ಕನ್ನಡಿಗನಿಗೆ ಲಕ್‌! ಇಂಗ್ಲೆಂಡ್‌ ಟೆಸ್ಟ್ ಸರಣಿಗೆ ಪೃಥ್ವಿ ಶಾ, ದೇವದತ್‌ ಪಡಿಕ್ಕಲ್‌?

ಹೊಸದಿಲ್ಲಿ: ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟೆಸ್ಟ್‌ ಸರಣಿ ಆಡಲು ಹೆಚ್ಚುವರಿ ಇಬ್ಬರು ಆರಂಭಿಕ ಬ್ಯಾಟ್ಸ್‌ಮನ್‌ಗಳನ್ನು ಯುಕೆಗೆ ಕಳುಹಿಸಿಕೊಡುವಂತೆ ಟೀಮ್‌ ಮ್ಯಾನೇಜ್‌ಮೆಂಟ್‌ ಮನವಿ ಮಾಡಿಕೊಂಡಿದೆ. ಆದರೆ, ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಇದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಶುಭಮನ್‌ ಗಿಲ್‌ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಇಂಗ್ಲೆಂಡ್‌ನಲ್ಲಿ ಹೊಸ ತಲೆ ನೋವು ಶುರುವಾಗಿದೆ. ಹಾಗಾಗಿ ಹಾಗೂ ಇಬ್ಬರನ್ನು ಹೆಚ್ಚುವರಿ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಇಂಗ್ಲೆಂಡ್‌ಗೆ ಕಳುಹಿಸುವಂತೆ ಆಯ್ಕೆ ಸಮಿತಿಗೆ ಟೀಮ್‌ ಮ್ಯಾನೇಜ್‌ಮೆಂಟ್‌ ಮನವಿ ಮಾಡಿದೆ. "ಶುಭಮನ್‌ ಗಿಲ್‌ ಗಾಯಕ್ಕೆ ತುತ್ತಾಗಿದ್ದು, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ ಮೂರು ತಿಂಗಳ ಸಮಯ ಅಗತ್ಯವಿದೆ. ಹಾಗಾಗಿ, ಅವರು ಇಂಗ್ಲೆಂಡ್‌ ವಿರುದ್ಧ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಹೆಚ್ಚುವರಿ ಆರಂಭಿಕರನ್ನು ಇಂಗ್ಲೆಂಡ್‌ಗೆ ಕಳುಹಿಸುವಂತೆ ತಂಡದ ಆಡಳಿತ ವ್ಯವಸ್ಥಾಪಕರು ಇಮೇಲ್‌ ಮೂಲಕ ಮಾಜಿ ವೇಗಿ ಚೇತನ್‌ ಶರ್ಮಾ ಅವರಿಗೆ ಮನವಿ ಮಾಡಿಕೊಂಡಿದ್ದರು," ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಟೀಮ್‌ ಮ್ಯಾನೇಜ್‌ಮೆಂಟ್‌ ಮನವಿ ಮಾಡಿರುವ ವಿಷಯದ ಬಗ್ಗೆ ಚೇತನ್‌ ಶರ್ಮಾಗೆ ಆಸಕ್ತಿ ಇಲ್ಲ ಎಂದು ಹೇಳಲಾಗುತ್ತಿದೆ. ಶುಭಮನ್‌ ಗಿಲ್‌ ಸರಣಿಗೆ ಅಲಭ್ಯರಾಗಿದ್ದಾರೆಂದು ಗೊತ್ತಿದ್ದರೂ, ಇಬ್ಬರು ಹೆಚ್ಚುವರಿ ಆರಂಭಿಕರನ್ನು ಇಂಗ್ಲೆಂಡ್‌ಗೆ ಕಳುಹಿಸಲು ಚೇತನ್‌ ಶರ್ಮಾ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. 