ಕಪ್ಪುಹಣ ಬಿಳಿ ಮಾಡುವ ಆಸೆಗೆ ಬಿದ್ದು ₹9.20ಲಕ್ಷ ಕಳೆದುಕೊಂಡ ಮಂಗಳೂರಿನ ಕಂಟ್ರಾಕ್ಟರ್‌

ಮಂಗಳೂರು: ಕಪ್ಪು ಹಣ ಬಿಳಿ ಮಾಡುವ ಆಸೆಗೆ ಬಿದ್ದು ಪಿಡಬ್ಲ್ಯುಡಿ ಕಂಟ್ರಾಕ್ಟುದಾರನೊಬ್ಬ ಬರೋಬ್ಬರಿ 9.20 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪಿಡಬ್ಲ್ಯುಡಿ ಕಂಟ್ರಾಕ್ಟುದಾರ ರೋಹಿದಾಸ್‌ ಎಂಬುವವರು ರಿಯಲ್‌ ಎಸ್ಟೇಟ್‌ ಉದ್ದೇಶದಿಂದ ದಿನಪತ್ರಿಕೆಯೊಂದರಲ್ಲಿ ಜಾಹೀರಾತು ನೀಡಿದ್ದು, ಆ ವಾರದಲ್ಲೇ ನಿತಿನ್‌ ರಾಜ್‌ ಬೆಂಗಳೂರು ಮತ್ತು ಧನರಾಜ್‌ ವಿಟ್ಲಎಂಬವರು ಕರೆ ಮಾಡಿ, ತಾವು ಬೆಂಗಳೂರಿನಲ್ಲಿ ರಿಯಲ್‌ ಎಸ್ಟೇಟ್‌ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿದ್ದು, ಸಂಸ್ಥೆಯ ಮಾಲೀಕರಿಗೆ ಮಂಗಳೂರಿನಲ್ಲಿ ಮನೆ ಅಗತ್ಯತೆಯಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಅವರಿಂದ ಮನೆಗೆ 50 ಲಕ್ಷ ರೂ. ಸಾಲ ತೆಗೆಸಿಕೊಡುವುದಾಗಿಯೂ ಹೇಳಿದ್ದಾರೆ. ಬಳಿಕ ಧನರಾಜ್‌ ಸಂತ್ರಸ್ತ ರೋಹಿದಾಸ್‌ರನ್ನು ಶ್ರೀರಂಗಪಟ್ಟಣಕ್ಕೆ ಬರಲು ಹೇಳಿದ್ದಾನೆ. ಈ ಸಂದರ್ಭ ನಿತಿನ್‌ ರಾಜ್‌ ಸಾಲದ ರೂಪವಾಗಿ 1.50 ಕೋಟಿ ರೂ. ಕಪ್ಪುಹಣ ನೀಡಿ, ಅದನ್ನು ಬಿಳಿ ಮಾಡಲು ಸೂಚಿಸಿದ್ದಾರೆ. ಈ ಕಪ್ಪುಬಣ್ಣದ ಕಾಗದವನ್ನು ಲಿಕ್ವಿಡ್‌ನಂತೆ ತೋರುವ ನೀರಿಗೆ ಮುಳುಗಿಸಿ ತೆಗೆದಾಗ ಕಪ್ಪುಬಣ್ಣದ ಕಾಗದ 500 ರೂ. ನೋಟಿನ ರೂಪ ತಾಳಿದೆ. ಇದೇ ರೀತಿ ಮಾಡುವಂತೆ ಹೇಳಿ 1.5 ಕೋಟಿ ರೂ.ನ್ನು ರೋಹಿದಾಸ್‌ಗೆ ನೀಡಿದ್ದಾರೆ. ಇದನ್ನು ನಂಬಿದ ರೋಹಿದಾಸ್‌ ಹಣದ ಬ್ಯಾಗ್‌ ಹಾಗೂ ಲಿಕ್ವಿಡ್‌ನ್ನು ವಿಟ್ಲದ ಧನರಾಜ್‌ ಕಾರಿನ ಡಿಕ್ಕಿಯಲ್ಲಿರಿಸಿ ಹೊರಟು ಬಂದಿದ್ದಾರೆ. ಆದರೆ, ಒಂದು ಕಿ.