ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ವ್ಯಾಪಕವಾಗಿದ್ದು ಜು.28ರ ತನಕ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಪ್ರಾಮಾಣದಲ್ಲಿ ಮಳೆ ಸುರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಜು. 25 ಮತ್ತು 26ರಂದು ಯಲ್ಲೋ ಅಲರ್ಟ್ ನೀಡಲಾಗಿದೆ. ಜು.25ರ ನಂತರ ಉತ್ತರ ಕರ್ನಾಟದ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಯಾದಗಿರಿ, ಕಲಬುರಗಿ, ರಾಯಚೂರು, ಬೀದರ್, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಬಿಜಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಶನಿವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಮಂಚಿಕೇರೆಯಲ್ಲಿ 150 ಮಿ.ಮೀ, ಹಳಿಯಾಳ 94 ಮಿ.ಮೀ, ಸಿದ್ದಾಪುರ 77 ಮಿ.ಮೀ, ಶಿವಮೊಗ್ಗ ಜಿಲ್ಲೆ ತಾಳಗುಪ್ಪ 130 ಮಿ.ಮೀ, ಬೆಳಗಾವಿ ಜಿಲ್ಲೆ ಸಂಕೇಶ್ವರ 110 ಮಿ.ಮೀ, ನಿಪ್ಪಾಣಿ 90 ಮಿ.ಮೀ, ಕೊಡಗು ಜಿಲ್ಲೆ ಭಾಗಮಂಡಲ 101 ಮಿ.ಮೀ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ 76 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
from India & World News in Kannada | VK Polls https://ift.tt/3x14dXJ