ಬೆಂಗಳೂರು: ಕೋವಿಡ್ ವ್ಯಾಕ್ಸಿನನ್ನು ಅಕ್ರಮ ದಂಧೆ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತಾಗಿ ಮಾತನಾಡಿದ ಅವರು, ಕೊರೊನಾ ಲಸಿಕೆ ದಂಧೆ ಪ್ರಕರಣದಲ್ಲಿ ಭಾಗಿಯಾದವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಎಚ್ಚರಿಸಿದರು. ರೆಮಿಡಿಸಿವಿರ್ ಇಂಜಕ್ಷನ್ ವಿಷಯದಲ್ಲಿ ಈ ರೀತಿ ಮಾಡಿದ್ರು, ಆ ನಂತರ ಅದು ಸರಿ ಹೋಗಿದೆ, ಇವಾಗ ವ್ಯಾಕ್ಸಿನೇಷನ್ ಅಕ್ರಮ ದಂಧೆಗೆ ನಡೆದರೆ ಅದನ್ನು ಬಿಡಲ್ಲಇಂತವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ ಎಂದರು. ರಾಜ್ಯದಲ್ಲಿ ವ್ಯಾಕ್ಸಿನೇಷನ್ ಕೊರತೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊರತೆ ನೀಗಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗ್ತಿದೆ. ಖಾಸಗಿಯವರು ಹೆಚ್ಚಿನ ದರದಲ್ಲಿ ವ್ಯಾಕ್ಸಿನೇಷನ್ ನೀಡುವ ಸಂಬಂಧ ಕೇಂದ್ರ ಒಂದು ನಿಯಮ ರೂಪಿಸುವ ಅಗತ್ಯ ಇದೆ ಎಂದರು. ಸೋಮವಾರದಿಂದ ಎರಡನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿದೆ. ಇನ್ನಷ್ಟು ಬಿಗಿ ಕ್ರಮಕ್ಕೆ ಸೂಚನೆಯನ್ನು ರಾಜ್ಯದ ಪೊಲೀಸರಿಗೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವ ವಾಹನಗಳ ಸೀಜ್ ಮಾಡುವ ಪ್ರಕರಣ ಮುಂದುವರೆಸಲಾಗುತ್ತೆ. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಡುವವರನ್ನು ಸುಮ್ಮನೆ ಬಿಡಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಲಾಕ್ ಡೌನ್ ಪರಿಣಾಮಕಾರಿಯಾಗ್ತಿದೆ ಆದರೆ ಪಟ್ಟಣ ಪ್ರದೇಶದಲ್ಲಿ ಉಲ್ಲಂಘನೆ ಪ್ರಕರಣ ಜಾಸ್ತಿ ಯಾಗುತ್ತಿವೆ ಎಂದರು.
from India & World News in Kannada | VK Polls https://ift.tt/3feBIjF