ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆ ನಡುವೆ ವಸತಿ ಯೋಜನೆಗೆ ಭಾರೀ ಮೊತ್ತದ ಅನುದಾನ ಮೀಸಲಿಟ್ಟು ಗುರುವಾರ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ. ಇದರ ಜತೆಯಲ್ಲಿ ಶಿವಮೊಗ್ಗಕ್ಕೆ ಆಯುಷ್ ವಿವಿ ಸ್ಥಾಪನೆ, ಕ್ಯಾನ್ಸರ್ ಕೇಂದ್ರ ನಿರ್ಮಾಣದ ಬೃಹತ್ ಕೊಡುಗೆಯನ್ನು ಘೋಷಿಸಲಾಗಿದೆ. ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಆರ್ಥಿಕವಾಗಿ ಹಿಂದುಳಿದವರಿಗೆ ₹8000 ಕೋಟಿ ರೂ. ವೆಚ್ಚದಲ್ಲಿ ಐದು ಲಕ್ಷ ಮನೆಗಳನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲು ನಿರ್ಧರಿಸಿದೆ. ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 4 ಲಕ್ಷ ಹಾಗೂ ನಗರ ಪ್ರದೇಶಗಳಲ್ಲಿ 1 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬಸವ, ಅಂಬೇಡ್ಕರ್ (ಗ್ರಾಮೀಣ) ಹಾಗೂ ಅರಸು ವಸತಿ (ಗ್ರಾಮೀಣ) ಯೋಜನೆಗಳಡಿ 4 ಲಕ್ಷ ಮನೆ ನಿರ್ಮಾಣ ಹಾಗೂ ನಗರ ಪ್ರದೇಶದಲ್ಲಿ ವಾಜಪೇಯಿ, ಅಂಬೇಡ್ಕರ್ ನಿವಾಸ ಯೋಜನೆ (ನಗರ)ಯಡಿ 1 ಲಕ್ಷ ಮನೆ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು. ಮೂಲ ಸೌಕರ್ಯಕ್ಕೆ ₹500 ಕೋಟಿ: ಬೆಂಗಳೂರಿನಲ್ಲಿ ಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆಯಲ್ಲಿ ಸೌಕರ್ಯ ಅಂದರೆ ಕುಡಿಯುವ ನೀರು, ವಿದ್ಯುತ್, ಚರಂಡಿ ಇತರೆ ಸೌಲಭ್ಯ ಕಲ್ಪಿಸಲು ₹500 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು. ಜೊತೆಗೆ ಮಣ್ಣಿನಲ್ಲಿ ಸಾವಯವ ಇಂಗಾಲ ಕೊರತೆಯಿದ್ದು, ಸಾವಯವ ಇಂಗಾಲ ಪ್ರಮಾಣ ಹೆಚ್ಚಿಸಬೇಕಿದೆ ಎಂದು ವಿಜ್ಞಾನಿಗಳು ಸಲಹೆ ನೀಡಿದ್ದಾರೆ. ಈ ಕಾರ್ಯಕ್ಕಾಗಿ ಐದು ವರ್ಷಗಳಲ್ಲಿ ₹75 ಕೋಟಿ ವೆಚ್ಚ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಪ್ರಸಕ್ತ ವರ್ಷದಲ್ಲಿ ₹10 ಕೋಟಿ ವೆಚ್ಚ ಮಾಡಲಾಗುವುದು ಎಂದು ಹೇಳಿದರು.
from India & World News in Kannada | VK Polls https://ift.tt/3iHoyMw