ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಬೆಳಗ್ಗೆ 11 ಗಂಟೆಗೆ ನೂತನ ಸಚಿವರ ಪಟ್ಟಿಯನ್ನು ರಾಜಭವನದಿಂದ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 2.15ಕ್ಕೆ ನೂತನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜಭವನದಿಂದ ನೂತನ ಸಚಿವರ ಅಧಿಕೃತ ಪಟ್ಟಿ ಹೊರಬೀಳುತ್ತೆ. ಮಧ್ಯಾಹ್ನ 2.15ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯುತ್ತದೆ ಎಂದು ಹೇಳಿದ್ದು, ಏರ್ಪೋರ್ಟ್ನಿಂದ ನೇರವಾಗಿ ವಿಧಾನಸೌಧಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಇನ್ನು, ಡಿಸಿಎಂ ಸ್ಥಾನದ ನಿರೀಕ್ಷೆಯಲ್ಲಿ ಇದ್ದವರಿಗೆ ನಿರಾಸೆಯಾಗಿದೆ ಎನ್ನಲಾಗಿದ್ದು, ಡಿಸಿಎಂ ಸ್ಥಾನ ಸೃಷ್ಟಿಯ ಗೊಂದಲವೇ ಬೇಡ ಎಂಬ ನಿಲುವನ್ನು ಹೈಕಮಾಂಡ್ ತಳೆದಿದೆ ಎನ್ನಲಾಗಿದೆ. ಇದೇ ಮಾತನ್ನು ಗೋವಿಂದ ಕಾರಜೋಳ ಅವರು ಕೂಡ ಹೇಳಿದ್ದು, ಈ ಸಲ ಡಿಸಿಎಂ ಸ್ಥಾನ ಇರುವುದಿಲ್ಲ. ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನೂತನ ಸಂಪುಟದಲ್ಲಿ ಹಳಬರು ಮತ್ತು ಹೊಸ ಮುಖಗಳನ್ನು ಒಳಗೊಂಡ 24 ಸಚಿವರು ಇರಲಿದ್ದಾರೆ ಎನ್ನಲಾಗಿದೆ. ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಖಚಿತ ಎಂದು ತಿಳಿದುಬಂದಿದೆ. ಶಾಸಕರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಡಾ.ಸುಧಾಕರ್, ಬಿ.ಸಿ.ಪಾಟೀಲ್, ಪೂರ್ಣಿಮಾ ಶ್ರೀನಿವಾಸ್, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು ಹಾಗೂ ಸಿಪಿ ಯೋಗೀಶ್ವರ್ಗೆ ಬೊಮ್ಮಾಯಿ ಕರೆ ಮಾಡಿದ್ದಾರೆಂದು ತಿಳಿದುಬಂದಿದೆ.
from India & World News in Kannada | VK Polls https://ift.tt/3lv5F2C