಡೆಯುತ್ತಿದೆ.
from India & World News in Kannada | VK Polls https://ift.tt/3nM56Ar