ಮದುವೆ ಮನೆಗೆ ಅಧಿಕಾರಿಗಳ ದಾಳಿ; ವಧುವನ್ನು ಬಿಟ್ಟು ಪರಾರಿಯಾದ ಮದುವೆ ಗಂಡು!

ಸಖರಾಯಪಟ್ಟಣ: ಕೋವಿಡ್ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಅದ್ಧೂರಿಯಾಗಿ ಮದುವೆ ನಡೆಯುತ್ತಿದ್ದ ಮನೆಗೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ವಧುವನ್ನು ಬಿಟ್ಟು ಮದುವೆ ಗಂಡು ಸೇರಿದಂತೆ ಎಲ್ಲರೂ ಪರಾರಿಯಾದ ಘಟನೆ ಚಿಕ್ಕಮಗಳೂರಿನ ಹೋಚಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕರೇಕಲ್ಲಹಳ್ಳಿಯಲ್ಲಿ ನಡೆದಿದೆ. ಕರೇಕಲ್ಲಹಳ್ಳಿಯ ಮನೆಯೊಂದರಲ್ಲಿ ನಿಯಮ ಮೀರಿ ಆಯೋಜಿಸಿದ್ದ ಮದುವೆ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ವಧು ಬಿಟ್ಟು ಮಿಕ್ಕವರು ಪರಾರಿಯಾಗಿದ್ದಾರೆ. ಮೇ 20ರಂದು ಆಯೋಜಿಸಿದ್ದ ಮದುವೆಯಲ್ಲಿ ಸುಮಾರು 40 ರಿಂದ 50 ಜನ ಭಾಗವಹಿಸಿದ್ದರು. ವಿಷಯ ತಿಳಿದ ಉಪವಿಭಾಗಾಧಿಕಾರಿ, ಪಿಡಿಒ ದಾಳಿ ನಡೆಸುತ್ತಿದ್ದಂತೆ ವಧು ಬಿಟ್ಟು ವರನೂ ಸೇರಿದಂತೆ ಎಲ್ಲರೂ ಪರಾರಿಯಾಗಿದ್ದು, ಮದುವೆ ಅರ್ಧಕ್ಕೆ ನಿಂತಿದೆ. ಆದರೆ, ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ ಅಧಿಕಾರಿಗಳು ಹೋಗುವಾಗ ಮದುವೆ ಪೂರ್ಣಗೊಂಡಿತ್ತು ಎಂದು ತಿಳಿದುಬಂದಿದ್ದು, ಸ್ಟೇಜ್ ಮೇಲೆ ನೂತನ ವಧು, ವರರು ಇದ್ದರು. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಬಂದಿದ್ದು ನೋಡಿ ವಧುವನ್ನು ಬಿಟ್ಟು ವರ ಪರಾರಿಯಾಗಿದ್ದಾನೆ. ಮದುವೆಗೆ ಬಂದಿದ್ದ ಅನೇಕ ಜನರು ಕೂಡ ದಿಕ್ಕಾಪಾಲಾಗಿ ಓಡಿದ್ದಾರೆ. ಮದುವೆಗೆ ಬಂದವರಿಗೆ ಭರ್ಜರಿ ಭೋಜನವನ್ನೂ ಸಿದ್ಧಪಡಿಸಲಾಗಿತ್ತು. ಅದನ್ನು ಅಲ್ಲಿಯೇ ಬಿಟ್ಟು ಜನರು ಓಡಿ ಹೋಗಿದ್ದಾರೆ. 10 ಜನರ ಸಮ್ಮುಖದಲ್ಲಿ ವಿವಾಹ ಮಾಡುತ್ತೇವೆ ಎಂದು ಅನುಮತಿ ಪಡೆದಿದ್ದರು. ಆದರೆ ನೂರಾರು ಜನರು ಸೇರಿದ್ದರು. ಬಳಿಕ ಅಧಿಕಾರಿಗಳು ಊಟ ಮಾಡುತ್ತಿದ್ದ ಊರಿನವರಿಗೆ ಬುದ್ಧಿ ಹೇಳಿ ಹೋಗಿದ್ದಾರೆ. ಕರ್ನಾಟಕ ಸರಕಾರ ಜಾರಿಗೊಳಿಸಿರುವ ನೂತನ ಲಾಕ್‌ಡೌನ್ ನಿಯಮದ ಪ್ರಕಾರ ಮದುವೆ ಕಾರ್ಯಕ್ರಮದಲ್ಲಿ ಕೇವಲ ಹತ್ತು ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಆದರೆ ಈ ಮದುವೆಯಲ್ಲಿ ಮಾತ್ರ ನಿಯಮ ಮೀರಿ ಐವತ್ತಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.


from India & World News in Kannada | VK Polls https://ift.tt/34eDbAi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...