ಹೊಸದಿಲ್ಲಿ: ಈ ವರ್ಷಾಂತ್ಯದಲ್ಲಿ ನಡೆಯಲಿರುವ 2021ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ತಂಡಗಳು ತಯಾರಿ ಆರಂಭಿಸಿವೆ. ಇದರ ನಡುವೆ ಹಲವು ಮಾಜಿ ಆಟಗಾರರು ಈ ಬಾರಿ ಚುಟುಕು ವಿಶ್ವಕಪ್ ಗೆಲ್ಲುವ ತಮ್ಮ ನೆಚ್ಚಿನ ತಂಡಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಅದರಂತೆ ಭಾರತ ತಂಡದ ಮಾಜಿ ಆಟಗಾರರಾದ ಹಾಗೂ ಅವರು ಟಿ20 ವಿಶ್ವಕಪ್ ಟೂರ್ನಿಗೆ ತಮ್ಮ ನೆಚ್ಚಿನ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಭಾರತದಲ್ಲಿ ನಡೆಯಬೇಕಿತ್ತು. ಆದರೆ, ಕೋವಿಡ್-19 ಎರಡನೇ ಅಲೆ ದೇಶದಲ್ಲಿ ಲಗ್ಗೆ ಇಟ್ಟ ಕಾರಣ ಹಾಗೂ ಮೂರನೇ ಅಲೆ ಸಂಭವಿಸಬಹುದೆಂಬ ಮುಂದಾಲೋಚನೆಯಿಂದ ಮಹತ್ವದ ಟೂರ್ನಿಯನ್ನು ಭಾರತದಿಂದ ಯುಎಇ ಹಾಗೂ ಒಮನ್ ರಾಷ್ಟ್ರಗಳಿಗೆ ಸ್ಥಳಾಂತರಿಸಲಾಯಿತು. ಅಜಯ್ ಜಡೇಜಾ ಹಾಗೂ ಅಜಿತ್ ಅಗರ್ಕರ್ ಅವರು ತಮ್ಮ ನೆಚ್ಚಿನ ವಿಶ್ವಕಪ್ ಭಾರತ ತಂಡದಲ್ಲಿ ನಾಯಕ , ರೋಹಿತ್ ಶರ್ಮಾ, ಕೆಎಲ್ ರಾಹುಲ್, ಹಾಗೂ ರಿಷಭ್ ಪಂತ್ ಅವರನ್ನು ಬ್ಯಾಟಿಂಗ್ ವಿಭಾಗಕ್ಕೆ ಆಯ್ಕೆ ಮಾಡಿದ್ದಾರೆ. ಜತೆಗೆ, ಸೂರ್ಯಕುಮಾರ್ ಯಾದವ್, ಪೃಥ್ವಿ ಶಾ ಹಾಗೂ ಇಶಾನ್ ಕಿಶನ್ ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ. ಆದರೆ, ಅನುಭವಿ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಅವರನ್ನು ಕೈ ಬಿಡುವ ಮೂಲಕ ದಿಗ್ಗಜರು ಅಚ್ಚರಿ ಮೂಡಿಸಿದ್ದಾರೆ. ಇನ್ನು ಆಲ್ರೌಂಡರ್ ವಿಭಾಗದಲ್ಲಿ ನಿರೀಕ್ಷೆಯಂತೆ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾಗೆ ಅವರಿಗೆ ಅವಕಾಶ ಕಲ್ಪಿಸಿದ್ದಾರೆ. ಇನ್ನು ಬೌಲಿಂಗ್ ವಿಭಾಕ್ಕೆ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್/ದೀಪಕ್ ಚಹರ್ ಹಾಗೂ ವರುಣ್ ಚಕ್ರವರ್ತಿ, ಯುಜ್ವೇಂದ್ರ ಚಹಲ್ ಹಾಗೂ ರಾಹುಲ್ ಚಹರ್ ಅವರನ್ನು ಆಯ್ಕೆ ಮಾಡಿದ್ದಾರೆ. ಈ ಮೇಲಿನ ಎಲ್ಲಾ ಆಟಗಾರರು ಸದ್ಯ ವಿಭಿನ್ನ ಸ್ವರೂಪದ ಪ್ರವಾಸದಲ್ಲಿ ತೊಡಗಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಮುಖ್ಯ ತಂಡ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಇನ್ನು ಶಿಖರ್ ಧವನ್ ನಾಯಕತ್ವದ ಭಾರತ ಯುವ ತಂಡ, ಶ್ರೀಲಂಕಾ ಪ್ರವಾಸದಲ್ಲಿದ್ದು, ಈಗಾಗಲೇ 2-1 ಅಂತರದಲ್ಲಿ ಓಡಿಐ ಸರಣಿ ಗೆದ್ದುಕೊಂಡಿದೆ. ಇನ್ನು ಭಾನುವಾರ ಮೊದಲನೇ ಟಿ20 ಪಂದ್ಯದಲ್ಲಿ ಭಾರತ 38 ರನ್ ಭರ್ಜರಿ ಜಯ ದಾಖಲಿಸಿದೆ. ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳಲು ಆಟಗಾರರಿಗೆ ಶ್ರೀಲಂಕಾ ವಿರುದ್ದದ ಸೀಮಿತ ಓವರ್ಗಳ ಸರಣಿ ಅತ್ಯಂತ ಮುಖ್ಯವಾಗಿದೆ. ಹಾಗಾಗಿ, ಶಿಖರ್ ಧವನ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಲ್ ಸೇರಿದಂತೆ ಹಲವು ಆಟಗಾರರಿಗೆ ಶ್ರೀಲಂಕಾ ಸರಣಿ ಅತ್ಯಂತ ಮುಖ್ಯವಾಗಿದೆ. ಕಳೆದ ಓಡಿಐ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಆ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅಲ್ಲದೆ, ಟಿ20 ಸರಣಿಯ ಆರಂಭಿಕ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದರು. ಇದೀಗ ಅವರು ಭಾರತ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗುವ ಆಟಗಾರರಲ್ಲಿ ಮುಂಚೂಣಿಯಲ್ಲಿದ್ದಾರೆ. ಅಜಯ್ ಜಡೇಜಾ, ಅಗರ್ಕರ್ ಆಯ್ಕೆ ಮಾಡಿದ : ವಿರಾಟ್ ಕೊಹ್ಲಿ(ನಾಯಕ), ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಲ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್/ದೀಪಕ್ ಚಹರ್, ಪೃಥ್ವಿ ಶಾ, ರವೀಂದ್ರ ಜಡೇಜಾ ಹಾಗೂ ವರುಣ್ ಚಕ್ರವರ್ತಿ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2ULVSKk