ಅನುಭವ, ಹೊಸ ಶಕ್ತಿಯ ಸಮ್ಮಿಶ್ರಣದ ಕ್ಯಾಬಿನೆಟ್‌; ಒಟ್ಟು 29 ಸಚಿವರು ಸಂಪುಟಕ್ಕೆ: ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವವರ ಪಟ್ಟಿ ಅಂತಿಮವಾಗಿದೆ. ಒಟ್ಟು 29 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಯಾರಿಗೂ ಡಿಸಿಎಂ ಹುದ್ದೆಯನ್ನು ನೀಡಿಲ್ಲ ಹಾಗೂ ಬಿವೈ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡಿಲ್ಲ. ಅನುಭವ ಹಾಗೂ ಹೊಸ ಮುಖಗಳು ಸಂಪುಟದಲ್ಲಿ ಇರಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಾಹಿತಿ ನೀಡಿದರು. ಸಚಿವ ಸಂಪುಟದಲ್ಲಿ 8 ಲಿಂಗಾಯಿತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, ತಲಾ ಒಂದು ಎಸ್‌ಟಿ, ರೆಡ್ಡಿ ಹಾಗೂ ಮಹಿಳೆಗೆ ಸ್ಥಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅನುಭವ ಹಾಗೂ ಹೊಸ ಶಕ್ತಿಯ ಸಮ್ಮಿಶ್ರಣ ಸಂಪುಟದಲ್ಲಿ ಇರಲಿದೆ. ರಾಜಭವನದಿಂದ ಅಧಿಕೃತ ಪಟ್ಟಿ ಹೊರಬರುತ್ತದೆ ಎಂದು ಹೇಳಿರುವ ಸಿಎಂ, ಪ್ರಮುಖವಾಗಿ ಈ ಸಲ ಯಾರಿಗೂ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡದಿರಲು ಹೈಕಮಾಂಡ್‌ ತೀರ್ಮಾನ ಮಾಡಿದೆ. ಬಿವೈ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇನ್ನು, ಕೆಲವು ಹಿರಿಯರನ್ನು ಪಕ್ಷ ಸಂಘಟನೆಗೆ ನಿಯೋಜಿಸಬೇಕೆಂದು ಮಂತ್ರಿ ಸ್ಥಾನ ನೀಡಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಧ್ಯಾಹ್ನ 2.15ಕ್ಕೆ ನೂತನ ಪದಗ್ರಹಣ ಮಾಡಲಿದ್ದು, ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.


from India & World News in Kannada | VK Polls https://ift.tt/3rWu5D9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...