‘ಕೆಎಸ್ಆರ್‌ಟಿಸಿ’ ವಿವಾದ: ಕರ್ನಾಟಕ - ಕೇರಳ ಸಾರಿಗೆಯಲ್ಲಿ ಪೈಪೋಟಿ ಏನಿಲ್ಲ! ಲಕ್ಷ್ಮಣ ಸವದಿ ಸ್ಪಷ್ಟನೆ

ಬೆಂಗಳೂರು: ಕೇರಳವು ಕೆಎಸ್ಆರ್‌ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ಮಾರ್ಕ್ ರೆಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ತಿಳಿಸಿದ್ದಾರೆ. ಈ ಕುರಿತಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ. ಆದರೆ ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದೆ. ಏಕೆಂದರೆ ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್ಮಾರ್ಕ್ ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ. ಕರ್ನಾಟಕವಾಗಲಿ ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ ಎಂದಿದ್ದಾರೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು. ಇದು ಕೇರಳಕ್ಕೆನು ಸಂಭ್ರಮಪಡುವಂತ ವಿಚಾರವೇನಲ್ಲ. ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ ಎಂಬ ಹೆಸರಿದ್ದರೆ ಅದರಿಂದ ಕೇರಳ ರಾಜ್ಯದ ಕೆಎಸ್ಆರ್ಟಿಸಿ ಸಂಸ್ಥೆಗೆ ಯಾವುದೇ ನಷ್ಟವೇನಿಲ್ಲ. ಕರ್ನಾಟಕವು ಕೇರಳದ ಸಾರಿಗೆ ಸಂಸ್ಥೆಗಳೊಂದಿಗೆ ಯಾವತ್ತೂ ಪೈಪೋಟಿಗೆ ಇಳಿದಿದ್ದಿಲ್ಲ. ಎಂಬುದನ್ನು ಕೇರಳ ಮೊದಲು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇಂತಹ ವಿಷಯಗಳಲ್ಲಿ ಅನಗತ್ಯವಾಗಿ ವಿವಾದಗಳನ್ನು ಹೆಚ್ಚು ಮಾಡುತ್ತಾ ಪರಸ್ಪರ ರಾಜ್ಯಗಳಲ್ಲಿ ವಿವಾದಗಳನ್ನು ಬೆಳೆಸುವ ಪರಿಪಾಠಕ್ಕೆ ನಾವೆಲ್ಲರೂ ಅಂತ್ಯ ಹಾಡಬೇಕು. ದೇಶದ ಹಿತದೃಷ್ಟಿಯಿಂದ ರಾಜ್ಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯವಾದ ವಿಷಯ ಎಂದು ಅವರು ಮನವಿ ಮಾಡಿದ್ದಾರೆ.


from India & World News in Kannada | VK Polls https://ift.tt/3uLcM86

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...