ಸಂಪುಟ ರಚನೆ: ಈ ಬಾರಿಯೂ ಬಿಎಸ್‌ವೈ ಕೈಮೇಲಾಗುತ್ತಾ?

ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು ನೂತನ ಸಿಎಂ ಆಯ್ಕೆ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಕೈಮೇಲಾದ ರೀತಿಯಲ್ಲಿ ಸಂಪುಟ ರಚನೆಯ ಸಂದರ್ಭದಲ್ಲೂ ಆಗಲಿದೆಯಾ? ಎಂಬ ಪ್ರಶ್ನೆ ಉದ್ಭವವಾಗಿದೆ. ನೂತನ ಸಂಪುಟ ರಚನೆ ಮಾಡಲು ಅನುಮತಿಗಾಗಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ವರಿಷ್ಠರ ಜೊತೆ ಮಾತನಾಡಿ ಅನುಮತಿ ಪಡೆಯಲಿದ್ದಾರೆ. ಇದಕ್ಕೂ ಮುನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆಗೂ ಚರ್ಚೆ ನಡೆಸಿದ್ದರು. ಆದರೆ ಹೊಸ ಸಂಪುಟದಲ್ಲಿ ಸ್ಥಾನ ನೀಡುವ ವೇಳೆ ಯಡಿಯೂರಪ್ಪ ಅವರನ್ನು ಪರಿಗಣಿಸಲಾಗುತ್ತಾ? ಎಂಬುವುದು ಸದ್ಯದ ಕುತೂಹಲ. ವಲಸಿಗರು ಸೇರಿದಂತೆ ಯಡಿಯೂರಪ್ಪ ಸೂಚಿಸಿದವರಿಗೆ ಸಚಿವ ಸ್ಥಾನ ನೀಡಬೇಕಾಗುತ್ತದೆ. ಇದನ್ನು ಹೈಕಮಾಂಡ್ ಪರಿಗಣಿಸುತ್ತಾ ಎಂಬುವುದನ್ನು ಕಾದುನೋಡಬೇಕಿದೆ. ಸಂಪುಟ ರಚನೆ ಹಿನ್ನೆಲೆಯಲ್ಲಿ ಹಲವು ಆಕಾಂಕ್ಷಿಗಳು ಬಿಎಸ್‌ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದಾರೆ. ಎಂಪಿ ಕುಮಾರಸ್ವಾಮಿ ಅವರು ಬಿಎಸ್‌ವೈ ಜೊತೆಗೆ ಮಾತುಕತೆ ನಡೆಸಿದ್ದಾರೆ. ಮತ್ತೊಂದು ಕಡೆ ನೆಹರೂ ಓಲೆಕಾರ್ ಬೆಂಬಲಿಗರು ಯಡಿಯೂರಪ್ಪ ನಿವಾಸದ ಮುಂದೆಯೇ ಪ್ರತಿಭಟನೆ ನಡೆಸಿದ್ದಾರೆ. ಇವೆಲ್ಲವು ಕಾವೇರಿ ನಿವಾಸ ಪವರ್ ಸೆಂಟರ್‌ ಎಂಬುವುದನ್ನು ಬಿಂಬಿಸುತ್ತಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಿ ಯಾವುದೇ ನಿರ್ಧಾರವನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂಬುವುದಂತೂ ಸ್ಪಷ್ಟ. ವಲಸಿಗ ಶಾಸಕರು ಕೂಡಾ ಯಡಿಯೂರಪ್ಪ ಅವರನ್ನು ನಂಬಿಕೊಂಡು ಪಕ್ಷಕ್ಕೆ ಬಂದಿದ್ದಾರೆ. ಆದರೆ ಅವರಿಗೆ ಈ ಬಾರಿಯ ಸಂಪುಟದಲ್ಲಿ ಸ್ಥಾನ ಸಿಗುತ್ತಾ? ಎಂಬ ಪ್ರಶ್ನೆ ಇದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಅವರು ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ. ವಲಸಿಗರಿಗೆ ಅನ್ಯಾಯ ಆಗದಂತೆ ನಡೆದುಕೊಳ್ಳಬಾರದು ಎಂಬ ಸೂಚನೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್ ಇದನ್ನೆಲ್ಲಾ ಯಾವ ರೀತಿ ಪರಿಗಣಿಸಲಿದೆ ಎಂಬುವುದು ಸದ್ಯದ ಕುತೂಹಲ.


from India & World News in Kannada | VK Polls https://ift.tt/3C8My40

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...