: ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ಸೂಕ್ತ ರೀತಿ ಕಲ್ಪಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಹಳಿಂಗಳಿ ಗ್ರಾಮದಲ್ಲಿ ನಡೆಯುತ್ತಿರುವ , ತೀವ್ರ ಸ್ವರೂಪ ಪಡೆದುಕೊಂಡಿದ್ದು, 30ಕ್ಕೂ ಹೆಚ್ಚು ಮಂದಿ ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತರ ಪುನರ್ವಸತಿಗೆ ಸ್ಥಳ ಕಲ್ಪಿಸುವ ವಿಚಾರವಾಗಿ ಕಳೆದ ಎರಡು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದ್ದು, ಬುಧವಾರ ಬೆಳಿಗ್ಗೆ ಪೊಲೀಸರು ಬಲಪ್ರಯೋಗಿಸಿ ಪ್ರತಿಭಟನಾನಿರತರನ್ನು ಬಂಧಿಸಿ ಕರೆದೊಯ್ದರು. ಬಂಧಿತರಲ್ಲಿ ಮಹಿಳೆಯರು ಕೂಡ ಸೇರಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ ನಡೆಯಿತು. ನ್ಯಾಯಕ್ಕಾಗಿ ಹೋರಾಟ ನಡೆಸುವಾಗ ಪೊಲೀಸರು ಬಲ ಪ್ರಯೋಗ ನಡೆಸಿ ಅದನ್ನು ಹತ್ತಿಕ್ಕಲು ಮುಂದಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕೃಷ್ಣಾ ನದಿ ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ಈ ಗ್ರಾಮದ ಪಕ್ಕದಲ್ಲಿರುವ ತಮದಡ್ಡಿ ಗ್ರಾಮಕ್ಕೆ ಭದ್ರಗಿರಿ ಬೆಟ್ಟದ ಭಾಗದಲ್ಲಿ ಪುನರ್ವಸತಿಗಾಗಿ ಸರಕಾರ ಸ್ಥಳ ಹಂಚಿಕೆ ಮಾಡಿದೆ. ಈ ಜಾಗ ಬಿಟ್ಟು ಬೇರೆ ಕಡೆ ಜಾಗ ಕೊಡಿ ಎಂದು ಹಳಿಂಗಳಿ ಗ್ರಾಮದ ಜನರು ಒತ್ತಾಯಿಸಿದ್ದಾರೆ. ಇದಕ್ಕೆ ಭದ್ರಗಿರಿ ಬೆಟ್ಟದ ಜೈನಮಂದಿರದ ಜೈನಮುನಿ ಶಾಂತಿಧರ್ಮಭೂಷಣ ಮಹಾರಾಜರು ಬೆಂಬಲ ನೀಡಿದ್ದಾರೆ. ಈ ಭಾಗದಲ್ಲಿನ ಗಿಡಗಂಟಿಗಳನ್ನು ತೆರವುಗೊಳಿಸಿ, ಜಾಗವನ್ನು ಅಳತೆ ಮಾಡಲು ಕಂದಾಯ ಅಧಿಕಾರಿಗಳು ಮುಂದಾದಾಗ ಹಳಿಂಗಳಿ ಗ್ರಾಮಸ್ಥರು ಅದಕ್ಕೆ ವಿರೋಧ ವ್ಯಕ್ತಪಡಿಸಿ ಅಡ್ಡಿಪಡಿಸಿದರು. ಪ್ರತಿಭಟನೆ ನಿಲ್ಲಿಸುವಂತೆ ಪೊಲೀಸರು ಮಾಡಿದ ಮನವಿಗೆ ಸಂತ್ರಸ್ತರು ಕಿವಿಗೊಡಲಿಲ್ಲ. ಹೀಗಾಗಿ ಕೆಲವರನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
from India & World News in Kannada | VK Polls https://ift.tt/3jdFIS8