ಮೀ. ಮುಂದೆ ಬಂದಾಗ ಕಾರಿನಲ್ಲಿ ಯಾವುದೋ ಶಬ್ದ ಬಂದಂತೆ ಕೇಳಿದ್ದು, ಧನರಾಜ್‌ ಕಾರು ನಿಲ್ಲಿಸಿ ಡಿಕ್ಕಿ ತೆರೆದು ನೋಡುವಾಗ ಲಿಕ್ವಿಡ್‌ ಕ್ಯಾನ್‌ ಕೆಳಗೆ ಬಿದ್ದು, ಎಲ್ಲವೂ ಚೆಲ್ಲಿದೆ. ತಕ್ಷಣ ಈ ಬಗ್ಗೆ ನಿತಿನ್‌ ರಾಜ್‌ಗೆ ಕರೆಮಾಡಿ ನಡೆದ ವಿಷಯವನ್ನು ತಿಳಿಸಿದಾಗ ಆತ ಬಂದು ಲಿಕ್ವಿಡ್‌ ಚೆಲ್ಲಿರುವುದಕ್ಕೆ ಬೈಯ್ದು, ಈ ಲಿಕ್ವಿಡ್‌ 25 ಲಕ್ಷ ರೂ. ಬೆಲೆಬಾಳುವ ವಸ್ತು ಆಗಿದ್ದು, ಬೇಜವಾಬ್ದಾರಿಯಿಂದ ಚೆಲ್ಲಿದ್ದು, ಇನ್ನು ಇದು ಸಿಗುವುದು ಕಷ್ಟ ಎಂದು ಹೇಳಿದ್ದಾನೆ. ಅಲ್ಲದೆ, ಯುವತಿಯೊಬ್ಬರಿಗೆ ಕರೆ ಮಾಡಿ ರೋಹಿದಾಸ್‌ರೊಂದಿಗೆ ಮಾತನಾಡಲು ತಿಳಿಸಿದ್ದಾನೆ. ಆಕೆ ಬೇರೆ ಲಿಕ್ವಿಡ್‌ ಬೇಕಾದಲ್ಲಿ 25 ಲಕ್ಷ ರೂ. ನೀಡಬೇಕು ಎಂದು ಹೇಳಿದ್ದಾಳೆ. ಬಳಿಕ ನಿತಿನ್‌ ತಾನು 10 ಲಕ್ಷ ರೂ. ರೆಡಿ ಮಾಡುತ್ತೇನೆ. ನೀವಿಬ್ಬರೂ ಸೇರಿ 15 ಲಕ್ಷ ರೂ. ರೆಡಿ ಮಾಡಿ ಕೂಡಲೇ ನೀಡಬೇಕಾಗಿ ತಿಳಿಸಿದ್ದಾನೆ. ನಂತರ ಕಾರಿನಲ್ಲಿರುವ ಕಪ್ಪುಬಣ್ಣದ ಕಾಗದದ ಬ್ಯಾಗನ್ನು ನಿತಿನ್‌ ತನ್ನ ಕಾರಿನಲ್ಲಿಇರಿಸಿ, ನೀವು ಕೂಡಲೇ ಊರಿಗೆ ಹೋಗಿ ಹಣವನ್ನು ನೀಡಿದರೆ ಲಿಕ್ವಿಡ್‌ ತರಿಸುವುದಾಗಿ ತಿಳಿಸಿದ್ದಾನೆ. ಮರುದಿನ ವಿಟ್ಲದ ಧನರಾಜ್‌ ಕರೆ ಮಾಡಿ, ತಾನು ಹೇಗಾದರೂ ಮಾಡಿ 7 ಲಕ್ಷ ರೂ. ರೆಡಿ ಮಾಡುತ್ತೇನೆ. ತಾವು ಕೂಡ ಏನಾದರೂ ಮಾಡಿ ಎಂದಿದ್ದಾನೆ. ಈ ಬಗ್ಗೆ ಆತ ಪದೇ ಪದೇ ಪೋನ್‌ ಮಾಡುತ್ತಿದ್ದರಿಂದ ರೋಹಿದಾಸ್‌ ಪತ್ನಿ, ಮಕ್ಕಳ ಒಡವೆಗಳನ್ನು 7.20 ಲಕ್ಷ ರೂ.ಗೆ ಅಡವಿಟ್ಟು ಅದಕ್ಕೆ ತನ್ನಲ್ಲಿದ್ದ 2 ಲಕ್ಷ ರೂ.ನ್ನೂ ಇರಿಸಿ ಒಟ್ಟು 9.20 ಲಕ್ಷ ರೂ. ನೀಡಿದ್ದಾರೆ. ಆದರೆ ಆ ಬಳಿಕ ಅವರು ಲಿಕ್ವಿಡ್‌, ಕಪ್ಪುಹಣ ನೀಡದೆ ಇಬ್ಬರು ತಮಗೆ ವಂಚಿಸಿದ್ದಾರೆಂದು ರೋಹಿದಾಸ್‌ ಕಾವೂರು ಪೊಲೀಸ್‌ ಠಾಣೆಯಲ್ಲಿ ತಡವಾಗಿ ದೂರು ದಾಖಲಿಸಿದ್ದಾರೆ.


from India & World News in Kannada | VK Polls https://ift.tt/3xgea3R

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...