ಬೆಂಗಳೂರು: ರಾಜ್ಯಾದ್ಯಂತ ಸೋಮವಾರದಿಂದ ಅನ್ಲಾಕ್ 3.0 ಜಾರಿಗೊಂಡಿದೆ. ಲಾಕ್ಡೌನ್ ನಿರ್ಬಂಧದಿಂದ ಸದ್ಯ ಮುಕ್ತಿ ಪಡೆದ ರಾಜ್ಯ ಸದ್ಯ ಸಹಜ ಸ್ಥಿತಿಯತ್ತ ಮರಳುತ್ತಿದೆ. ಕೊಡಗು, ಹಾಸನ ಹೊರತಾಗಿ ಉಳಿದ ಕಡೆಗಳಲ್ಲಿ ನಿರ್ಬಂಧಗಳು ಸಂಪೂರ್ಣ ಸಡಿಲುಗೊಂಡಿದೆ. ಈ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಪೂರ್ಣ ಪ್ರಮಾಣದಲ್ಲಿ ತೆರೆದಿದ್ದು ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಬೆಂಗಳೂರು ನಗರದಲ್ಲಿ ಬೆಳಗ್ಗೆನಿಂದಲೇ ವಾಹನ ದಟ್ಟಣೆ ಹೆಚ್ಚಾಗಿದೆ. ಬಿಎಂಟಿಸಿ ಬಸ್ಗಳು ಪೂರ್ಣ ಪ್ರಮಾಣದಲ್ಲಿ ಸಂಚಾರ ನಡೆಸುತ್ತಿವೆ. ಮೆಟ್ರೋದಲ್ಲೂ ಜನರ ಸಂಚಾರ ಹೆಚ್ಚಾಗಿದೆ. ಪ್ರಮುಖ ದೇವಸ್ಥಾನಗಳಲ್ಲೂ ಸೋಮವಾರದಿಂದ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ಸೋಮವಾರ ಮುಂಜಾನೆಯಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಕಿಂಗ್ ಬರತೊಡಗಿದ್ದಾರೆ. ಅಲ್ಲದೆ ಹೋಟೆಲ್ಗಳಲ್ಲೂ ಗ್ರಾಹಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಅನ್ಲಾಕ್ ಇದ್ದರೂ ಕೆಲವೊಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂಬ ಸೂಚನೆಯನ್ನು ಸರ್ಕಾರ ನೀಡಿದೆ. ಆದರೆ ಗಡಿ ಭಾಗದಲ್ಲಿ ಯಾವುದೇ ರೀತಿಯ ತಪಾಸಣೆ ಕಂಡುಬರುತ್ತಿಲ್ಲ. ಕೇರಳ, ಚೆನೈ ಗಡಿ ಭಾಗದಲ್ಲಿ ಯಾವುದೇ ತಪಾಸಣೆ ನಡೆಸದೆ ಇರುವುದು ಕಂಡು ಬರುತ್ತಿದೆ. ಮಹಾರಾಷ್ಟ್ರ, ಕೇರಳ ಭಾಗದಲ್ಲಿ ಡೆಲ್ಟಾ ವೈರಸ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿವೆ. ಈ ನಿಟ್ಟಿನಲ್ಲಿ ಬೇರೆ ರಾಜ್ಯದಿಂದ ಬರುವ ಪ್ರಯಾಣಿಕರ ತಪಾಸಣೆ ಹಾಗೂ ನೆಗೆಟ್ಯೂ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿತ್ತು. ಆದರೆ ಇದೀಗ ಅನ್ಲಾಕ್ ಮೊದಲನೇ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಬೆಂಗಳೂರಿನ ಅತ್ತಿಬೆಲೆ ಬೆಕ್ ಪೋಸ್ಟ್ ನಲ್ಲೂ ಯಾವುದೇ ತಪಾಸಣೆಗಳು ನಡೆಯುತ್ತಿಲ್ಲ. ಅನ್ಲಾಕ್ ಇದ್ದರೂ ಮೂರನೇ ಅಲೆಯ ಅಪಾಯದ ಬಗ್ಗೆ ತಜ್ಞರು ಈಗಾಗಲೆ ಕೆಲವೊಂದು ಎಚ್ಚರಿಕೆಗಳನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ಕೆಲವೊಂದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಜನ ಜೀವನ ಸಹಜ ಸ್ಥಿತಿಯತ್ತ ಮರಳುವ ನಿಟ್ಟಿನಲ್ಲಿ ಪೂರ್ಣ ಪ್ರಮಾಣದ ಅನ್ಲಾಕ್ ಅಗತ್ಯವಾಗಿದೆ. ಆದರೂ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕಾ ಕ್ರಮಗಳತ್ತ ಸರ್ಕಾರ ಗಮನ ಹರಿಸಬೇಕಿದೆ.
from India & World News in Kannada | VK Polls https://ift.tt/3yp15WC