ಬೆಂಗಳೂರು: ಅವಾಂತರಗಳನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಈಗಾಗಲೇ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದೇನೆ. ಸಭೆಯಲ್ಲಿ ಮಳೆಯ ಅವಾಂತರಗಳನ್ನು ಎದುರಿಸಲು ಸಜ್ಜಾಗುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮಳೆ ಹಾಗೂ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬೆಂಗಳೂರಿನ 8 ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯಂತ್ರಣಕೊಠಡಿಗಳು ಕಾರ್ಯನಿರ್ವಹಿಸಲಿದ್ದು, ಅನ್-ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು, ಮತ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ. ರಸ್ತೆ ಬದಿ ಮಳೆನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡಮೋರಿಗಳ ಹೂಳು ತೆಗೆಯುವುದು, ರಾಜ ಕಾಲುವೆಗೆ ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ. ಬೆಳಗಾವಿ ಪ್ರವಾಸ ಸಿಎಂ ಅವರು ಶುಕ್ರವಾರ ಬೆಳಗಾವಿ ಪ್ರವಾಸಕ್ಕೆ ತೆರಳಿದ್ದಾರೆ. ಕೋವಿಡ್ ನಿರ್ವಹಣೆ ಕುರಿತಾಗಿ ಬೆಳಗಾವಿಯಲ್ಲಿ ಅಧಿಕಾರಿಗಳು ಹಾಗೂ ಸಚಿವರು, ಶಾಸಕರ ಜೊತೆಗೆ ಸಭೆಯನ್ನು ನಡೆಸಲಿದ್ದಾರೆ. ಅಲ್ಲಿಂದ ಹುಬ್ಬಳ್ಳಿಗೂ ತೆರಳಿ ಸಭೆಯನ್ನು ನಡೆಸಲಿದ್ದಾರೆ.
from India & World News in Kannada | VK Polls https://ift.tt/3cgm2L4