ಗುರುವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಬಿಎಸ್‌ವೈ, ಲಾಕ್‌ಡೌನ್ ಕುರಿತಾಗಿ ನಿರ್ಧಾರ ಪ್ರಕಟ?

ಬೆಂಗಳೂರು: ಸಿಎಂ ಬಿಎಸ್‌ ಯಡಿಯೂರಪ್ಪ ಗುರುವಾರ ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದು ಲಾಕ್‌ಡೌನ್ ಕುರಿತಾಗಿ ನಿರ್ಧಾರ ಪ್ರಕಟ ಮಾಡುವ ಸಾಧ್ಯತೆ ಇದೆ. ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈಗಾಗಲೇ ಲಾಕ್‌ಡೌನ್ ಮುಂದುವರಿಸಬೇಕಾ ಬೇಡವೋ ಎಂಬ ಕುರಿತಾಗಿ ತಜ್ಞರು ಹಾಗೂ ಸಚಿವರ ಜೊತೆಗೆ ಸಿಎಂ ಸಭೆ ನಡೆಸಿದ್ದಾರೆ. ಆದರೆ ಇನ್ನೊಂದು ಸುತ್ತಿನ ಸಭೆಯನ್ನು ನಡೆಸಿ 5 ನೇ ತಾರೀಕಿನಂದು ಲಾಕ್‌ಡೌನ್ ಕುರಿತಾಗಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಆದರೆ ಇದೀಗ ಸಿಎಂ ದಿಢೀರ್ ಪತ್ರಿಕಾಗೋಷ್ಠಿ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜಾರಿಯಲ್ಲಿರುವ ಲಾಕ್‌ಡೌನ್ ಜೂನ್ 7 ಕ್ಕೆ ಅಂತ್ಯಗೊಳ್ಳಲಿದೆ. ಆದರೆ ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ಈ ನಡುವೆ ರಫ್ತು ಆಧಾರಿತ ಕೈಗಾರಿಕೆಗಳಿಗೆ ಕಾರ್ಯಾಚರಣೆ ನಡೆಸಲು ಸಿಎಂ ಅನುಮತಿ ನೀಡಿದ್ದಾರೆ. 50 ಶೇಕಡಾ ಕೆಲಸಗಾರರನ್ನು ಬಳಕೆ ಮಾಡಿಕೊಂಡು ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಕೈಗಾರಿಕೆ ನಡೆಸಲು ಅವಕಾಶ ನೀಡಲಾಗಿದೆ. ಆದರೆ ಜೂನ್ ಏಳರ ಬಳಿಕ ಲಾಕ್‌ಡೌನ್ ವಿಸ್ತರಣೆ ಆದರೂ ಕೆಲವೊಂದು ಕ್ಷೇತ್ರಗಳಿಗೆ ಸಡಿಲಿಕೆ ಮಾಡುವ ಸಾಧ್ಯತೆ ಇದೆ. ಇನ್ನು ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡುವುದಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಸಂಜೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ ಈ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.


from India & World News in Kannada | VK Polls https://ift.tt/3pkZo9p

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...