'ಇದು ರೋಹಿಣಿ ಸಿಂಧೂರಿ ಅವರ ನೈತಿಕತೆಯ ಪತನ': ಈಜುಕೊಳ ವಿವಾದ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಡಿ. ರೂಪಾ ಕಿಡಿ

ಬೆಂಗಳೂರು: ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರಕಾರಿ ನಿವಾಸದ ಬಳಿಕ ನಿಯಮಗಳನ್ನು ಗಾಳಿಗೆ ತೂರಿ ಸುಮಾರು 32 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಆರೋಪ ಐಎಎಸ್ ಅಧಿಕಾರಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈ ಈಜುಕೊಳ ನಿರ್ಮಾಣಕ್ಕೆ ತಾಂತ್ರಿಕ ವರ್ಗ ಮತ್ತು ಲೋಕೋಪಯೋಗಿ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ. ಆಡಳಿತಾತ್ಮಕ ಮಂಜೂರಾತಿ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರು ರಾಜ್ಯ ಸರಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ರಾಜ್ಯವು ಸಂಕಷ್ಟವನ್ನು ಎದುರಿಸುತ್ತಿರುವ ಸಮಯದಲ್ಲಿ ಸಾರ್ವಜನಿಕರ ಹಣವನ್ನು ಈಜುಕೊಳ ನಿರ್ಮಿಸಲು ಬಳಸಿರುವುದನ್ನು ಐಪಿಎಸ್ ಅಧಿಕಾರಿ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರೂಪಾ, ಈ ನಡೆಯು ರೋಹಿಣಿ ಅವರ ನೈತಿಕ ಪತನವನ್ನು ತೋರಿಸುತ್ತದೆ ಎಂದಿದ್ದಾರೆ. 'ಕೋರೊನಾ ಹಾಗು ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ, ಸಾರ್ವಜನಿಕ ಹಣವನ್ನು ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನವನ್ನು ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ. ಕಟ್ಟುವುದನ್ನು ಮುಂದೂಡಬಹುದಾಗಿತ್ತು' ಎಂದು ಡಿ ರೂಪಾ ಟ್ವಿಟ್ಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಆಯುಕ್ತರು ರಾಜ್ಯ ಸರಕಾರಕ್ಕೆ ಸಲ್ಲಿಸಿರುವ ವರದಿಗೆ ಪ್ರತಿಕ್ರಿಯಿಸಿರುವ ರೋಹಿಣಿ ಸಿಂಧೂರಿ, ಈಜುಕೊಳ ಕೋವಿಡ್ ಕಾಲದಲ್ಲಿ ನಿರ್ಮಾಣವಾಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಿರ್ಮಾಣ ಕಾರ್ಯವನ್ನು ಡಿಸೆಂಬರ್‌ನಲ್ಲಿ ಆರಂಭಿಸಲಾಗಿತ್ತು. ಆ ವೇಳೆ ಕೋವಿಡ್ ಹರಡುತ್ತಿರಲಿಲ್ಲ. ಎರಡನೆಯ ಅಲೆಯ ಯಾವ ಸೂಚನೆಯೂ ಇರಲಿಲ್ಲ. ಇದಕ್ಕೆ ಕೋವಿಡ್ ನಿಧಿಯ ದುರ್ಬಳಕೆಯಾಗಿಲ್ಲ. ನಿರ್ಮಿತ ಕೇಂದ್ರದ ಹಣ ಬಳಕೆಯಾಗಿದೆ. ನಿರ್ಮಿತಿ ಕೇಂದ್ರದ ತಾಂತ್ರಿಕ ಸಮಿತಿ ಮತ್ತು ಕಾರ್ಯಕಾರಿ ಸಮಿತಿಗಳು ಆಡಳಿತಾತ್ಮಕ ಒಪ್ಪಿಗೆ ನೀಡಿದ್ದವು ಎಂದು ರೋಹಿಣಿ ತಿಳಿಸಿದ್ದಾರೆ.


from India & World News in Kannada | VK Polls https://ift.tt/3vSIAbE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...