ಬೆಂಗಳೂರು: ಕೋವಿಡ್ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ಈ ಕಾರಣಕ್ಕಾಗಿಯೇ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ರಾಜ್ಯಕ್ಕೆ 1750 ಮೆಟ್ರಿಕ್ ಟನ್ ಆಕ್ಸಿಜನ್ ಬೇಡಿಕೆ ಇದೆ. ಆದರೆ 850 ಮೆಟ್ರಿಕ್ ಟನ್ ಕೇಂದ್ರದಿಂದ ಭರವಸೆ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಆಕ್ಸಿಜನ್ ಪೂರೈಕೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಚಾಮರಾಜನಗರ ಘಟನೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವರ ರಾಜೀನಾಮೆ ಆಗ್ರಹಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿಸರ್ಕಾರವೇ ಇಲ್ಲ, ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಹೋಗಿಲ್ಲ. ಸಚಿವ ಸುರೇಶ್ ಕುಮಾರ್ ಸಂತ್ರಸ್ತರ ಕುಟುಂಬಸ್ಥರನ್ನು ಭೇಟಿ ಮಾಡಿದ್ರಾ? ಸಚಿವರು ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು. ಜನರ ಕಷ್ಟ ಸುಖದಲ್ಲಿ ನಾವು ಅವರಿಗೆ ಧ್ವನಿಯಾಗಿರಬೇಕು. ವಾಸ್ತವ ಅಂಶವನ್ನು ತಿಳಿಯುವುದು ಮುಖ್ಯ. ಬೇರೆ ಕಡೆಯಲ್ಲೂ ಆಕ್ಸಿಜನ್ ಇಲ್ಲದೆ ಜನರು ಸಾವನ್ನಪ್ಪಿದ್ದಾರೆ. ಜನರು ಗಾಬರಿ ಆಗುತ್ತಾರೆ ಎಂದು ಅಂಕಿಅಂಶಗಳನ್ನು ಮುಂದಿಡುತ್ತಿಲ್ಲ. ಗಾಬರಿಯಲ್ಲಿ ಸಾವನ್ನಪ್ಪಿದ್ದಾರುವ ಉದಾಹರಣೆಯೂ ಇದೆ ಎಂದರು. ಸರ್ಕಾರ ಜಾಗೃತ ರಾಗಿಲ್ಲ ಅಂದರೆ ಬಹಳ ಜನರನ್ನು ಕಳೆದುಕೊಳ್ಳಬೇಕಾಗುತ್ತದೆ. ಪ್ರತಿಯೊಬ್ಬರನ್ನು ಉಳಿಸಬೇಕು. ಆ ಕುಟುಂಬಕ್ಕೆ ಧೈರ್ಯ ತುಂಬಬೇಕು. ಎಷ್ಟೋ ಜನರ ಯುವಕರು ಸಾಯುತ್ತಿದ್ದಾರೆ. ಇದು ಕೆಟ್ಟ ಪರಿಣಾಮ ಸಮಾಜದಲ್ಲಿ ಬೀರುತ್ತದೆ. ಕೋವಿಡ್ ಕಾರಣದಿಂದಾಗಿ ಮುಂಜಾಗರೂಕತಾ ಕ್ರಮವಾಗಿ ನಮ್ಮ ಕುಟುಂಬದ ಮದುವೆಗಳನ್ನೂ ಮುಂದೂಡಲಾಗಿದೆ ಎಂದು ತಿಳಿಸಿದರು.
from India & World News in Kannada | VK Polls https://ift.tt/3vFTUIl