ಬೆಂಗಳೂರು: ಅಮಾಯಕನ ವಿರುದ್ಧ ಸುಳ್ಳು ಗಾಂಜಾ ಕೇಸ್‌ ದಾಖಲಿಸಿದ್ದ 3 ಪೊಲೀಸ್‌ ಅಧಿಕಾರಿಗಳು ಅಮಾನತು

: ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಕಡಲೆಕಾಯಿ, ತರಕಾರಿ ಮಾರಾಟ ಮಾಡುತ್ತಿದ್ದ ಅಮಾಯಕನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಮಹಿಳಾ ಇನ್ಸ್‌ಪೆಕ್ಟರ್‌, ಈ ಪ್ರಕರಣದ ಆಂತರಿಕ ತನಿಖೆ ನಡೆಸುತ್ತಿದ್ದ ಡಿಸಿಪಿ ವಿರುದ್ಧವೇ ಸ್ಟಿಂಗ್‌ ಆಪರೇಷನ್‌ಗೆ ಯತ್ನಿಸಿದ್ದ ಸಬ್‌ ಇನ್ಸ್‌ಪೆಕ್ಟರ್‌ ಸೇರಿ ಮೂವರು ಪೊಲೀಸರನ್ನು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅಮಾನತುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಆರ್‌ಎಂಸಿ ಯಾರ್ಡ್‌ ಠಾಣೆಯ ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಆಂಜಿನಪ್ಪ ತರಕಾರಿ, ಸೊಪ್ಪು ಮಾರುವ ಶಿವರಾಜ್‌ ಎಂಬಾತನ ವಿರುದ್ಧ ಗಾಂಜಾ ಸೇವಿಸಿದ ಸುಳ್ಳು ಪ್ರಕರಣ ದಾಖಲಿಸಿ ದೈಹಿಕವಾಗಿ ಹಿಂಸೆ ನೀಡಿದ್ದರಿಂದ ಆತ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂಬಂಧ ವರದಿ ನೀಡುವಂತೆ ಡಿಸಿಪಿಗೆ ಸೂಚಿಸಲಾಗಿತ್ತು. ಈ ಮಧ್ಯೆ ಇಲಾಖೆ ನಡೆಸಿದ ತನಿಖೆ ವೇಳೆ ಪಿಎಸ್‌ಐ ಆಂಜಿನಪ್ಪ ಡಿಸಿಪಿ ಅವರ ವಾಯ್ಸ್‌ ರೆಕಾರ್ಡ್‌ ಮಾಡಿ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಯಶವಂತಪುರ ಉಪವಿಭಾಗದ ಎಸಿಪಿ ಮತ್ತು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ತನಿಖೆ ನಡೆಸಿ ಇಬ್ಬರು ಆರೋಪಿತ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ಗೆ ವರದಿ ಸಲ್ಲಿಸಿದ್ದರು. ಏನಿದು ಪ್ರಕರಣ?ಆರ್‌ಎಂಸಿ ಯಾರ್ಡ್‌ ಠಾಣಾ ವ್ಯಾಪ್ತಿಯಲ್ಲಿ ಬೀದಿ ಬದಿ ತರಕಾರಿ, ಸೊಪ್ಪು ಮಾರುವ ಶಿವರಾಜ್‌ ಕಳೆದ ಶನಿವಾರ ರಾತ್ರಿ ಸ್ನೇಹಿತರ ಜತೆ ಮನೆ ಮುಂದೆ ಕುಳಿತಿದ್ದರು. ಈ ವೇಳೆ ರಾತ್ರಿ ಪಾಳಿಯ ಗಸ್ತಿನಲ್ಲಿದ್ದ ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಶಿವರಾಜ್‌ ಸೇರಿ ಇಬ್ಬರನ್ನು ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಠಾಣೆಗೆ ಕರೆತಂದಿದ್ದಾರೆ. ಬಳಿಕ ಪಿಎಸ್‌ಐ ಆಂಜಿನಪ್ಪಗೆ ಪ್ರಕರಣ ದಾಖಲಿಸುವಂತೆ ಹೇಳಿದ್ದರು. ಆಗ ಶಿವರಾಜ್‌ ಜತೆ ಕರೆತಂದಿದ್ದ ವ್ಯಕ್ತಿ ಮೇಲೆ ಸಣ್ಣ-ಪುಟ್ಟ ಪ್ರಕರಣ ದಾಖಲಿಸಿ ಕಳುಹಿಸಿದ್ದಾರೆ. ಆದರೆ, ಶಿವರಾಜ್‌ಗೆ ಪಿಎಸ್‌ಐ ಆಂಜಿನಪ್ಪ, ಗಾಂಜಾ ತುಂಬಿದ ಸಿಗರೇಟ್‌ ಸೇದುವಂತೆ ಒತ್ತಾಯಿಸಿದ್ದಾರೆ. