ಪಡಿಕ್ಕಲ್‌ ಪದಾರ್ಪಣೆ? : 3ನೇ ಪಂದ್ಯಕ್ಕೆ ಭಾರತ ಪ್ಲೇಯಿಂಗ್‌ XIನಲ್ಲಿ 2 ಬದಲಾವಣೆ ಸಾಧ್ಯತೆ!

ಹೊಸದಿಲ್ಲಿ: ಓಡಿಐ ಸರಣಿ ವಶಪಡಿಸಿಕೊಂಡ ವಿಶ್ವಾಸದಲ್ಲಿರುವ ನಾಯಕತ್ವದ ಭಾರತ ತಂಡ ಇಂದು(ಶುಕ್ರವಾರ) ಮೂರನೇ ಹಾಗೂ ಅಂತಿಮ ಓಡಿಐ ಪಂದ್ಯದಲ್ಲಿ ವಿರುದ್ಧ ಸೆಣಸಲು ಸಜ್ಜಾಗುತ್ತಿದೆ. ಉಭಯ ತಂಡಗಳ ಕಾದಾಟಕ್ಕೆ ಕೊಲಂಬೊದ ಆರ್‌ ಪ್ರೇಮದಾಸ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ದವಾಗಿದೆ. ದೀಪಕ್‌ ಚಹರ್‌ ಹಾಗೂ ಭುವನೇಶ್ವರ್ ಕುಮಾರ್‌ ಅವರ 85 ರನ್‌ ಜೊತೆಯಾಟದ ನೆರವಿನಿಂದ ಎರಡನೇ ಓಡಿಐ ಪಂದ್ಯದಲ್ಲಿ ಟೀಮ್‌ ಇಂಡಿಯಾ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿತ್ತು. ಇದೀಗ ಶುಕ್ರವಾರದ ಪಂದ್ಯದಲ್ಲಿಯೂ ಗೆದ್ದು ಓಡಿಐ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಳ್ಳುವ ಯೋಜನೆಯನ್ನು ಭಾರತ ಹಾಕಿಕೊಂಡಿದೆ. ಕಳೆದ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದ ಶ್ರೀಲಂಕಾ ತಂಡ, ಶುಕ್ರವಾರದ ಪಂದ್ಯದಲ್ಲಿ ಗೆದ್ದು ಗೌರವ ಉಳಿಸಿಕೊಳ್ಳುವ ಕಡೆ ಗಮನ ಹರಿಸಲಿದೆ. ಆ ಮೂಲಕ ಮುಂದಿನ ಮೂರು ಪಂದ್ಯಗಳ ಟಿ20 ಸರಣಿಗೆ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಲಿದೆ. ಪೃಥ್ವಿ ಶಾಗೆ ವಿಶ್ರಾಂತಿ: ನಾಳಿನ (ಶುಕ್ರವಾರ) ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ಕೇವಲ 24 ಎಸೆತಗಳಲ್ಲಿ 43 ರನ್‌ ಸಿಡಿಸಿದ್ದ ಪೃಥ್ವಿ ಶಾ, ಎರಡನೇ ಪಂದ್ಯದಲ್ಲಿ ವನಿಂದು ಹಸರಂಗ ಸ್ಪಿನ್‌ ಮೋಡಿಗೆ ಕ್ಲೀನ್‌ ಬೌಲ್ಡ್ ಆಗಿದ್ದರು. ಅಲ್ಲದೆ, ಮೊದಲನೇ ಹಣಾಹಣಿಯಲ್ಲಿ ಬೌನ್ಸರ್‌ನಲ್ಲಿ ತಲೆಗೆ ಪೆಟ್ಟು ತಿಂದಿದ್ದ ಪೃಥ್ವಿಗೆ ಮೂರನೇ ಹಣಾಹಣಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಒಂದು ವೇಳೆ ಪೃಥ್ವಿ ಶಾಗೆ ವಿಶ್ರಾಂತಿ ನೀಡಿದ್ದೇ ಆದಲ್ಲಿ ಕನ್ನಡಿಗ ದೇವದತ್‌ ಪಡಿಕ್ಕಲ್‌ ಅಂತಾರಾಷ್ಟ್ರೀಯ ಓಡಿಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಬಹುದು. ಅಂದಹಾಗೆ, ದೇವದತ್‌ ಪಡಿಕ್ಕಲ್‌ ಕಳೆದ ಎರಡು ಆವೃತ್ತಿಗಳ ದೇಶಿ ಟೂರ್ನಿಗಳಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದಾರೆ. ಕಳೆದ ಆವೃತ್ತಿಯ ವಿಜಯ್‌ ಹಝಾರೆ ಟ್ರೊಫಿ ಟೂರ್ನಿಯಲ್ಲಿಯೂ ಅವರು 700ಕ್ಕೂ ಅಧಿಕ ರನ್‌ ಗಳಿಸಿದ್ದರು. ಅಲ್ಲದೆ, ಆರ್‌ಸಿಬಿ ತಂಡದ ಪರ 2021ರ ಐಪಿಎಲ್‌ ಟೂರ್ನಿಯ ಮೊದಲ ಅವಧಿಯಲ್ಲಿ ಮಿಂಚಿನ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದರು. ಮನೀಶ್‌ ಪಾಂಡೆ ಬದಲು ಸಂಜು ಸ್ಯಾಮ್ಸನ್‌? : ಶ್ರೀಲಂಕಾ ವಿರುದ್ಧ ಕಳೆದ ಎರಡೂ ಪಂದ್ಯಗಳಲ್ಲಿ ಕನ್ನಡಿಗ ಮನೀಶ್‌ ಪಾಂಡೆ ನಿರಾಸೆ ಮೂಡಿಸಿದ್ದಾರೆ. ಮೊದಲ ಪಂದ್ಯದಲ್ಲಿ 26 ರನ್‌ ಗಳಿಸಿ ಅನಗತ್ಯ ಹೊಡೆತಕ್ಕೆ ಕೈ ಹಾಕಿ ಕ್ಯಾಚ್ ಕೊಟ್ಟಿದ್ದ ಮನೀಶ್‌, ಎರಡನೇ ಹಣಾಹಣಿಯಲ್ಲಿ 37 ರನ್‌ ಗಳಿಸಿ ಅನಿರೀಕ್ಷಿತವಾಗಿ ರನೌಟ್‌ ಆಗಿದ್ದರು. ಈ ಕಾರಣದಿಂದ ಅವರನ್ನು ಮೂರನೇ ಪಂದ್ಯದಲ್ಲಿ ಕೈ ಬಿಟ್ಟು, ಅವರ ಬದಲು ಸಂಜು ಸ್ಯಾಮ್ಟನ್‌ ಅವರನ್ನು ಪ್ಲೇಯಿಂಗ್‌ ಇಲೆವೆನ್‌ಗೆ ಕರೆ ತರುವ ಸಾಧ್ಯತೆ ಇದೆ. ಅಂದಹಾಗೆ, ಮೊದಲನೇ ಓಡಿಐಗೆ ಇಶಾನ್‌ ಕಿಶನ್‌ ಬದಲು ಸಂಜು ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಆಗಿದ್ದರು. ಆದರೆ, ಅವರು ಗಾಯಕ್ಕೆ ತುತ್ತಾಗಿದ್ದರಿಂದ ಆಡಲು ಸಾಧ್ಯವಾಗಿರಲಿಲ್ಲ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್‌ ಇಲೆವೆನ್‌ ಭಾರತ: ಪೃಥ್ವಿ ಶಾ/ದೇವದತ್‌ ಪಡಿಕ್ಕಲ್‌, , ಇಶಾನ್‌ ಕಿಶನ್‌, ಮನೀಶ್‌ ಪಾಂಡೆ/ಸಂಜು ಸ್ಯಾಮ್ಸನ್‌, ಸೂರ್ಯಕುಮಾರ್‌ ಯಾದವ್‌, ಹಾರ್ದಿಕ್‌ ಪಾಂಡ್ಯ, ಕೃಣಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ದೀಪಕ್‌ ಚಹರ್‌, ಯುಜ್ವೇಂದ್ರ ಚಹಲ್‌, ಕುಲ್ದೀಪ್‌ ಯಾದವ್‌ ಶ್ರೀಲಂಕಾ: ಆವಿಷ್ಕಾ ಫೆರ್ನಾಂಡೊ, ಮಿನೋದ್‌ ಭನುಕ (ವಿ.ಕೀ), ಭನುಕ ರಾಜಪಕ್ಸ, ಧನಂಜಯ್‌ ಡಿ ಸಿಲ್ವಾ, ಚರಿತಾ ಅಸಲಂಕ, ದಸೂನ್‌ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ದುಷ್ಮಂಥ ಚಮೀರಾ, ಲಕ್ಷಣ್‌ ಸಂಡಕನ್‌, ಕಸೂನ್ ರಜಿತಾ ಪಂದ್ಯದ ವಿವರ ಮುಖಾಮುಖಿ: ದಿನಾಂಕ, ಸಮಯ: ಜುಲೈ 23, 2021-ಮಧ್ಯಾಹ್ನ 03:00ಕ್ಕೆ ಸ್ಥಳ: ಆರ್‌ ಪ್ರೇಮದಾಸ ಕ್ರೀಡಾಂಗಣ, ಕೊಲಂಬೊ ನೇರ ಪ್ರಸಾರ: ಸೋನಿ ನೆಟ್‌ವರ್ಕ್‌


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3ycifXK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...