2019ರ ಆವೃತ್ತಿಯ ರಣಜಿ ಟ್ರೋಫಿ ಟೂರ್ನಿಯಲ್ಲಿನ ವೈಫಲ್ಯದ ಹೊರತಾಗಿಯೂ ದೇವದತ್‌ ಪಡಿಕ್ಕಲ್‌ ಹಾಗೂ ಪೃಥ್ವಿ ಶಾ ಅವರ ಬದಲು ಅಭಿಮನ್ಯು ಈಶ್ವರನ್ ಅವರನ್ನು ಇಂಗ್ಲೆಂಡ್‌ಗೆ ಕಳುಹಿಸುವ ಮೂಲಕ ಚೇತನ್‌ ಶರ್ಮಾ ಇತ್ತೀಚೆಗೆ ಟೀಕೆಗೆ ಗುರಿಯಾಗಿದ್ದರು. ಇದೀಗ ಇಂಗ್ಲೆಂಡ್‌ಗೆ ಇಬ್ಬರು ಆರಂಭಿಕರನ್ನು ಕಳುಹಿಸಿ ತಮ್ಮ ಮೇಲೆ ಮತ್ತೊಮ್ಮೆ ಟೀಕಾ ಪ್ರಹಾರಗಳನ್ನು ಎಳೆದುಕೊಳ್ಳಲು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಿಗೆ ಇಷ್ಟವಿಲ್ಲ. ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಹೆಚ್ಚುವರಿ ಇಬ್ಬರು ಆರಂಭಿಕ ಬ್ಯಾಟ್ಸ್‌ಮನ್‌ಗಳನ್ನು ಯುಕೆಗೆ ಕಳುಹಿಸಿಕೊಡಬೇಕೆಂದು ಟೀಮ್‌ ಮ್ಯಾನೇಜ್‌ಮೆಂಟ್‌ ಬಿಸಿಸಿಐ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಜೇ ಶಾ ಅವರಿಗೆ ಔಪಚಾರಿಕವಾಗಿ ಮನವಿ ಮಾಡಿಕೊಳ್ಳಬಹುದೇ? ಎಂಬುದು ಆಸಕ್ತದಾಯಕ ವಿಷಯವಾಗಿದೆ. "ಪೃಥ್ವಿ ಶಾ ಹಾಗೂ ದೇವದತ್‌ ಪಡಿಕ್ಕಲ್‌ ಅವರನ್ನು ಇಂಗ್ಲೆಂಡ್‌ಗೆ ಕಳುಹಿಸಿಕೊಡುವಂತೆ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಯಾವುದೇ ಔಪಚಾರಿಕೆ ಮನವಿ ಇನ್ನೂ ಸ್ವೀಕರಿಸಿಲ್ಲ. ಈ ಇಬ್ಬರು ಸದ್ಯ ಕೊಲಂಬೊದಲ್ಲಿದ್ದು, ಶ್ರೀಲಂಕಾ ವಿರುದ್ಧ ಸೀಮಿತ ಓವರ್‌ಗಳ ಸರಣಿಗಳಿಗೆ ಸಜ್ಜಾಗುತ್ತಿದ್ದಾರೆ. ಜುಲೈ 26 ರಂದು ಪ್ರವಾಸ ಅಂತ್ಯವಾದ ಬಳಿಕ ಈ ಇಬ್ಬರೂ ಯುಕೆಗೆ ಹಾರುವ ಸಾಧ್ಯತೆ ಇದೆ. ಭಾರತ ಟೆಸ್ಟ್‌ ತಂಡ ಇಂಗ್ಲೆಂಡ್‌ನ ಡರ್ಹಾಮ್‌ನಲ್ಲಿ ಬಯೋ-ಬಬಲ್‌ಗೆ ಒಳಗಾಗುವ ಹೊತ್ತಿಗೆ ಈ ಇಬ್ಬರು ತಂಡ ಸೇರಿಕೊಳ್ಳಬಹುದು," ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3AtNeQN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...