ಸಿಎಸ್‌ಕೆ ಬ್ಯಾಟಿಂಗ್‌ ಕೋಚ್‌ ಮೈಕಲ್‌ ಹಸ್ಸಿಗೂ ಕೊರೊನಾ ಪಾಸಿಟಿವ್‌!

ಹೊಸದಿಲ್ಲಿ: ಬೌಲಿಂಗ್‌ ಕೋಚ್‌ ಲಕ್ಷ್ಮಿಪತಿ ಬಾಲಾಜಿಗೆ ಪಾಸಿಟಿವ್‌ ಬಂದ ಒಂದು ದಿನದ ಬಳಿಕ ಬ್ಯಾಟಿಂಗ್‌ ಕೋಚ್‌ ಮೈಕಲ್‌ ಹಸ್ಸಿಗೂ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಐಸೋಲೇಷನ್‌ಗೆ ಒಳಪಡಿಸಲಾಗಿದೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ವಿಕೆಟ್‌ ಕೀಪರ್‌, ಬ್ಯಾಟ್ಸ್‌ಮನ್‌ ವೃದ್ದಿಮಾನ್ ಸಹಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹಿರಿಯ ಸ್ಪಿನ್ನರ್‌ ಅಮಿತ್‌ ಮಿಶ್ರಾ ಅವರಿಗೆ ಕೋವಿಡ್‌ ಪಾಸಿಟಿವ್ ಬಂದಿತ್ತು. ಇದರ ಬೆನ್ನಲ್ಲೆ ಬಿಸಿಸಿಐ ಹಾಗೂ ಐಪಿಎಲ್‌ ಆಡಳಿತ ಮಂಡಳಿಗಳು ತುರ್ತು ಸಭೆ ನಡೆಸಿ 2021ರ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ನಿರ್ಧಾರವನ್ನು ಕೈಗೊಂಡಿತು. ಇದಾದ ಕೆಲವೇ ಗಂಟೆಗಳಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಬ್ಯಾಟಿಂಗ್‌ ಕೋಚ್‌ ಮೈಕಲ್‌ ಹಸ್ಸಿಗೂ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದತು. ಇದಕ್ಕೂ ಮುನ್ನ ಸೋಮವಾರ ಬೌಲಿಂಗ್‌ ಕೋಚ್‌ ಲಕ್ಷ್ಮಿಪತಿ ಬಾಲಾಜಿ, ಸಿಇಓ ವಿಶ್ವನಾಥನ್‌ ಹಾಗೂ ಬಸ್‌ ಕ್ಲೀನರ್‌ಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು. " ಅವರ ಕೋವಿಡ್‌-19 ಟೆಸ್ಟ್ ವರದಿ ಪಾಸಿಟಿವ್‌ ಬಂದಿತ್ತು, ನಂತರ ಎರಡನೇ ಬಾರಿ ಟೆಸ್ಟ್‌ ಮಾಡಿದರೂ ಮತ್ತೊಮ್ಮೆ ಅದೇ ಫಲಿತಾಂಶ ಮೂಡಿಬಂದಿದೆ," ಎಂದು ಐಪಿಎಲ್‌ ಮೂಲಗಳು ಪಿಟಿಐಗೆ ತಿಳಿಸಿವೆ. ಇನ್ನು ಸೋಮವಾರ ಕೋಲ್ಕತಾ ನೈಟ್‌ ರೈಡರ್ಸ್ ತಂಡದ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಹಾಗೂ ವೇಗಿ ಸಂದೀಪ್‌ ವಾರಿಯರ್ ಅವರಿಗೂ ಕೋವಿಡ್‌-19 ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್ ನಡುವಿನ ಪಂದ್ಯವನ್ನು ಮುಂದೂಡಲಾಗಿತ್ತು. ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಐಪಿಎಲ್ ಆಯೋಜನೆಯಲ್ಲಿ ಭಾಗವಹಿಸುವ ಇತರರ ಸುರಕ್ಷತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಬಿಸಿಸಿಐ ಬಯಸುವುದಿಲ್ಲ. ಎಲ್ಲಾ ಪಾಲುದಾರರ ಸುರಕ್ಷತೆ, ಆರೋಗ್ಯ ಮತ್ತು ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಪಿಎಲ್‌ ಮಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು. ಕೋವಿಡ್‌-19 ಎರಡನೇ ಅಲೆಯಿಂದಾಗಿ ಭಾರತ ಕಠಿಣ ಸಮಯವನ್ನು ಎದುರಿಸುತ್ತಿದೆ. ಇದರ ನಡುವೆಯೂ ನಾವು ಟೂರ್ನಿಯನ್ನು ಯಾವುದೇ ಅಡೆ ತಡೆಗಳಿಲ್ಲದೆ ಮುಂದುವರಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗಿತ್ತು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡುವುದು ಅನಿವಾರ್ಯ. ಹಾಗಾಗಿ, ಎಲ್ಲಾ ಆಟಗಾರರು ತಮ್ಮ-ತಮ್ಮ ಕುಟುಂಬಗಳಿಗೆ ಸೇರ್ಪಡೆಯಾಗಬೇಕು ಎಂದಿದೆ. ಅತ್ಯಂತ ಕಷ್ಟದ ಸಮಯದಲ್ಲೂ2021ರ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಆಯೋಜಿಸಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದ ಎಲ್ಲಾ ಆರೋಗ್ಯ ಕಾರ್ಯಕರ್ತರು, ರಾಜ್ಯದ ಅಸೋಸಿಯೇಷನ್‌ಗಳು, ಆಟಗಾರರು, ಸಹಾಯಕ ಸಿಬ್ಬಂದಿ, ಫ್ರಾಂಚೈಸಿಗಳು, ಪ್ರಾಯೋಜಕರು, ಪಾಲುದಾರರು ಮತ್ತು ಎಲ್ಲಾ ಸೇವಾ ಪೂರೈಕೆದಾರರಿಗೆ ಬಿಸಿಸಿಐ ಧನ್ಯವಾದಗಳನ್ನು ಅರ್ಪಿಸುತ್ತದೆ ಎಂದು ಐಪಿಎಲ್‌ ತಿಳಿಸಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3h2fvXf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...