ನಾಯಕತ್ವ ಬದಲಾವಣೆ ಚರ್ಚೆ, ಜಿಂದಾಲ್‌ಗೆ ಭೂಮಿ ಮಾರಾಟ ಗದ್ದಲ, ಕುತೂಹಲ ಕೆರಳಿಸಿದೆ ಸಚಿವ ಸಂಪುಟ ಸಭೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿರುವ ಸರ್ಕಾರದ ನಿರ್ಧಾರದ ವಿರುದ್ಧ ವ್ಯಕ್ತವಾಗುತ್ತಿರುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಗುರುವಾರ ನಡೆಯಲಿರುವ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು ಕೋವಿಡ್‌ ನಿರ್ವಹಣೆ ಹಾಗೂ ಇತರ ವಿಚಾರಗಳ ಕುರಿತಾದ ಚರ್ಚೆಗಳ ಜೊತೆಗೆ ಜಿಂದಾಲ್‌ಗೆ 3,667 ಎಕರೆ ಭೂಮಿ ಮಾರಾಟ ಮಾಡಿರುವ ಬಗ್ಗೆಯೂ ಅನೌಪಚಾರಿಕ ಚರ್ಚೆ ನಡೆಯುವ ಸಾಧ್ಯತೆ ಇದೆ. ಜಿಂದಾಲ್‌ಗೆ ಒಂದು ಎಕರೆಗೆ ಒಂದು ಕೋಟಿ ಬೆಲೆಬಾಳುವ 3,667 ಎಕರೆ ಜಮೀನನ್ನು 1.12 ಲಕ್ಷದಂತೆ ಮಾರಾಟ ಮಾಡಲು ನಿರ್ಧಾರ ಕೈಗೊಂಡಿದೆ. ಆದರೆ ಸರ್ಕಾರದ ಈ ನಡೆಗೆ ಬಿಜೆಪಿ ಶಾಸಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಈ ಹಿಂದೆ ಈ ನಡೆಯನ್ನು ಖಂಡಿಸಿತ್ತು. ಆದರೆ ಇದೀಗ ಆಡಳಿತಕ್ಕೆ ಬಂದ ಸಂದರ್ಭದಲ್ಲಿ ಭೂಮಿಯನ್ನು ಮಾರಾಟ ಮಾಡಿದೆ. ಇದು ಬಿಜೆಪಿ ಶಾಸಕರನ್ನು ಮುಜುಗರಕ್ಕೀಡುಮಾಡಿದೆ. ಈ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಅನೌಪಚಾರಿಕ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದರ ಹೊರತಾಗಿ ಕೋವಿಡ್ ನಿರ್ವಹಣೆ, ಲಸಿಕೆ ಖರೀದಿ ಹಾಗೂ ಮೂರನೇ ಅಲೆಯನ್ನು ಎದುರಿಸಲು ಕೈಗೊಳ್ಳಬೇಕಾಗಿರುವ ಮುಂಜಾಗರೂಕತಾ ಕ್ರಮಗಳ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಂಪುಟ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇರುವ ಇತರ ಪ್ರಮುಖ ನಿರ್ಧಾರಗಳು ಹೀಗಿದೆ *ಕರ್ನಾಟಕ ಕೃಷಿ ಪೀಡೆ ಮತ್ತು ರೋಗಗಳು (ತಿದ್ದುಪಡಿ ) ವಿಧೇಯಕ 2021ಕ್ಕೆ ಅನುಮೋದನೆ ಸಾಧ್ಯತೆ. *ಧಾರವಾಡ ಹಾಲು ಒಕ್ಕೂಟದ ವತಿಯಿಂದ ಹಾವೇರಿ ಜಿಲ್ಲೆಯ ಜಂಗಮನಕೊಪ್ಪ ಗ್ರಾಮದಲ್ಲಿ 1 ಲಕ್ಷ ಲೀ. ಸಾಮರ್ಥ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಯು.ಎಚ್.ಟಿ ಪ್ಯಾಕಿಂಗ್ ಘಟಕದ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದಿಂದ ರೂ. 15 ಕೋಟಿ ಅನುದಾನ ನೀಡುವ ಪ್ರಸ್ತಾವಣೆಗೆ ಅನುಮೋದನೆ ಸಾಧ್ಯತೆ. *ಕರ್ನಾಟಕ ಎಲೆಕ್ಟ್ರಿಕ್ ಮತ್ತು ಎನರ್ಜಿ ಸ್ಟೋರೇಜ್ ಪಾಲಿಸಿ 2017 ಕ್ಕೆ ತಿದ್ದುಪಡಿ ಮಾಡುವ ಸಾಧ್ಯತೆ. *2011 ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆನ್ನಲಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು/ ಸದಸ್ಯರುಗಳನ್ನು ಅಭಿಯೋಜನೆಗೊಳಪಡಿಸುವ (ಪ್ರಾಸಿಕ್ಯೂಷನ್) ನಿರ್ಧಾರ ಕೈಗೊಳ್ಳುವ ಸಾಧ್ಯತೆ. *ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಎರಡು ಸದಸ್ಯರುಗಳ ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರ ಸಾಧ್ಯತೆ *ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಸ್ನಾತಕ್ಕೋತ್ತರ ಬಾಲಕ- ಬಾಲಕಿಯರ ವಿದ್ಯಾರ್ಥಿಗಳ ಹಾಸ್ಟೆಲ್‌ ಕಟ್ಟಡ ಕಾಮಗಾರಿಗಳನ್ನು 46.20 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ಉಪಕರಣಗಳನ್ನು 12.02 ಕೋಟಿಗಳ ವೆಚ್ಚದಲ್ಲಿ ಖರೀದಿ ಮಾಡಲು ಆಡಳಿತ ಅನುಮೋದನೆ ಸಾಧ್ಯತೆ *ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು ಆದಿನಾರಾಯಣ ಹೊಸಹಳ್ಳಿ ಗ್ರಾಮದಲ್ಲಿ ಒಟ್ಟು 18-07 ಎಕರೆ/ ಗುಂಟೆ ಸರ್ಕಾರಿ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಬೆಂಗಳೂರಿಗೆ ಮಂಜೂರು ಮಾಡುವ ಸಾಧ್ಯತೆ *ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಎನ್‌ಐಡಿಯ ನೆರವಿನಡಿಯಲ್ಲಿ ವಿಜಯಪುರದ ಬಸವನ ಬಾಗೇವಾಡಿ ಮತ್ತು ಇಂಡಿ ತಾಲ್ಲೂಕುಗಳಲ್ಲಿ 1431 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ *ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಎರಡನೇ ತಿದ್ದುಪಡಿ ವಿಧೇಯಕ 2021 ಕ್ಕೆ ಘಟನೋತ್ತರ ಅನುಮೋದನೆ ಸಾಧ್ಯತೆ *ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರೆ ಕಾಯ್ದೆಗಳು ತಿದ್ದುಪಡಿ ವಿಧೇಯಕ 2021 ಕ್ಕೆ ಅನುಮೋದನೆ ಸಾಧ್ಯತೆ


from India & World News in Kannada | VK Polls https://ift.tt/3vq9tUJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...