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿ ಪ್ರಕರಣ ದಾಖಲಿಸಿ, ದಂಡ ವಿಸಿ ಮರುದಿನ ಬೆಳಗ್ಗೆ ಮನೆಗೆ ಕಳುಹಿಸಿದ್ದರು. ಈ ಘಟನೆಯಿಂದ ಬೇಸರಗೊಂಡ ಶಿವರಾಜ್‌ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚೇತರಿಸಿಕೊಂಡು ವಿಡಿಯೋ ಮಾಡಿ ಪಿಐ ಮತ್ತು ಸಬ್‌ಇನ್‌ಸ್ಪೆಕ್ಟರ್‌ ವಿರುದ್ಧ ಆರೋಪ ಮಾಡಿದ್ದರು. ಇಲಾಖಾ ತನಿಖೆಯಲ್ಲಿ ಬಯಲುಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಪಿಐ ಮತ್ತು ಪಿಎಸ್‌ಐ ಅವರನ್ನು ಸಂಬಂಧಪಟ್ಟ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿತ ವ್ಯಕ್ತಿಗಳನ್ನು ಠಾಣೆಗೆ ಕರೆತಂದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ. ಜತೆಗೆ ಶಿವರಾಜ್‌ಗೆ ಸಿಗರೇಟ್‌ ಸೇದುವಂತೆ ಬಲವಂತ ಮಾಡಿರುವುದು ಪತ್ತೆಯಾಗಿದೆ. ಮರು ದಿನ ಮಾಧ್ಯಮಗಳಲ್ಲಿ ವಿಷಯ ಪ್ರಸಾರವಾದ ಬಳಿಕ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ. ಹೀಗಾಗಿ ಇಬ್ಬರು ಕರ್ತವ್ಯ ಲೋಪ ಹಾಗೂ ಅಶಿಸ್ತಿನಿಂದ ನಡೆದುಕೊಂಡಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಕುರಿತು ವರದಿಯನ್ನು ಪೊಲೀಸ್‌ ಆಯುಕ್ತರಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಾಯ್ಸ್‌ ರೆಕಾರ್ಡ್‌ ಮಾಡಿ ಸಿಕ್ಕಿ ಬಿದ್ದ ಪಿಎಸ್‌ಐಸುಳ್ಳು ಆರೋಪ ಪ್ರಕರಣ ಬೆಳಕಿಗೆ ಬಂದ ಬಳಿಕ ಪಿಐ ಪಾರ್ವತಮ್ಮ ಮತ್ತು ಪಿಎಸ್‌ಐ ಆಂಜಿನಪ್ಪ ಅವರನ್ನು ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪಿಎಸ್‌ಐ ಆಂಜಿನಪ್ಪ ವಿಚಾರಣೆಗೆ ಡಿಸಿಪಿ ಮುಂದೆ ಕುಳಿತುಕೊಂಡಿರುವಾಗ ಪ್ಯಾಂಟ್‌ ಜೇಬಿನಲ್ಲಿದ್ದ ಮೊಬೈಲ್‌ ಅನ್ನು ಪದೇ ಪದೇ ಒತ್ತುತ್ತಿದ್ದರು. ಅಲ್ಲದೆ, ಅನುಮಾನಾಸ್ಪದವಾಗಿ ವರ್ತಿಸಿದ್ದಾರೆ. ಅದರಿಂದ ಅನುಮಾನಗೊಂಡ ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ಬೇರೆ ಸಿಬ್ಬಂದಿಯನ್ನು ಕರೆಸಿ ತಪಾಸಣೆ ನಡೆಸಿದಾಗ ಮೊಬೈಲ್‌ನಲ್ಲಿ ವಾಯ್ಸ್‌ ರೆಕಾರ್ಡ್‌ ಆನ್‌ ಆಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಪೊಲೀಸ್‌ ಆಯುಕ್ತರಿಗೆ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪಿಐ ಪಾರ್ವತಮ್ಮ ವಿರುದ್ಧ 12 ಲಕ್ಷ ವಸೂಲಿ ಆರೋಪ?ಈ ಮಧ್ಯೆ ಇಲಾಖಾ ತನಿಖೆ ವೇಳೆ ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಉದ್ಯಮಿಯೊಬ್ಬರಿಂದ 12 ಲಕ್ಷ ರೂ. ವಸೂಲಿ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಡ್ರೈಫ್ರೂಟ್ಸ್‌ ಉದ್ಯಮಿಗೆ ಕಲಬೆರಕೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿ 12 ಲಕ್ಷ ರೂ. ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಉದ್ಯಮಿ ಡಿಸಿಎಂ ಡಾ ಅಶ್ವತ್ಥನಾರಾಯಣ ಅವರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಪ್ರಕರಣದ ತನಿಖೆ ನಡೆಸಿದಾಗ ಆರೋಪ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.


from India & World News in Kannada | VK Polls https://ift.tt/3kNwEpO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...