ಬೆಂಗಳೂರು: ಮಾಜಿ ಸಚಿವ ಸಿ.ಡಿ ಪ್ರಕರಣ ತಿರುವು ಪಡೆದುಕೊಂಡಿದ್ದು ಸಿ.ಡಿಯಲ್ಲಿರುವ ವ್ಯಕ್ತಿ ನಾನೇ ಎಂದು ರಮೇಶ್ ಒಪ್ಪಿಕೊಂಡಿದ್ದಾರೆ. ಆದರೆ ಈ ಕುರಿತಾಗಿ ಪ್ರತಿಕ್ರಿಯೆ ನೀಡಲು ರಾಜ್ಯ ಗೃಹ ಸಚಿವ ರಮೇಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಾತನಾಡುವುದು ಸರಿಯಲ್ಲ. ಇದರ ಬಗ್ಗೆ ರಿಯಾಕ್ಟ್ ಮಾಡಲ್ಲ ಎಂದರು. ಇದೇ ಸಂದರ್ಭದಲ್ಲಿ ಕೋವಿಡ್ ಕುರಿತಾಗಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಬುಧವಾರ ಸಿಎಂ ಬಿಎಸ್ ಯಡಿಯೂರಪ್ಪ ಹೆಚ್ಚು ಸೋಂಕು ಇರೋ ಪಂಚಾಯತಿಗಳ ಅಧಿಕಾರಿಗಳು,ಅಧ್ಯಕ್ಷರು ಜತೆ ವಿಡಿಯೋ ಸಂವಾದ ಮಾಡಿ.ಅಗತ್ಯ ಸೂಚನೆ ನೀಡುತ್ತಾರೆ ಎಂದು ತಿಳಿಸಿದರು. ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳಲ್ಲಿ ಹೆಚ್ಚು ಕ್ರಮ ಕೈಗೊಳ್ಳಲು ತಹಶೀಲ್ದಾರ್ ಮತ್ತು ಪಂಚಾಯತಿಗೆ ಸಿಎಂ ಜವಾಬ್ದಾರಿ ನೀಡಲಿದ್ದಾರೆ.ಗ್ರಾಮೀಣ ಭಾಗದಲ್ಲಿ ಸೊಂಕು ಹೆಚ್ಚಳ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ ಮಾಡಲಾಗಿದೆ.ಮೈಕ್ರೋ ಝೋನ್ ಹಂತದಲ್ಲಿ ಸೊಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು. ಮೈಕ್ರೋ ಕಂಟೈನ್ಮೆಂಟ್ ಝೋನ್ ನಲ್ಲಿ ಒಂದು ಸಮಿತಿ ರಚನೆ ಮಾಡುತ್ತೇವೆ. ಸಮಿತಿಯಲ್ಲಿ ಸ್ಥಳೀಯ ಪೊಲೀಸರು, ಸ್ಥಳೀಯ ಅಧಿಕಾರಿಗಳು ಇರುತ್ತಾರೆ. ಸೋಂಕಿತರಿಗೆ ಔಷಧ ವಿತರಣೆ ಮಾಡಲು ಮತ್ತು ಸೊಂಕು ಹರಡದಂತೆ ನಿಗಾವಹಿಸಲು ಈ ಸಮಿತಿ ಕೆಲಸ ಮಾಡಲಿದೆ ಎಂದು ಮಾಹಿತಿ ನೀಡಿದರು. ಲಾಕ್ ಡೌನ್ ಮತ್ತು ಕೆಲ ಒಡಾಟಗಳಿಗೆ ನಿರ್ಭಂದ ಜಾರಿಗೆ ತರಲು ಸ್ಥಳೀಯ ಆಡಳಿತಕ್ಕೆ ಹೊಣೆ ನೀಡಲಾಗಿದೆ. ಕೋವಿಡ್ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲು ಸೋಮವಾರ ಸಂಜೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಕೊವೀಡ್ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೆ ಬ್ಲಾಕ್ ಫಂಗಸ್ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ. ಬ್ಲಾಕ್ ಫಂಗಸ್ ಸಂಬಂಧ ಕೇಂದ್ರ ಸಚಿವ ಸದಾನಂದಗೌಡರ ಜೊತೆ ಚರ್ಚೆ ಮಾಡಲಾಗಿದೆ. ಅವರು ೧೦೦೦ಕ್ಕೂ ಹೆಚ್ಚು ಇಂಜೆಕ್ಷನ್ ಕೊಡುವ ಬಗ್ಗೆ ಭರವಸೆ ನೀಡಿದ್ದಾರೆ. ಇನ್ನು ಮಕ್ಕಳಿಗೆ ಕೊವೀಡ್ ಆದರೆ ಅವರಿಗೆ ಜಿಲ್ಲೆಗಳಲ್ಲಿ ವಿಶೇಷ ವಾರ್ಡ್ ಹಾಗೂ ಐಸಿಯು ಬೆಡ್ ವ್ಯವಸ್ಥೆ ಮಾಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
from India & World News in Kannada | VK Polls https://ift.tt/3ukHLHA