ಬಸವರಾಜ ಬೊಮ್ಮಾಯಿಗೆ ಸಂಪುಟ ಸಂಕಷ್ಟ: ಉಳಿದ ನಾಲ್ಕು ಸ್ಥಾನಗಳ ಮೇಲೆ ಹಲವರ ಕಣ್ಣು!

ಬೆಂಗಳೂರು: ಮೊದಲ ಹಂತದ ಸಂಪುಟ ರಚನೆಯಾಗಿ ಖಾತೆ ಗೊಂದಲ ಬಗೆಹರಿಯುವ ಮುನ್ನವೇ ಇನ್ನುಳಿದ ನಾಲ್ಕು ಸಚಿವ ಸ್ಥಾನಗಳಿಗೆ ಪೈಪೋಟಿ ತೀವ್ರಗೊಂಡಿದೆ. ಸಂಪುಟದಲ್ಲಿ ಸೇರ್ಪಡೆಗೊಳ್ಳಲು ಸಾಕಷ್ಟು ಆಕಾಂಕ್ಷಿಗಳು ಯತ್ನ ನಡೆಸುತ್ತಿದ್ದಾರೆ. ಕೆಲವರು ರಾಜ್ಯಮಟ್ಟದಲ್ಲಿ ಪ್ರಯತ್ನ ನಡೆಸಿದರೆ ಮತ್ತೆ ಕೆಲವರು ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಮೊದಲ ಹಂತದಲ್ಲಿ 29 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಸದ್ಯ ಸಿಎಂ ಹೊರತು ಪಡಿಸಿ ನಾಲ್ಕು ಸಚಿವ ಸ್ಥಾನಗಳು ಬಾಕಿ ಉಳಿದಿವೆ. ಈ 4 ಸ್ಥಾನಗಳಿಗಾಗಿ ಸಚಿವಾಕಾಂಕ್ಷಿಗಳಿಂದ ಪೈಪೋಟಿ ತೀವ್ರಗೊಂಡಿದೆ. ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿದ್ದು ಇದೀಗ ಸ್ಥಾನ ಕಳೆದುಕೊಂಡಿರುವ ಸಿಪಿ ಯೋಗೀಶ್ವರ್‌ ಅವರು ಸಂಪುಟ ಸೇರಲು ತೀವ್ರ ರೀತಿಯ ಲಾಬಿ ನಡೆಸುತ್ತಿದ್ದಾರೆ. ಆದ್ರೆ ಅವರಿಗೆ ಸಿಗುವ ಸಾಧ್ಯತೆ ಸಾಕಷ್ಟು ಕಡಿಮೆ ಎಂದು ಮೂಲಗಳು ಹೇಳುತ್ತಿವೆ. ಬಿಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿದವರು ಪಟ್ಟಿಯಲ್ಲಿ ಇವರೂ ಇದ್ದು ಬಿಎಸ್‌ವೈ ಕುಟುಂಬದ ವಿರುದ್ಧ ಬಹಿರಂಗ ಆರೋಪ ಮಾಡಿದ್ದರು. ಅವರ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ ಕೂಡಾ ಲಾಬಿ ನಡೆಸುತ್ತಿದ್ದಾರೆ. ಇವರಷ್ಟೇ ಅಲ್ಲ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ, ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ, ಎಂಪಿ ರೇಣುಕಾಚಾರ್ಯ, ಪೂರ್ಣಿಮಾ ಶ್ರೀನಿವಾಸ್ ಹಾಗೂ ಇತರರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಆದರೆ ಅಂತಿಮವಾಗಿ ಈ ನಾಲ್ಕು ಸ್ಥಾನಗಳು ಯಾರಿಗೆ ಸಿಗಲಿದೆ ಎಂಬುವುದು ಸದ್ಯದ ಕುತೂಹಲ. ಆದರೆ ಸದ್ಯಕ್ಕೆ ಮಾಡುವ ನಿರ್ಧಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಕೈಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ.


from India & World News in Kannada | VK Polls https://ift.tt/3gcJWZz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...