ಬೆಂಗಳೂರು: ರಾಜೀನಾಮೆ ಗೊಂದಲದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿರುವುದಕ್ಕೆ ಸಚಿವ ಆರ್. ಅಶೋಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಯಡಿಯೂರಪ್ಪ ಅವರು ಕೆಲಸ ಮಾಡೋದ್ರಲ್ಲಿ ನಂಬರ್ ಒನ್ ಎಂದಿದ್ದಾರೆ. ರೈತಪರ ಹೋರಾಟ ಮಾಡಿದವರು ಯಡಿಯೂರಪ್ಪನವರು. ಹಗಲು ರಾತ್ರಿ ಜನರ, ರೈತರ ಪರ ಕೆಲಸ ಮಾಡಿದ್ದಾರೆ. ಹೋರಾಟದಿಂದಲೇ ಯಡಿಯೂರಪ್ಪ ಬಂದವರು. ಮೈಯಲ್ಲಿ ರಕ್ತ ಇರೋವರೆಗೂ ಜನರ ಪರ ಕೆಲಸ ಮಾಡೋರು ಅವರು ಎಂದು ಅಶೋಕ್ ಹಾಡಿ ಹೊಗಳಿದರು. ಜನರ ಪರ ನಿಲ್ಲೋದು ಯಡಿಯೂರಪ್ಪನವರಿಗೆ ರಕ್ತಗತವಾಗಿ ಬಂದಿದೆ. ಏನೇ ಬಂದರೂ ಯಡಿಯೂರಪ್ಪ ನಿತ್ಯದ ಜನಪರ ಕೆಲಸ ಮಾಡೋದನ್ನು ನಿಲ್ಲಿಸುವುದಿಲ್ಲ. ಅದಕ್ಕೆ ಯಡಿಯೂರಪ್ಪ ಅವರನ್ನು ಜನನಾಯಕ ಅನ್ನುವುದು ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಇನ್ನು ಅಧಿಕಾರ ಕಳೆದುಕೊಳ್ಳುವ ಆತಂಕದ ನಡುವೆಯೂ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿಗೆ ತೆರಳಿದ್ದಾರೆ. ಮಳೆ ಹಾನಿ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಈ ನಡುವೆ ಹೈಕಮಾಂಡ್ನಿಂದ ಭಾನುವಾರ ಸಂಜೆಯೊಳಗಾಗಿ ಒಂದು ಸಂದೇಶ ಬರಲಿದ್ದು ಅದರಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.
from India & World News in Kannada | VK Polls https://ift.tt/36WzwbN