ಬೆಂಗಳೂರು: ರಾಜ್ಯಕ್ಕೆ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ ಸೇರಿದಂತೆ ಕೇಂದ್ರ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ನಿಯೋಗ ಶುಕ್ರವಾರ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಲಿದೆ. ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ಶುಕ್ರವಾರ ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನ ರಸ್ತೆಯ ರಾಜ್ಯಪಾಲರ ಕಚೇರಿಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರ ಲಸಿಕೆ ವಿಚಾರದಲ್ಲಿ ನಡೆದುಕೊಳ್ಳುತ್ತಿರುವ ಕ್ರಮವನ್ನು ಖಂಡಿಸಿ ಮನವಿ ಸಲ್ಲಿಸಲಿದೆ. ಕೇಂದ್ರ ಸರ್ಕಾರ ರಾಷ್ಟ್ರದ ಜನತೆಗೆ ಉಚಿತವಾಗಿ ಲಸಿಕೆ ನೀಡಬೇಕೆಂದು ಒತ್ತಾಯ ಮಾಡಿ ರಾಷ್ಟ್ರಪತಿಗಳಿಗೆ ಮನವಿಯನ್ನು ರಾಜ್ಯಪಾಲರ ಮೂಲಕ ನೀಡಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ. ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ಪೂರೈಕೆಯಾಗಲಿರುವ 45 ಲಕ್ಷ ಡೋಸ್ ಲಸಿಕೆ ಮತ್ತು ರಾಜ್ಯ ಸರ್ಕಾರ ಖರೀದಿಸುತ್ತಿರುವ ಲಸಿಕೆ ಪೈಕಿ 13.7 ಲಕ್ಷ ಡೋಸ್ ಸೇರಿದಂತೆ ಒಟ್ಟು 58.71 ಲಕ್ಷ ಡೋಸ್ ಕೊರೊನಾ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಆದರೆ ಲಸಿಕೆಯಲ್ಲಿ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ. ಉಚಿತ ಲಸಿಕೆ ನೀಡುವ ಬದಲಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬುವುದು ಕಾಂಗ್ರೆಸ್ ಆರೋಪವಾಗಿದೆ. ಅಲ್ಲದೆ ಕೋವಿಡ್ ನಿಯಂತ್ರಣ ಮಾಡಲು ಲಸಿಕೆ ಪಾತ್ರ ಬಹುಮುಖ್ಯವಾಗಿದ್ದು ಮೊದಲ ಡೋಸ್ ಲಸಿಕೆ ಪಡೆದವರಿಗೆ ಎರಡನೇ ಡೋಸ್ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲು ಮಾಡಲಿದೆ.
from India & World News in Kannada | VK Polls https://ift.tt/3chiFTP