ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ಕಾರಣರಾಗಿದ್ದ ಸಚಿವ ಸಿ.ಪಿ ಯೋಗೀಶ್ವರ್ ಇದೀಗ ಟೆಂಪಲ್ ರನ್ನಲ್ಲಿ ಬ್ಯುಸಿಯಾಗಿದ್ದಾರೆ. ಮಂಗಳವಾರ ಸುತ್ತೂರು ಶಾಖಾ ಮಠದಕ್ಕೆ ಸಿಪಿವೈ ಭೇಟಿ ನೀಡಿ ಸುತ್ತೂರು ಶ್ರೀಗಳ ಜೊತೆಗೆ ಚರ್ಚೆ ನಡೆಸಿದ್ದರು. ಇದೀಗ ರಾಮನಗರದಲ್ಲಿ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಚಿವರ ಟೆಂಪಲ್ ರನ್ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ ಸುತ್ತೂರು ಶಾಖಾ ಮಠಕ್ಕೆ ಪೊಲೀಸ್ ಭದ್ರತೆ ಇಲ್ಲದೆ ಆಗಮಿಸಿದ್ದರು. ಖಾಸಗಿ ಕಾರಿನಲ್ಲಿ ದಿಢೀರ್ ಭೇಟಿ ನೀಡಿ ಸ್ವಾಮೀಜಿ ಬಳಿ ಮಾತುಕತೆ ನಡೆಸಿದ್ದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಅವರು ನನ್ನ ಮನಸ್ಸಿನ ನೋವನ್ನು ಹೇಳಿಕೊಂಡಿದ್ದೇನೆ. ಇವಾಗ ಮನಸ್ಸು ಹಗುರವಾಗಿದೆ ಎಂದಿದ್ದರು. ಬುಧವಾರ ರಾಮನಗರದಲ್ಲಿ ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು . ನಂತರ ಸುದ್ದಿಗಾರರೊಂದಿಗೆ ಮಾತನಾಡಿ ನೆನ್ನೆ ಮೈಸೂರಿನಲ್ಲಿ ಜೆಎಸ್ಎಸ್ ಮಠಾಧೀಶರನ್ನು ಭೇಟಿ ಮಾಡಿದ್ದೇನೆ ಇಂದು ಚನ್ನಪಟ್ಟಣದಲ್ಲಿ ಇದ್ದ ಕಾರಣ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿದ್ದೇನೆ ಇನ್ನು ಮೂರ್ನಾಲ್ಕು ಮಠಾಧೀಶರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ನಾನು ಆಗಿಂದಾಗ್ಗೆ ಮಠಾಧೀಶರನ್ನು ಭೇಟಿ ಮಾಡುತ್ತಿರುತ್ತೇನೆ ಇದೀಗ ವಿಶೇಷ ಸಂದರ್ಭವಾಗಿದ್ದು ಮಾಧ್ಯಮದವರ ಕಣ್ಣಿಗೆ ಬಿದ್ದಿದ್ದೇನೆ ಎಂದು ಮಾರ್ಮಿಕವಾಗಿ ನುಡಿದರು . ತಾವು ಪಕ್ಷದಲ್ಲಿದ್ದು ಪಕ್ಷದ ಚೌಕಟ್ಟಿನೊಳಗೆ ತಮ್ಮ ಇತಿಮಿತಿಯಲ್ಲಿ ಕೆಲಸ ಮಾಡುವುದಾಗಿ ಹೇಳಿದರು. ಮಾಧ್ಯಮದವರ ಎಲ್ಲಾ ಪ್ರಶ್ನೆಗಳಿಗೆ ಬಹಿರಂಗವಾಗಿ ಉತ್ತರ ಕೊಡಲು ಆಗುವುದಿಲ್ಲ ಎಂದರು.ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ದೊಡ್ಡ ಜವಾಬ್ದಾರಿ ತಮಗಿಲ್ಲ ದಿನೇ ದಿನೇ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂದರು. ಕೊರೊನ ಸೋಂಕನ್ನು ಸಂಪೂರ್ಣ ನಿಯಂತ್ರಣಕ್ಕೆ ತರಬೇಕು ಎಂದು ಇದೇ ವೇಳೆ ಸಚಿವರು ತಿಳಿಸಿದರು.
from India & World News in Kannada | VK Polls https://ift.tt/3wI2ua6