'ಚೌಕಿದಾರ್ ಚೋರ್ ಹೈ' ಎನ್ನುವುದು ಎಂದೆಂದಿಗೂ ಸತ್ಯ! ಕಾಂಗ್ರೆಸ್

ಬೆಂಗಳೂರು: 'ಚೌಕಿದಾರ್ ಚೋರ್ ಹೈ' ಎನ್ನುವುದು ಎಂದೆಂದಿಗೂ ಸತ್ಯ ಎಂದು ಟ್ವೀಟ್ ಮಾಡಿದೆ. ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಷ್ಟಾಚಾರ ಹಾಗೂ ಪಕ್ಷಪಾತ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರ್ಕಾರ ನ್ಯಾಯಾಂಗ ತನಿಖೆ ಆರಂಭಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ತರಾಟೆಗೆ ತೆಗದುಕೊಂಡಿದೆ. ದೇಶದ ರಕ್ಷಣೆಗೆ ಸಂಬಂಧಿಸಿದ ಒಪ್ಪಂದವನ್ನ ಸರ್ಕಾರಕ್ಕೂ ಮೊದಲೇ ರಿಲಯನ್ಸ್ ಕಂಪೆನಿ ಮಾಡಿಕೊಳ್ಳುತ್ತದೆ ಎಂದರೆ ಏನರ್ಥ?ದೇಶದ ರಕ್ಷಣೆಯ ಹೊಣೆಯನ್ನು ರಿಲಯನ್ಸ್ ಕಂಪೆನಿಗೆ ವಹಿಸಲಾಗಿದೆಯೇ? ಎಂದು ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದೆ. 'ಹಮ್ ದೋ ಹಮಾರೆ ದೋ' ಸರ್ಕಾರ ಅದೆಷ್ಟೇ ಕಣ್ಕಟ್ಟು ನಡೆಸಿದರೂ ಸತ್ಯ ಎಂದಿಗೂ ಸತ್ಯವೇ ಆಗಿರುತ್ತದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ರಫೇಲ್ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಈ ಹಿಂದಿನಿಂದಲೂ ಆರೋಪ ಮಾಡಿಕೊಂಡು ಬರುತ್ತಿದೆ. ರಾಹುಲ್ ಗಾಂಧಿ ಪದೆ ಪದೇ ಎಂಬ ಪದ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಬಿಜೆಪಿ ವಿರೋಧ ಮಾಡುತ್ತಿದೆ. ಈ ನಡುವೆ ರಫೇಲ್ ಖರೀದಿಯಲ್ಲಿ ಭಾರೀ ಹಗರಣ ಆರೋಪ ದೇಶದ ರಾಜಕಾರಣದಲ್ಲಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೆ ಫ್ರಾನ್ಸ್ ಸರ್ಕಾರ ಈ ಆರೋಪದ ಕುರಿತಾಗಿ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ತನಿಖೆಗಾಗಿ ನ್ಯಾಯಾಧೀಶರನ್ನು ನೇಮಕ ಮಾಡಲಾಗಿದೆ.


from India & World News in Kannada | VK Polls https://ift.tt/3Av9yd0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...