ಜಮ್ಮು: ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಸಮೀಪದ ಗಣಿಯೊಂದರಲ್ಲಿ ನಡೆದ ಸ್ಫೋಟದಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಕೋಟೆ ವಲಯದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ವಲಯದಲ್ಲಿ ಕಾರ್ಯಾಚರಣೆ ಕರ್ತವ್ಯದಲ್ಲಿದ್ದ ಸಿಪಾಯಿ ಕಮಲ್ ದೇವ್ ವೈದ್ಯ (27) ಹುತಾತ್ಮ ಯೋಧ. ಕರ್ತವ್ಯದ ವೇಳೆ ತೆರಳುತ್ತಿದ್ದಾಗ ಆಕಸ್ಮಿಕ ಗಣಿ ಸ್ಫೋಟದಲ್ಲಿ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಸಮೀಪದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ತೀವ್ರ ಗಾಯಗೊಂಡಿದ್ದ ಅವರು ಮೃತಪಟ್ಟರು. ಹಿಮಾಚಲ ಪ್ರದೇಶದ ಹಮೀರ್ಪುರದ ಘಮಾರ್ವಿನ್ ಗ್ರಾಮದವರಾದ ಕಮಲ್ ದೇವ್ ಅವರು ತಾಯಿಯನ್ನು ಅಗಲಿದ್ದಾರೆ. ಇಬ್ಬರು ಉಗ್ರರ ಹತ್ಯೆಜಮ್ಮು ಮತ್ತು ಕಾಶ್ಮೀರದ ಬಂಡಿಪೊರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಉತ್ತರ ಕಾಶ್ಮೀರದ ಬಂಡಿಪೊರಾದ ಸುಂಬ್ಲಾರ್ ಪ್ರದೇಶದಲ್ಲಿರುವ ಶೊಕ್ಬಾಬಾ ಕಾಡಿನಲ್ಲಿ ಇರುವ ಸುಳಿವು ದೊರೆತ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿತ್ತು. ಆಗ ಉಗ್ರರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಕೂಡ ಗುಂಡು ಹಾರಿಸಿದವು. ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾದರು.
from India & World News in Kannada | VK Polls https://ift.tt/3eQpNrO