‘ಹೆಚ್ಚುವರಿ ಆದಾಯ ಕೊರತೆ ತೋರಿಸುವುದು ರಾಜ್ಯಗಳಿಗೆ ಶೋಭೆ ತರುವುದಿಲ್ಲ’; ನಿರ್ಮಲಾ ಸೀತಾರಾಮನ್

ಬೆಂಗಳೂರು: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ 5,000 ಕೋಟಿ ರೂ. ವಿಶೇಷ ಪರಿಹಾರ ನೀಡಿಕೆಗೆ ನಾನು ಅಡ್ಡಿಪಡಿಸಿದ್ದೇನೆ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪ ಸರಿಯಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಕರ್ನಾಟಕಕ್ಕೆ ತೊಂದರೆ ನೀಡಬೇಕು ಎಂಬ ಯಾವ ಉದ್ದೇಶವೂ ಇಲ್ಲ. ಹಾಗೆಯೇ ರಾಜ್ಯಕ್ಕೆ ಯಾವ ತೊಂದರೆಯನ್ನೂ ನೀಡಿಲ್ಲ. ಕರ್ನಾಟಕ, ತೆಲಂಗಣ, ಮಿಜೋರಾಂ ರಾಜ್ಯಗಳು ಕೇಂದ್ರ ಸರಕಾರ ನಿಗದಿಪಡಿಸಿದ್ದ ಆದಾಯ ಕೊರತೆ ಪ್ರಮಾಣಕ್ಕಿಂತ ಹೆಚ್ಚು ತೋರಿಸಿದ್ದರಿಂದ ಹೆಚ್ಚುವರಿ ಹಣ ಬಿಡುಗಡೆಯನ್ನು ತಡೆ ಹಿಡಿಯಲಾಗಿದೆ ಎಂದು ಸಮರ್ಥನೆ ನೀಡಿದರು. ಹೆಚ್ಚುವರಿ ಆದಾಯ ಕೊರತೆ ತೋರಿಸುವುದು ರಾಜ್ಯಗಳಿಗೆ ಶೋಭೆ ತರುವುದಿಲ್ಲ. ಈ ಲೋಪ ರಾಜ್ಯ ಸರಕಾರದಿಂದಾಗದೆ ಹಣಕಾಸು ಆಯೋಗದಿಂದಲೂ ಆಗಿರಬಹುದು. ಹಾಗಾಗಿ ನನ್ನ ವಿರುದ್ಧ ಆರೋಪ ಮಾಡುವುದು ಸರಿಯಲ್ಲ. ಹಿಂದಿನ ಯುಪಿಎ ಸರಕಾರದ ಅಧಿಕಾರಾವಧಿಯಲ್ಲಿನ ಹಣಕಾಸು ಅಕ್ರಮಗಳ ಬಗ್ಗೆಯೂ ಅವರು ಸ್ವಲ್ಪ ಮಾತನಾಡಬೇಕು ಎಂದು ಹೇಳಿದರು.


from India & World News in Kannada | VK Polls https://ift.tt/3htNN4y

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...