ಹೊಸದಿಲ್ಲಿ: ಮುಖ್ಯ ಎನ್ವಿ ರಮಣ ನೇತೃತ್ವದ , ಹೈಕೋರ್ನ ಮೂವರು ಮಹಿಳಾ ನ್ಯಾಯಮೂರ್ತಿಗಳು ಸೇರಿದಂತೆ ಒಂಬತ್ತು ಹೆಸರುಗಳನ್ನು ನ್ಯಾಯಮೂರ್ತಿಗಳ ಸ್ಥಾನಕ್ಕೆ ಶಿಫಾರಸು ಮಾಡಿದೆ. ನಾಲ್ವರು ನ್ಯಾಯಮೂರ್ತಿಗಳ ಹೆಸರನ್ನು ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ಪದೋನ್ನತಿಗೊಳಿಸಲು ಸೂಚಿಸಲಾಗಿದೆ. ನ್ಯಾಯಮೂರ್ತಿಗಳ ಪದೋನ್ನತಿ ಕುರಿತಂತೆ ಕೊಲಿಜಿಯಂ ಸಭೆಯ ಹಿನ್ನೆಲೆಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಅಧಿಕೃತ ಪ್ರಕಟಣೆ ಹೊರಡಿಸುವ ಮುನ್ನವೇ ಮಾಧ್ಯಮಗಳು ವರದಿ ಪ್ರಕಟಿಸಿದ್ದಕ್ಕೆ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಸುಪ್ರೀಂಕೋರ್ಟ್ ತನ್ನ ಶಿಫಾರಸುಗಳ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ, ಗುಜರಾತ್ ಹೈಕೋರ್ಟ್ನ ವಿಕ್ರಮ್ ನಾಥ್, ಸಿಕ್ಕಿಂ ಹೈಕೋರ್ಟ್ನ ಜಿತೇಂದ್ರ ಕುಮಾರ್ ಮಹೇಶ್ವರಿ ಮತ್ತು ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರು ಪದೋನ್ನತಿಗೆ ಶಿಫಾರಸು ಮಾಡಲಾದ ಪಟ್ಟಿಯಲ್ಲಿರುವ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಇದರ ಜತೆಗೆ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ , ಕೇರಳ ಹೈಕೋರ್ಟ್ನ ಸಿ.ಟಿ ರವಿಕುಮಾರ್, ಮದ್ರಾಸ್ ಹೈಕೋರ್ಟ್ನ ಎಂಎಂ ಸುಂದರೇಶ್ ಮತ್ತು ಗುಜರಾತ್ ಹೈಕೋರ್ಟ್ನ ಬೆಲಾ ತ್ರಿವೇದಿ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿದೆ. ಹಿರಿಯ ವಕೀಲ ಹಾಗೂ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಎಸ್ ನರಸಿಂಹ ಹೆಸರನ್ನು ಶಿಫಾರಸು ಮಾಡಲಾಗಿದೆ. ಅವರ ಹೆಸರು ಅನುಮೋದನೆಗೊಂಡರೆ ಬಾರ್ನಿಂದ ನೇರವಾಗಿ ಸುಪ್ರೀಂಕೋರ್ಟ್ಗೆ ನೇಮಕಗೊಳ್ಳುವ ಆರನೇ ವಕೀಲ ಎನಿಸಿಕೊಳ್ಳಲಿದ್ದಾರೆ. ಕರ್ನಾಟಕದ ಬಿವಿ ನಾಗರತ್ನ ಅವರು 2027ರಲ್ಲಿ ಅಲ್ಪ ಕಾಲ ಆಗುವ ಸಾಧ್ಯತೆ ಇದೆ. ಇದು ನಡೆದರೆ ದೇಶದ ಮೊದಲ ಮಹಿಳಾ ಸಿಜೆಐ ಎನಿಸಲಿದ್ದಾರೆ. ಕರ್ನಾಟಕದ ನ್ಯಾಯಮೂರ್ತಿಗಳು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಮೂರ್ತಿಗಳಾದ ಎನ್ ಎಸ್ ಸಂಜಯ್ ಗೌಡ, ಜ್ಯೋತಿ ಮೂಲಿಮನಿ, ನಟರಾಜ್ ರಂಗಸ್ವಾಮಿ, ಹೇಮಂತ್ ಚಂದನಗೌಡರ್, ಪ್ರದೀಪ್ ಸಿಂಗ್ ಯೆರೂರ್ ಮತ್ತು ಮಹೇಶನ್ ನಾಗಪ್ರಸನ್ನ ಅವರನ್ನು ಅದರ ಕಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಕೊಲಿಜಿಯಂ ಪ್ರಸ್ತಾಪಿಸಿದೆ.
from India & World News in Kannada | VK Polls https://ift.tt/2W6F0OO